ಬ್ರೇಕಿಂಗ್ ನ್ಯೂಸ್
09-12-23 10:33 pm Mangaluru correspondent ಕ್ರೈಂ
ಮಂಗಳೂರು, ಡಿ.9: ಬಂಟ್ವಾಳ ತಾಲೂಕು ಕಡೇಶ್ವಾಲ್ಯ ಗ್ರಾಮದ ಅಮೈ ಎಂಬಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯಿಂದ ಡಾಮಾರು ಲೋಡ್ ಮಾಡಿಕೊಂಡು ಬಂದ ಟ್ಯಾಂಕರ್ಗಳಿಂದ, ಅಕ್ರಮವಾಗಿ ಬೇರೆ ಟ್ಯಾಂಕರ್ಗಳಿಗೆ ಡಾಮರು ವರ್ಗಾಯಿಸುತ್ತಿದ್ದಾಗ, ಪೊಲೀಸರು ದಾಳಿ ನಡೆಸಿ ಎಂಟು ಮಂದಿಯನ್ನು ಬಂಧಿಸಿದ್ದಾರೆ.
ಸಿ.ಇ.ಎನ್ ಅಪರಾಧ ಠಾಣೆಯ ಪೊಲೀಸ್ ಉಪನಿರೀಕ್ಷಕ ಮಂಜುನಾಥ್ ಟಿ ಮತ್ತು ಸಿಬ್ಬಂದಿಗಳ ತಂಡ ದಾಳಿ ನಡೆಸಿದ್ದು ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದು, ವಿಚಾರಿಸಿದಾಗ ಉಡುಪಿಯ ವಿಜಯಕುಮಾರ್ ಶೆಟ್ಟಿ ಅಕ್ರಮ ಜಾಲದ ರೂವಾರಿ ಎನ್ನುವುದು ತಿಳಿದುಬಂದಿತ್ತು. ಆತನ ಸೂಚನೆಯಂತೆ, ಬಂಟ್ವಾಳ ಕಡೇಶ್ವಾಲ್ಯ ಗ್ರಾಮದ ಸುಧಾಕರ ಶೆಟ್ಟಿ@ಸುಧಾಕರ ಕೊಟ್ಟಾರಿ ಎಂಬವರೊಂದಿಗೆ ಸೇರಿ ಈ ಕೃತ್ಯವನ್ನು ನಡೆಸುತ್ತಿರುವುದು ಬೆಳಕಿಗೆ ಬಂದಿರುತ್ತದೆ.


ಮುಂದಿನ ಕಾನೂನು ಕ್ರಮಕ್ಕಾಗಿ ಸ್ಥಳದಲ್ಲಿದ್ದ AP03X6149, KL43C3968, KA19AC4077, KA19AC8686, KA19AA7342, KA19AD6595 ನೋಂದಣಿ ಸಂಖ್ಯೆಯ ಟ್ಯಾಂಕರ್ ಲಾರಿಗಳನ್ನು, ಡಾಮಾರ್ ಕಳ್ಳತನ ಮಾಡಲು ಉಪಯೋಗಿಸಿದ ವಸ್ತುಗಳನ್ನು ವಶಪಡಿಸಿದ್ದಾರೆ. ತೂಕ ಮಾಪನ -1, ಡಾಮಾರ್ ಬಿಸಿ ಮಾಡಲು ಉಪಯೋಗಿಸಿದ ಗ್ಯಾಸ್ ಸಿಲಿಂಡರ್ -1, ಡಾಮಾರ್ ತುಂಬಿಸಲು ಬಳಸಿರುವ ಕಬ್ಬಿಣದ ಟ್ಯಾಂಕ್ -1, ಆರೋಪಿಗಳ ವಶದಲ್ಲಿದ್ದ 9 ಮೊಬೈಲ್ ಫೋನುಗಳನ್ನು ಸ್ವಾಧೀನಪಡಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ವಿಜಯ ಕುಮಾರ್ ಶೆಟ್ಟಿ, ಸುಧಾಕರ ಶೆಟ್ಟಿ @ಸುಧಾಕರ, ಮಹಮ್ಮದ್ ಇಮ್ರಾನ್, ಅಶ್ರಪ್ ಎಂ., ವೀರೇಂದ್ರ ಎಸ್.ಆರ್, ಮಾದಸ್ವಾಮಿ, ಪ್ರಭಾಕರನ್, ನವೀನ್ ಕುಮಾರ್, ಮಹಮ್ಮದ್ ನಿಸಾರ್, ಮಹಮ್ಮದ್ ಸಿಹಾಬುದ್ದೀನ್ ಎಂಬವರು ಬಂಧಿತರು.
ಇವರ ವಿರುದ್ದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅ.ಕ್ರ 122/2023 ಕಲಂ : 379, 417, 420, 285 ಭಾ.ದ.ಸಂ ಮತ್ತು ಕಲಂ: 23 ಪೆಟ್ರೋಲಿಯಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
Ten people were arrested for transferring tar from tankers brought by a private factory. The illicit transfer of tar was taking place at Amai village in Kadleshwalya in the night on Friday December 8. The tar was being transferred from tankers brought by the private company.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm