ಬ್ರೇಕಿಂಗ್ ನ್ಯೂಸ್
02-12-23 08:19 pm Bangalore Correspondent ಕ್ರೈಂ
ಬೆಂಗಳೂರು, ಡಿ.02: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದೇಶದ ವಿವಿಧ ಭಾಗಗಳಲ್ಲಿ ನಕಲಿ ಭಾರತೀಯ ಕರೆನ್ಸಿ ನೋಟು ದಂಧೆ ಭೇದಿಸಲು ಬೆಂಗಳೂರು, ಬಳ್ಳಾರಿ ಸೇರಿ ನಾಲ್ಕು ರಾಜ್ಯಗಳಾದ್ಯಂತ ಏಕಕಾಲದಲ್ಲಿ ದಾಳಿ ನಡೆಸಿದ್ದು, ನಕಲಿ ನೋಟುಗಳ ಮುದ್ರಣ ಕಾಗದ, ಪ್ರಿಂಟರ್ಗಳು ಮತ್ತು ಡಿಜಿಟಲ್ ಗ್ಯಾಜೆಟ್ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಈ ವೇಳೆ ಪ್ರಮುಖ ಆರೋಪಿ ರಾಹುಲ್ ತಾನಾಜಿ ಎಂಬಾತನನ್ನು ಬಂಧಿಸಲಾಗಿದೆ. ಇನ್ನು ಬಳ್ಳಾರಿ ಜಿಲ್ಲೆಯಲ್ಲೂ ದಾಳಿ ನಡೆಸಿ ಓರ್ವನನ್ನು ಅರೆಸ್ಟ್ ಮಾಡಲಾಗಿದೆ. ಬಳ್ಳಾರಿ ಮೂಲದ ಮಹೇಂದರ್ ಬಂಧಿತ ಆರೋಪಿ. ಇತ ಮನೆಯಲ್ಲೇ 500, 200, 100 ರೂಪಾಯಿಯ ಮುಖಬೆಲೆಯ ನಕಲಿ ನೋಟು ತಯಾರಿಸುತ್ತಿದ್ದ. ಇದೀಗ ಪೊಲೀಸರು ನೋಟು ತಯಾರಿಸುವ ಪೇಪರ್, ಪ್ರಿಂಟಿಂಗ್ ಮಶಿನ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಉತ್ತರಪ್ರದೇಶ, ಬಿಹಾರ, ಮಹಾರಾಷ್ಟ್ರ, ಕರ್ನಾಟಕದಲ್ಲಿ ದಾಳಿ ನಡೆಸಲಾಗಿದೆ. ಈ ಪ್ರಕರಣವು ಶಂಕಿತರಿಂದ ರೂಪಿಸಲಾದ ದೊಡ್ಡ ಪಿತೂರಿಗೆ ಸಂಬಂಧಿಸಿದ್ದು, ಕೆಲವರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ನವೆಂಬರ್ 24 ರಂದು ದಾಖಲಿಸಲಾದ ಪ್ರಕರಣದಲ್ಲಿ ತನಿಖೆಯ ಭಾಗವಾಗಿ ಈ ದಾಳಿಗಳನ್ನು ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ
ಇನ್ನು ಕರ್ನಾಟಕದಲ್ಲಿ ನಕಲಿ ನೋಟುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಂತೆ ಇತ್ತೀಚೆಗೆ 100 ರೂಪಾಯಿ ಮುಖಬೆಲೆಯ ಒಟ್ಟು 30 ನಕಲಿ ನೋಟುಗಳು ಉಡುಪಿ , ಮಣಿಪಾಲ , ಹುಬ್ಬಳ್ಳಿ ಹಾಗು ಮಲ್ಲೇಶ್ವರ ಬ್ರಾಂಚ್ನ ಬ್ಯಾಂಕ್ ಗಳಲ್ಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳಲ್ಲಿ 4 ಎಫ್ಐಆರ್ಗಳು ದಾಖಲಾಗಿದ್ದು, ಆರ್ಬಿಐಗೆ ರಿಮೀಟ್ ಮಾಡುವ ಸಂದರ್ಭದಲ್ಲಿ ಈ ನಕಲಿ ನೋಟುಗಳು ಬೆಳಕಿಗೆ ಬಂದಿತ್ತು. ಇದೀಗ ನೋಟು ಪ್ರಿಂಟ್ ಮಾಡುವ ಜಾಲ ಪತ್ತೆಯಾಗಿದೆ.
NIA raid in Bangalore and Bellari including four States, busts fake currency racket. The operation was part of the NIA’s probe into a case pertaining to a conspiracy hatched by suspected individuals for trafficking of fake Indian currency notes across borders.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm