ಬ್ರೇಕಿಂಗ್ ನ್ಯೂಸ್
17-11-20 12:54 pm Bangalore Correspondant ಕ್ರೈಂ
ಬೆಂಗಳೂರು, ನ. 16: ಬಸ್ಗಾಗಿ ಕಾಯುತ್ತಿದ್ದ ಪ್ರಯಾಣಿಕರನ್ನು ಡ್ರಾಪ್ ಕೊಡುವ ನೆಪದಲ್ಲಿ ಕಾರಿನಲ್ಲಿ ಕರೆದೊಯ್ದು ಸುಲಿಗೆ ಮಾಡುತ್ತಿದ್ದ ಕುಖ್ಯಾತ ಬಂಧಿಸಲಾಗಿದೆ. ಈ ಬಗ್ಗೆ ಕೊಡಿಗೇಹಳ್ಳಿ ಮತ್ತು ಅಮೃತಹಳ್ಳಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತ ಸಿ.ಕೆ ಬಾಬಾ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ತಂಡವು ಆರೋಪಗಳನ್ನು ಪತ್ತೆ ಹಚ್ಚಿ ಬಂಧಿಸಿದೆ.
ಬಂಧಿತರನ್ನು ಶಿವಮೊಗ್ಗ ಮೂಲದ ಆನಂದಪುರದ ಶೇಕ್ ಶಾಹಿದ್ ಅಹಮ್ಮದ್ ಅಲಿಯಾಸ್ ಶಾಹೀದ್ ಬಿನ್ ಶೇಕ್ ನೂರುಲ್ಲಾ(23 ವರ್ಷ) ಹಾಗೂ ಅತೀಖ್(20 ವರ್ಷ) ಎಂದು ಗುರುತಿಸಲಾಗಿದೆ. ಯಲಹಂಕ ಉಪ ವಿಭಾಗದ ಎಸಿಪಿ ಆರ್ ಜಯರಾಂ, ಕೊಡಿಗೇಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ರಾಘವೇಂದ್ರ ಬಾಬು, ಪಿಎಸ್ಐ ಶ್ರೀನಿವಾಸ್ ಶಿರೂರ್, ಪಿಎಸ್ಐ ದೇವಕಿ ಮತ್ತು ಸಿಬ್ಬಂದಿಯವರನ್ನೊಳಗೊಂಡ ತಂಡವು ಈ ಶಾಹಿದ್ ಗ್ಯಾಂಗಿನ ಇಬ್ಬರನ್ನು ಬಂಧಿಸಿದೆ.
ಶೇಕ್ ಶಾಹಿದ್ ಅಹಮ್ಮದ್ ಅಲಿಯಾಸ್ ಶಾಹೀದ್ ಬಿನ್ ಶೇಕ್ ಮೇಲೆ ಈಗಾಗಲೇ 2018ನೇ ಸಾಲಿನಲ್ಲಿ ಕೊಡಿಗೇಹಳ್ಳಿಯಲ್ಲಿ 4 ಮತ್ತು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ 1 ಪ್ರಕರಣದಲ್ಲಿ ದಸ್ತಗಿರಿ ಮಾಡಿ ಜೈಲಿಗೆ ಕಳುಹಿಸಲಾಗಿತ್ತು. ಜೈಲಿನಿಂದ ಬಿಡುಗಡೆಯಾದ ಮೇಲೆ ಮತ್ತೊಂದು ತಂಡ ಕಟ್ಟಿಕೊಂಡು ಸುಲಿಗೆ ಮಾಡುತ್ತಿರುತ್ತಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಾಹಿದ್ ಗ್ಯಾಂಗ್ ದಸ್ತಗಿರಿ ಪಡಿಸಿ 8,40,000 ರೂ ಬೆಲೆ ಬಾಳುವ 30 ಗ್ರಾಂ ತೂಕದ ಚಿನ್ನದ ಒಡವೆಗಳು, ಒಂದು ಐ ಪೋನ್ ಮತ್ತು 2 ಕಾರ್ಗಳನ್ನು ವಶಪಡಿಸಿಕೊಂಡಿದ್ದು ಆರೋಪಿತರ ಬಂಧನದಿಂದ ಕೊಡಿಗೇಹಳ್ಳಿ ಪೊಲೀಸ್ ಠಾಣೆಯ 3 ಮತ್ತು ಅಮೃತಹಳ್ಳಿ ಪೊಲೀಸ್ ಠಾಣೆಯ 1 ಪ್ರಕರಣ ಸೇರಿದಂತೆ 4 ಸುಲಿಗೆ ಪ್ರಕರಣಗಳು ಪತ್ತೆಯಾಗಿರುತ್ತವೆ. ಶಾಸ್ತ್ರಿ ಗ್ಯಾಂಗಿನ ಆರೋಪಿತರಿಂದ ಸುಮಾರು 1,50,000/- ರೂ ಬೆಲೆ ಬಾಳುವ 7 ಗ್ರಾಂ ತೂಕದ ಚಿನ್ನದ ಉಂಗುರ ಮತ್ತು ಒಂದು ಮೊಬೈಲ್ ಹಾಗೂ ಹೋಂಡ ಆಕ್ಟಿವಾ ವಶಪಡಿಸಿಕೊಂಡಿದ್ದು ಆರೋಪಿತರ ಬಂಧನದಿಂದ ಕೊಡಿಗೇಹಳ್ಳಿ ಪೊಲೀಸ್ ಠಾಣೆಯ 1 ಸುಲಿಗೆ ಪ್ರಕರಣಗಳ ಮತ್ತು ಸಂಜಯನಗರದ 1 ಕೊಲೆ ಯತ್ನ ಪ್ರಕರಣ ಪತ್ತೆಯಾಗಿರುತ್ತದೆ.
ಕಳ್ಳತನ ಶೈಲಿ:
ಆರೋಪಿತರು ರಾತ್ರಿ ಸಮಯದಲ್ಲಿ ಆಕ್ಟಿವಾ ಹೋಂಡಾ ಅಥವಾ ಡಿಯೋ ಬೈಕ್ಗಳಲ್ಲಿ, ಬೈಕ್ನಲ್ಲಿ ಹೋಗುವವ ಸಾರ್ವಜನಿಕರು ಹಿಂಬಾಲಿಸಿ, ಅಡ್ಡಗಟ್ಟಿ ಚಾಕುವಿನಿಂದ ಚುಚ್ಚಿ ಅವರ ಬಳಿ ಇರುವಂತಹ ಬೆಲೆಬಾಳುವ ಚಿನ್ನದ ಒಡವೆಗಳು, ಹಣ ಮತ್ತು ಮೊಬೈಲ್ಗಳನ್ನು ಕಿತ್ತುಕೊಂಡು ಹೋಗುವ ಚಾಳಿಯುಳ್ಳವರಾಗಿರುತ್ತಾರೆ. ವಿನ್ಸೆಂಟ್ ಬಾಬು ಮತ್ತು ಆಕಾಶ್ ಎನ್ ನಾಯ್ಡು ವಿರುದ್ದ ವಿದ್ಯಾರಣ್ಯಪುರ ಪೊಲೀಸ್ ಠಾಣೆಯ ಪ್ರಕರಣಗಳಲ್ಲಿ ದಸ್ತಗಿರಿ ಮಾಡಿದ್ದು, ಜೈಲಿನಿಂದ ಬಿಡುಗಡೆಯಾದ ನಂತರ, ತನ್ನ ಸಹಚರರೊಂದಿಗೆ ಹೆದ್ದಾರಿಯಲ್ಲಿ ಸುಲಿಗೆ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
The Bengaluru police arrested the notorious Shastri robbery gang targeting people on the highways and the city outskirts. Police recovered a car, cash and other material.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm