ಬ್ರೇಕಿಂಗ್ ನ್ಯೂಸ್
02-12-23 04:25 pm HK News Desk ಕ್ರೈಂ
ಚೆನ್ನೈ, ಡಿ.02: ಸರ್ಕಾರಿ ನೌಕರರೊಬ್ಬರಿಂದ 20 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಜಾರಿ ನಿರ್ದೇಶನಾಲಯದ ಇ.ಡಿ ಅಧಿಕಾರಿಯನ್ನು ತಮಿಳುನಾಡಿನ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳ ದಿಂಡಿಗಲ್ ನಲ್ಲಿ ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಯನ್ನು ಅಂಕಿತ್ ತಿವಾರಿ ಎಂದು ಗುರುತಿಸಲಾಗಿದೆ. ತಿವಾರಿಗೆ ಕೋರ್ಟ್ ಡಿಸೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ತಿವಾರಿ ಬಂಧನದ ನಂತರ ದಿಂಡಿಗಲ್ ಜಿಲ್ಲಾ ವಿಜಿಲೆನ್ಸ್ ಮತ್ತು ಭ್ರಷ್ಟಾಚಾರ ನಿಗ್ರಹ ದಳ ಜಂಟಿಯಾಗಿ ಮದುರೈಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಶೋಧ ಕಾರ್ಯನಡೆಸಿರುವುದಾಗಿ ವರದಿ ವಿವರಿಸಿದೆ.
ಅಂಕಿತ್ ತಿವಾರಿ ಮನೆಯಲ್ಲಿಯೂ ಶೋಧ ಕಾರ್ಯ ನಡೆಸಲಾಗಿದೆ. ಈ ಪ್ರಕರಣದಲ್ಲಿ ಮದುರೈ ಮತ್ತು ಚೆನ್ನೈನ ಹಲವು ಅಧಿಕಾರಿಗಳು ಶಾಮೀಲಾಗಿರುವುದು ತನಿಖೆಯಲ್ಲಿ ತಿಳಿದು ಬಂದಿರುವುದಾಗಿ ಮೂಲಗಳು ಹೇಳಿವೆ.
ಜಾರಿ ನಿರ್ದೇಶನಾಲಯದ ಅಧಿಕಾರಿ ಅಂಕಿತ್ ತಿವಾರಿ ಹಲವಾರು ಜನರಿಗೆ ಬ್ಲ್ಯಾಕ್ ಮೇಲ್ ಮಾಡಿರುವ ಆರೋಪಗಳಿವೆ. ತಿವಾರಿ ಪಡೆದ ಲಂಚದ ಹಣ ಇತರ ಇ.ಡಿ. ಅಧಿಕಾರಿಗಳಿಗೂ ಹಂಚುತ್ತಿದ್ದ ಎಂದು ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ದಿಂಡಿಗಲ್ ನ ಸರ್ಕಾರಿ ನೌಕರರನ ವಿರುದ್ಧ ಜಿಲ್ಲಾ ವಿಜಿಲೆನ್ಸ್ & ಭ್ರಷ್ಟಾಚಾರ ನಿಗ್ರಹ ದಳ ಪ್ರಕರಣ ದಾಖಲಿಸಿದ್ದು, ಅದು ಕ್ಲೋಸ್ ಆಗಿತ್ತು. ಆದರೆ ಅಕ್ಟೋಬರ್ 29ರಂದು ಅಂಕಿತ್ ತಿವಾರಿ ನೌಕರನನ್ನು ಸಂಪರ್ಕಿಸಿ, ನಿಮ್ಮ ವಿರುದ್ಧ ದಾಖಲಾದ ಪ್ರಕರಣದ ಬಗ್ಗೆ ಇ.ಡಿ. ತನಿಖೆ ನಡೆಸಬೇಕೆಂದು ಪ್ರಧಾನ ಮಂತ್ರಿ ಕಚೇರಿಯಿಂದ ಆದೇಶ ಬಂದಿದೆ ಎಂದು ತಿಳಿಸಿದ್ದ.
ಈ ಹಿನ್ನೆಲೆಯಲ್ಲಿ ಅಕ್ಟೋಬರ್ 30ರಂದು ಮದುರೈಯಲ್ಲಿರುವ ಜಾರಿ ನಿರ್ದೇಶನಾಲಯದ ಕಚೇರಿಗೆ ಹಾಜರಾಗುವಂತೆ ತಿವಾರಿ ತಿಳಿಸಿದ್ದ. ನಿಗದಿತ ದಿನಾಂಕದಂದು ಸರ್ಕಾರಿ ನೌಕರ ಮದುರೈನ ಇ.ಡಿ. ಕಚೇರಿಗೆ ಹೋದಾಗ, ತನಿಖೆಯನ್ನು ಕ್ಲೋಸ್ ಮಾಡಲು 3 ಕೋಟಿ ರೂಪಾಯಿ ಲಂಚ ನೀಡಬೇಕೆಂದು ತಿವಾರಿ ಬೇಡಿಕೆ ಇಟ್ಟಿದ್ದ ಎಂದು ವರದಿ ವಿವರಿಸಿದೆ.
ಬಳಿಕ ತಾನು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಅವರು 51 ಲಕ್ಷ ರೂಪಾಯಿ ನೀಡುವಂತೆ ತಿಳಿಸಿರುವುದಾಗಿ ತಿವಾರಿ ಉದ್ಯೋಗಿಗೆ ಹೇಳಿದ್ದ.
ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇ.ಡಿ. ಅಧಿಕಾರಿ:
ಮಾತುಕತೆಯಂತೆ ನವೆಂಬರ್ 1ರಂದು ನೌಕರ ಮೊದಲ ಕಂತಿನ 20 ಲಕ್ಷ ರೂಪಾಯಿ ಲಂಚವನ್ನು ಅಂಕಿತ್ ತಿವಾರಿಗೆ ನೀಡಿದ್ದ. ಈ ಸಂದರ್ಭದಲ್ಲಿ ತಿವಾರಿ ಪೂರ್ಣ ಹಣವನ್ನು ಪಾವತಿಸಬೇಕು, ಒಂದು ವೇಳೆ ಹಣ ಕೊಡದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ನೌಕರನಿಗೆ ಬೆದರಿಕೆ ಹಾಕಿದ್ದ. ಆಗ ಸಂಶಯಗೊಂಡ ನೌಕರ ನವೆಂಬರ್ 30ರಂದು ದಿಂಡಿಗಲ್ ನ ಡಿವಿಎಸಿ ಅಧಿಕಾರಿಗಳಲ್ಲಿ ದೂರು ದಾಖಲಿಸಿದ್ದ.
ಅದರಂತೆ ಡಿಸೆಂಬರ್ 1ರಂದು ಸರ್ಕಾರಿ ನೌಕರನಿಂದ ಎರಡನೇ ಕಂತಿನ 20 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಅಂಕಿತ್ ತಿವಾರಿ ಜಿಲ್ಲಾ ವಿಜಿಲೆನ್ಸ್ & ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದಾಗಿ ವರದಿ ತಿಳಿಸಿದೆ.
Tamil Nadu police arrested an Enforcement Directorate (ED) officer after he was caught allegedly taking a bribe of Rs 20 lakh from a government employee in Dindigul. The officer, identified as Ankit Tiwari, was arrested by state vigilance and anti-corruption and has been sent to judicial custody till December 15.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm