ಬ್ರೇಕಿಂಗ್ ನ್ಯೂಸ್
09-12-23 10:33 pm Mangaluru correspondent ಕ್ರೈಂ
ಮಂಗಳೂರು, ಡಿ.9: ಬಂಟ್ವಾಳ ತಾಲೂಕು ಕಡೇಶ್ವಾಲ್ಯ ಗ್ರಾಮದ ಅಮೈ ಎಂಬಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯಿಂದ ಡಾಮಾರು ಲೋಡ್ ಮಾಡಿಕೊಂಡು ಬಂದ ಟ್ಯಾಂಕರ್ಗಳಿಂದ, ಅಕ್ರಮವಾಗಿ ಬೇರೆ ಟ್ಯಾಂಕರ್ಗಳಿಗೆ ಡಾಮರು ವರ್ಗಾಯಿಸುತ್ತಿದ್ದಾಗ, ಪೊಲೀಸರು ದಾಳಿ ನಡೆಸಿ ಎಂಟು ಮಂದಿಯನ್ನು ಬಂಧಿಸಿದ್ದಾರೆ.
ಸಿ.ಇ.ಎನ್ ಅಪರಾಧ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಂಜುನಾಥ್ ಟಿ ಮತ್ತು ಸಿಬ್ಬಂದಿಗಳ ತಂಡ ದಾಳಿ ನಡೆಸಿದ್ದು ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದು, ವಿಚಾರಿಸಿದಾಗ ಉಡುಪಿಯ ವಿಜಯಕುಮಾರ್ ಶೆಟ್ಟಿ ಅಕ್ರಮ ಜಾಲದ ರೂವಾರಿ ಎನ್ನುವುದು ತಿಳಿದುಬಂದಿತ್ತು. ಆತನ ಸೂಚನೆಯಂತೆ, ಬಂಟ್ವಾಳ ಕಡೇಶ್ವಾಲ್ಯ ಗ್ರಾಮದ ಸುಧಾಕರ ಶೆಟ್ಟಿ@ಸುಧಾಕರ ಕೊಟ್ಟಾರಿ ಎಂಬವರೊಂದಿಗೆ ಸೇರಿ ಈ ಕೃತ್ಯವನ್ನು ನಡೆಸುತ್ತಿರುವುದು ಬೆಳಕಿಗೆ ಬಂದಿರುತ್ತದೆ.
ಮುಂದಿನ ಕಾನೂನು ಕ್ರಮಕ್ಕಾಗಿ ಸ್ಥಳದಲ್ಲಿದ್ದ AP03X6149, KL43C3968, KA19AC4077, KA19AC8686, KA19AA7342, KA19AD6595 ನೋಂದಣಿ ಸಂಖ್ಯೆಯ ಟ್ಯಾಂಕರ್ ಲಾರಿಗಳನ್ನು, ಡಾಮಾರ್ ಕಳ್ಳತನ ಮಾಡಲು ಉಪಯೋಗಿಸಿದ ವಸ್ತುಗಳನ್ನು ವಶಪಡಿಸಿದ್ದಾರೆ. ತೂಕ ಮಾಪನ -1, ಡಾಮಾರ್ ಬಿಸಿ ಮಾಡಲು ಉಪಯೋಗಿಸಿದ ಗ್ಯಾಸ್ ಸಿಲಿಂಡರ್ -1, ಡಾಮಾರ್ ತುಂಬಿಸಲು ಬಳಸಿರುವ ಕಬ್ಬಿಣದ ಟ್ಯಾಂಕ್ -1, ಆರೋಪಿಗಳ ವಶದಲ್ಲಿದ್ದ 9 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ವಿಜಯ ಕುಮಾರ್ ಶೆಟ್ಟಿ, ಸುಧಾಕರ ಶೆಟ್ಟಿ @ಸುಧಾಕರ, ಮಹಮ್ಮದ್ ಇಮ್ರಾನ್, ಅಶ್ರಪ್ ಎಂ., ವೀರೇಂದ್ರ ಎಸ್.ಆರ್, ಮಾದಸ್ವಾಮಿ, ಪ್ರಭಾಕರನ್, ನವೀನ್ ಕುಮಾರ್, ಮಹಮ್ಮದ್ ನಿಸಾರ್, ಮಹಮ್ಮದ್ ಸಿಹಾಬುದ್ದೀನ್ ಎಂಬವರು ಬಂಧಿತರು.
ಇವರ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 122/2023 ಕಲಂ : 379, 417, 420, 285 ಭಾ.ದ.ಸಂ ಮತ್ತು ಕಲಂ: 23 ಪೆಟ್ರೋಲಿಯಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Ten people were arrested for transferring tar from tankers brought by a private factory. The illicit transfer of tar was taking place at Amai village in Kadleshwalya in the night on Friday December 8. The tar was being transferred from tankers brought by the private company.
16-06-25 02:56 pm
HK News Desk
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 05:07 pm
Mangalore Correspondent
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
Mangalore Fire, Deralakatte Hostel, Rain: ಜಡಿ...
15-06-25 11:04 pm
Kadri Kaibattal, Mangalore Rain, Landslide: ಕ...
15-06-25 09:50 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm