ಬ್ರೇಕಿಂಗ್ ನ್ಯೂಸ್
07-12-23 05:56 pm HK News Desk ಕ್ರೈಂ
ಗಾಜಿಯಾಬಾದ್, ಡಿ.7: ಮದುವೆ ಸಮಾರಂಭದಲ್ಲಿ ವೈಟರ್ ಒಯ್ಯುತ್ತಿದ್ದ ಊಟದ ತಟ್ಟೆ ಅತಿಥಿಗಳಿಗೆ ತಾಗಿದ ಕಾರಣಕ್ಕೆ ಆತನನ್ನು ಯುವಕರು ಸೇರಿಕೊಂಡು ಹೊಡೆದು ಕೊಲೆಗೈದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ನಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನವೆಂಬರ್ 17ರಂದು ಘಟನೆ ನಡೆದಿದ್ದು, ಪಂಕಜ್(26) ಕೊಲೆಯಾದ ಯುವಕ. ಘಟನೆಯ ಬೆನ್ನತ್ತಿದ ಪೊಲೀಸರು ಕೊಲೆ ಆರೋಪಿಗಳನ್ನು ಬಂಧಿಸಿದ್ದಾರೆ. ಗಾಜಿಯಾಬಾದ್ ನಗರದ ಸಿಜಿಎಸ್ ವಾಟಿಕಾ ಗೆಸ್ಟ್ ಹೌಸ್ ನಲ್ಲಿ ವೇಟರ್ ಆಗಿ ಕೆಲಸ ಮಾಡಿಕೊಂಡಿದ್ದ ಪಂಕಜ್ ನ.17ರಂದು ಕೆಲಸಕ್ಕೆ ಹೋಗಿದ್ದು ಮರಳಿ ಬಂದಿರಲಿಲ್ಲ. ಈ ಬಗ್ಗೆ ಪಂಕಜ್ ತಾಯಿ ಪೊಲೀಸ್ ದೂರು ನೀಡಿದ್ದರು. ಗೆಸ್ಟ್ ಹೌಸ್ ನಲ್ಲಿ ವೇಟರ್ ಕೆಲಸ ಮಾಡಿಕೊಂಡಿದ್ದ ಬಗ್ಗೆ ಮತ್ತು ನ.17ರಂದು ಮದುವೆ ಸಮಾರಂಭ ಆಯೋಜಿಸಿದ್ದ ಬಗ್ಗೆ ಮಾಹಿತಿ ನೀಡಿದ್ದರು.
ಪೊಲೀಸರ ವಿಚಾರಣೆಯಲ್ಲಿ ಗೆಸ್ಟ್ ಹೌಸ್ ಕಂಟ್ರಾಕ್ಟರ್ ಮನೋಜ್ ಗುಪ್ತಾ ಸೇರಿದಂತೆ ನಾಲ್ವರು ಕೊಲೆಗೈದಿರುವುದು ತಿಳಿದುಬಂದಿದೆ. ಬಳಸಿದ ಊಟದ ತಟ್ಟೆಗಳನ್ನು ಒಯ್ಯುತ್ತಿದ್ದಾಗ ಅತಿಥಿಗಳ ಮೈಗೆ ಮುಟ್ಟಿದ ವಿಚಾರದಲ್ಲಿ ಯುವಕರ ಮಧ್ಯೆ ಮಾತಿಗೆ ಮಾತು ಬೆಳೆದಿತ್ತು. ಆನಂತರ, ವೇಟರ್ ಪಂಕಜ್ ತಲೆಯ ಭಾಗಕ್ಕೆ ಹೊಡೆದಿದ್ದರು. ನೆಲಕ್ಕೆ ಕುಸಿದು ಬಿದ್ದಿದ್ದ ಪಂಕಜ್ ಮೃತಪಟ್ಟಿದ್ದಾನೆಂದು ತಿಳಿದು ಪಕ್ಕದ ಕಾಡಿನಲ್ಲಿ ದೇಹವನ್ನು ಎಸೆದು ಹೋಗಿದ್ದರು. ತನಿಖೆ ನಡೆಸಿದ ಪೊಲೀಸರು ಪಂಕಜ್ ಮೃತದೇಹ ಪತ್ತೆ ಮಾಡಿದ್ದರು. ಪೋಸ್ಟ್ ಮಾರ್ಟಂ ವರದಿಯಲ್ಲಿ ತಲೆಗೆ ಆಳವಾದ ಗಾಯವಾಗಿದ್ದು ತಿಳಿದುಬಂದಿತ್ತು. ಇದರ ಆಧಾರದಲ್ಲಿ ತನಿಖೆ ನಡೆಸಿದ ಪೊಲೀಸರು ಮನೋಜ್ ಗುಪ್ತಾ, ಅಮಿತ್ ಕುಮಾರ್ ಸೇರಿ ಮೂವರನ್ನು ಕಸ್ಟಡಿಗೆ ಪಡೆದಿದ್ದಾರೆ.
An argument over a tray carrying used plates touching the guests at a wedding led to the death of a 26-year-old waiter in Ghaziabad, the police said on Wednesday. The incident took place at the CGS Vatika guest house on Pusta Road in Ghaziabad on the evening of November 17, the police said.
23-09-25 07:26 pm
Bangalore Correspondent
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
ಪಂಚಮಸಾಲಿ ಲಿಂಗಾಯತರಲ್ಲಿ ಮತ್ತೆ ಒಡಕು ; ಲಿಂಗಾಯತ ಪೀ...
21-09-25 10:23 pm
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
23-09-25 11:01 pm
Mangalore Correspondent
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡೀಪ...
23-09-25 05:49 pm
ದಸರಾ ನಂಬಿಕೆ, ಒಗ್ಗಟ್ಟಿನ ಪ್ರತೀಕ ; ಎನ್ಎಂಪಿಎ ಅಧ್ಯ...
22-09-25 10:08 pm
ಜಿಎಸ್ಟಿ 2.0 ಜನಸಾಮಾನ್ಯರ ಹಿತದೃಷ್ಟಿಯಿಂದ ತೆರಿಗೆ ಸ...
22-09-25 04:09 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am