ಬ್ರೇಕಿಂಗ್ ನ್ಯೂಸ್
02-12-23 08:19 pm Bangalore Correspondent ಕ್ರೈಂ
ಬೆಂಗಳೂರು, ಡಿ.02: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದೇಶದ ವಿವಿಧ ಭಾಗಗಳಲ್ಲಿ ನಕಲಿ ಭಾರತೀಯ ಕರೆನ್ಸಿ ನೋಟು ದಂಧೆ ಭೇದಿಸಲು ಬೆಂಗಳೂರು, ಬಳ್ಳಾರಿ ಸೇರಿ ನಾಲ್ಕು ರಾಜ್ಯಗಳಾದ್ಯಂತ ಏಕಕಾಲದಲ್ಲಿ ದಾಳಿ ನಡೆಸಿದ್ದು, ನಕಲಿ ನೋಟುಗಳ ಮುದ್ರಣ ಕಾಗದ, ಪ್ರಿಂಟರ್ಗಳು ಮತ್ತು ಡಿಜಿಟಲ್ ಗ್ಯಾಜೆಟ್ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಈ ವೇಳೆ ಪ್ರಮುಖ ಆರೋಪಿ ರಾಹುಲ್ ತಾನಾಜಿ ಎಂಬಾತನನ್ನು ಬಂಧಿಸಲಾಗಿದೆ. ಇನ್ನು ಬಳ್ಳಾರಿ ಜಿಲ್ಲೆಯಲ್ಲೂ ದಾಳಿ ನಡೆಸಿ ಓರ್ವನನ್ನು ಅರೆಸ್ಟ್ ಮಾಡಲಾಗಿದೆ. ಬಳ್ಳಾರಿ ಮೂಲದ ಮಹೇಂದರ್ ಬಂಧಿತ ಆರೋಪಿ. ಇತ ಮನೆಯಲ್ಲೇ 500, 200, 100 ರೂಪಾಯಿಯ ಮುಖಬೆಲೆಯ ನಕಲಿ ನೋಟು ತಯಾರಿಸುತ್ತಿದ್ದ. ಇದೀಗ ಪೊಲೀಸರು ನೋಟು ತಯಾರಿಸುವ ಪೇಪರ್, ಪ್ರಿಂಟಿಂಗ್ ಮಶಿನ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಉತ್ತರಪ್ರದೇಶ, ಬಿಹಾರ, ಮಹಾರಾಷ್ಟ್ರ, ಕರ್ನಾಟಕದಲ್ಲಿ ದಾಳಿ ನಡೆಸಲಾಗಿದೆ. ಈ ಪ್ರಕರಣವು ಶಂಕಿತರಿಂದ ರೂಪಿಸಲಾದ ದೊಡ್ಡ ಪಿತೂರಿಗೆ ಸಂಬಂಧಿಸಿದ್ದು, ಕೆಲವರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ನವೆಂಬರ್ 24 ರಂದು ದಾಖಲಿಸಲಾದ ಪ್ರಕರಣದಲ್ಲಿ ತನಿಖೆಯ ಭಾಗವಾಗಿ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಇನ್ನು ಕರ್ನಾಟಕದಲ್ಲಿ ನಕಲಿ ನೋಟುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಂತೆ ಇತ್ತೀಚೆಗೆ 100 ರೂಪಾಯಿ ಮುಖಬೆಲೆಯ ಒಟ್ಟು 30 ನಕಲಿ ನೋಟುಗಳು ಉಡುಪಿ , ಮಣಿಪಾಲ , ಹುಬ್ಬಳ್ಳಿ ಹಾಗು ಮಲ್ಲೇಶ್ವರ ಬ್ರಾಂಚ್ನ ಬ್ಯಾಂಕ್ ಗಳಲ್ಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 4 ಎಫ್ಐಆರ್ಗಳು ದಾಖಲಾಗಿದ್ದು, ಆರ್ಬಿಐಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ಈ ನಕಲಿ ನೋಟುಗಳು ಬೆಳಕಿಗೆ ಬಂದಿತ್ತು. ಇದೀಗ ನೋಟು ಪ್ರಿಂಟ್ ಮಾಡುವ ಜಾಲ ಪತ್ತೆಯಾಗಿದೆ.
NIA raid in Bangalore and Bellari including four States, busts fake currency racket. The operation was part of the NIA’s probe into a case pertaining to a conspiracy hatched by suspected individuals for trafficking of fake Indian currency notes across borders.
23-09-25 07:26 pm
Bangalore Correspondent
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am