ಬ್ರೇಕಿಂಗ್ ನ್ಯೂಸ್
09-12-23 10:33 pm Mangaluru correspondent ಕ್ರೈಂ
ಮಂಗಳೂರು, ಡಿ.9: ಬಂಟ್ವಾಳ ತಾಲೂಕು ಕಡೇಶ್ವಾಲ್ಯ ಗ್ರಾಮದ ಅಮೈ ಎಂಬಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯಿಂದ ಡಾಮಾರು ಲೋಡ್ ಮಾಡಿಕೊಂಡು ಬಂದ ಟ್ಯಾಂಕರ್ಗಳಿಂದ, ಅಕ್ರಮವಾಗಿ ಬೇರೆ ಟ್ಯಾಂಕರ್ಗಳಿಗೆ ಡಾಮರು ವರ್ಗಾಯಿಸುತ್ತಿದ್ದಾಗ, ಪೊಲೀಸರು ದಾಳಿ ನಡೆಸಿ ಎಂಟು ಮಂದಿಯನ್ನು ಬಂಧಿಸಿದ್ದಾರೆ.
ಸಿ.ಇ.ಎನ್ ಅಪರಾಧ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಂಜುನಾಥ್ ಟಿ ಮತ್ತು ಸಿಬ್ಬಂದಿಗಳ ತಂಡ ದಾಳಿ ನಡೆಸಿದ್ದು ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದು, ವಿಚಾರಿಸಿದಾಗ ಉಡುಪಿಯ ವಿಜಯಕುಮಾರ್ ಶೆಟ್ಟಿ ಅಕ್ರಮ ಜಾಲದ ರೂವಾರಿ ಎನ್ನುವುದು ತಿಳಿದುಬಂದಿತ್ತು. ಆತನ ಸೂಚನೆಯಂತೆ, ಬಂಟ್ವಾಳ ಕಡೇಶ್ವಾಲ್ಯ ಗ್ರಾಮದ ಸುಧಾಕರ ಶೆಟ್ಟಿ@ಸುಧಾಕರ ಕೊಟ್ಟಾರಿ ಎಂಬವರೊಂದಿಗೆ ಸೇರಿ ಈ ಕೃತ್ಯವನ್ನು ನಡೆಸುತ್ತಿರುವುದು ಬೆಳಕಿಗೆ ಬಂದಿರುತ್ತದೆ.
ಮುಂದಿನ ಕಾನೂನು ಕ್ರಮಕ್ಕಾಗಿ ಸ್ಥಳದಲ್ಲಿದ್ದ AP03X6149, KL43C3968, KA19AC4077, KA19AC8686, KA19AA7342, KA19AD6595 ನೋಂದಣಿ ಸಂಖ್ಯೆಯ ಟ್ಯಾಂಕರ್ ಲಾರಿಗಳನ್ನು, ಡಾಮಾರ್ ಕಳ್ಳತನ ಮಾಡಲು ಉಪಯೋಗಿಸಿದ ವಸ್ತುಗಳನ್ನು ವಶಪಡಿಸಿದ್ದಾರೆ. ತೂಕ ಮಾಪನ -1, ಡಾಮಾರ್ ಬಿಸಿ ಮಾಡಲು ಉಪಯೋಗಿಸಿದ ಗ್ಯಾಸ್ ಸಿಲಿಂಡರ್ -1, ಡಾಮಾರ್ ತುಂಬಿಸಲು ಬಳಸಿರುವ ಕಬ್ಬಿಣದ ಟ್ಯಾಂಕ್ -1, ಆರೋಪಿಗಳ ವಶದಲ್ಲಿದ್ದ 9 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ವಿಜಯ ಕುಮಾರ್ ಶೆಟ್ಟಿ, ಸುಧಾಕರ ಶೆಟ್ಟಿ @ಸುಧಾಕರ, ಮಹಮ್ಮದ್ ಇಮ್ರಾನ್, ಅಶ್ರಪ್ ಎಂ., ವೀರೇಂದ್ರ ಎಸ್.ಆರ್, ಮಾದಸ್ವಾಮಿ, ಪ್ರಭಾಕರನ್, ನವೀನ್ ಕುಮಾರ್, ಮಹಮ್ಮದ್ ನಿಸಾರ್, ಮಹಮ್ಮದ್ ಸಿಹಾಬುದ್ದೀನ್ ಎಂಬವರು ಬಂಧಿತರು.
ಇವರ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 122/2023 ಕಲಂ : 379, 417, 420, 285 ಭಾ.ದ.ಸಂ ಮತ್ತು ಕಲಂ: 23 ಪೆಟ್ರೋಲಿಯಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Ten people were arrested for transferring tar from tankers brought by a private factory. The illicit transfer of tar was taking place at Amai village in Kadleshwalya in the night on Friday December 8. The tar was being transferred from tankers brought by the private company.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm