ಬ್ರೇಕಿಂಗ್ ನ್ಯೂಸ್
07-12-23 05:56 pm HK News Desk ಕ್ರೈಂ
ಗಾಜಿಯಾಬಾದ್, ಡಿ.7: ಮದುವೆ ಸಮಾರಂಭದಲ್ಲಿ ವೈಟರ್ ಒಯ್ಯುತ್ತಿದ್ದ ಊಟದ ತಟ್ಟೆ ಅತಿಥಿಗಳಿಗೆ ತಾಗಿದ ಕಾರಣಕ್ಕೆ ಆತನನ್ನು ಯುವಕರು ಸೇರಿಕೊಂಡು ಹೊಡೆದು ಕೊಲೆಗೈದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನವೆಂಬರ್ 17ರಂದು ಘಟನೆ ನಡೆದಿದ್ದು, ಪಂಕಜ್(26) ಕೊಲೆಯಾದ ಯುವಕ. ಘಟನೆಯ ಬೆನ್ನತ್ತಿದ ಪೊಲೀಸರು ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ. ಗಾಜಿಯಾಬಾದ್ ನಗರದ ಸಿಜಿಎಸ್ ವಾಟಿಕಾ ಗೆಸ್ಟ್ ಹೌಸ್ ನಲ್ಲಿ ವೇಟರ್ ಆಗಿ ಕೆಲಸ ಮಾಡಿಕೊಂಡಿದ್ದ ಪಂಕಜ್ ನ.17ರಂದು ಕೆಲಸಕ್ಕೆ ಹೋಗಿದ್ದು ಮರಳಿ ಬಂದಿರಲಿಲ್ಲ. ಈ ಬಗ್ಗೆ ಪಂಕಜ್ ತಾಯಿ ಪೊಲೀಸ್ ದೂರು ನೀಡಿದ್ದರು. ಗೆಸ್ಟ್ ಹೌಸ್ ನಲ್ಲಿ ವೇಟರ್ ಕೆಲಸ ಮಾಡಿಕೊಂಡಿದ್ದ ಬಗ್ಗೆ ಮತ್ತು ನ.17ರಂದು ಮದುವೆ ಸಮಾರಂಭ ಆಯೋಜಿಸಿದ್ದ ಬಗ್ಗೆ ಮಾಹಿತಿ ನೀಡಿದ್ದರು.
ಪೊಲೀಸರ ವಿಚಾರಣೆಯಲ್ಲಿ ಗೆಸ್ಟ್ ಹೌಸ್ ಕಂಟ್ರಾಕ್ಟರ್ ಮನೋಜ್ ಗುಪ್ತಾ ಸೇರಿದಂತೆ ನಾಲ್ವರು ಕೊಲೆಗೈದಿರುವುದು ತಿಳಿದುಬಂದಿದೆ. ಬಳಸಿದ ಊಟದ ತಟ್ಟೆಗಳನ್ನು ಒಯ್ಯುತ್ತಿದ್ದಾಗ ಅತಿಥಿಗಳ ಮೈಗೆ ಮುಟ್ಟಿದ ವಿಚಾರದಲ್ಲಿ ಯುವಕರ ಮಧ್ಯೆ ಮಾತಿಗೆ ಮಾತು ಬೆಳೆದಿತ್ತು. ಆನಂತರ, ವೇಟರ್ ಪಂಕಜ್ ತಲೆಯ ಭಾಗಕ್ಕೆ ಹೊಡೆದಿದ್ದರು. ನೆಲಕ್ಕೆ ಕುಸಿದು ಬಿದ್ದಿದ್ದ ಪಂಕಜ್ ಮೃತಪಟ್ಟಿದ್ದಾನೆಂದು ತಿಳಿದು ಪಕ್ಕದ ಕಾಡಿನಲ್ಲಿ ದೇಹವನ್ನು ಎಸೆದು ಹೋಗಿದ್ದರು. ತನಿಖೆ ನಡೆಸಿದ ಪೊಲೀಸರು ಪಂಕಜ್ ಮೃತದೇಹ ಪತ್ತೆ ಮಾಡಿದ್ದರು. ಪೋಸ್ಟ್ ಮಾರ್ಟಂ ವರದಿಯಲ್ಲಿ ತಲೆಗೆ ಆಳವಾದ ಗಾಯವಾಗಿದ್ದು ತಿಳಿದುಬಂದಿತ್ತು. ಇದರ ಆಧಾರದಲ್ಲಿ ತನಿಖೆ ನಡೆಸಿದ ಪೊಲೀಸರು ಮನೋಜ್ ಗುಪ್ತಾ, ಅಮಿತ್ ಕುಮಾರ್ ಸೇರಿ ಮೂವರನ್ನು ಕಸ್ಟಡಿಗೆ ಪಡೆದಿದ್ದಾರೆ.
An argument over a tray carrying used plates touching the guests at a wedding led to the death of a 26-year-old waiter in Ghaziabad, the police said on Wednesday. The incident took place at the CGS Vatika guest house on Pusta Road in Ghaziabad on the evening of November 17, the police said.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm