ಬ್ರೇಕಿಂಗ್ ನ್ಯೂಸ್
11-12-23 11:35 am Bangalore Correspondent ಕ್ರೈಂ
ಬೆಂಗಳೂರು, ಡಿ 11: ಮುಂಬೈ ಸೈಬರ್ ಕ್ರೈಂ ಪೊಲೀಸರ ಸೋಗಿನಲ್ಲಿ ಉದ್ಯಮಿಗೆ ಕರೆ ಮಾಡಿದ ವಂಚಕರು “ನಿಮ್ಮ ಹೆಸರಿನಲ್ಲಿ ವಿದೇಶಕ್ಕೆ ಡ್ರಗ್ಸ್ ಕೊರಿಯರ್ ಮೂಲಕ ಕಳುಹಿಸುತ್ತಿರುವ ಬಗ್ಗೆ ದೂರು ಬಂದಿದೆ.
ಈ ಬಗ್ಗೆ ದೂರು ದಾಖಲಿಸದಿರಲು ಹಣ ನೀಡುವಂತೆ ಬೆದರಿಸಿ ಬರೋಬರಿ 1.98 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಎಚ್ಎಸ್ ಆರ್ ಲೇಔಟ್ ನಿವಾಸಿ ತಾರಕ್ ಶಾ(53) ಎಂಬವರು ಆಗ್ನೇಯ ವಿಭಾಗದ ಸೆನ್ ಠಾಣೆಯಲ್ಲಿ ರಾಹುಲ್ ಕುಮಾರ್ ಮತ್ತು ಬಲ್ಸಿಂಗ್ ರಜಪೂತ್ ಎಂಬವರ ವಿರುದ್ಧ ದೂರು ನೀಡಿದ್ದಾರೆ.
ಡಿ.2ರಂದು ತಾರಕ್ ಶಾಗೆ ಸ್ಕೈಪ್ನಲ್ಲಿ ಅಪರಿಚಿತ ನಂಬರ್ನಿಂದ ಕರೆ ಮಾಡಿದ ವಂಚಕರು, ಫೆಡೆಕ್ಸ್ ಕೊರಿಯರ್ನಿಂದ ಕರೆ ಮಾಡುತ್ತಿದ್ದು, ನಿಮ್ಮ ಆಧಾರ್ ಸಂಖ್ಯೆ ಬಳಸಿಕೊಂಡು ಅಕ್ರಮವಾಗಿ ಮುಂಬೈ ನಿಂದ ತೈವಾನ್ ದೇಶಕ್ಕೆ ಎಂಡಿಎಂಎ ಮಾದಕ ವಸ್ತುಗಳನ್ನು ಕೊರಿಯರ್ ಮೂಲಕ ಕಳುಹಿಸ ಲಾಗುತ್ತಿದೆ. ಈ ಸಂಬಂಧ ಮುಂಬೈ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೀಗಾಗಿ ನಿಮ್ಮನ್ನು ವಿಚಾರಣೆ ಮಾಡಬೇಕು ಎಂದಿದ್ದಾನೆ. ಅದರಿಂದ ಆತಂಕಗೊಂಡ ತಾರಕ್, ತಮಗೂ ಕೋರಿಯರ್ಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಈ ವೇಳೆ ದುಷ್ಕರ್ಮಿಗಳು, ಈ ಸಂಬಂಧ ಪರಿಶೀಲಿಸುವ ಅಗತ್ಯವಿದ್ದು, ನಾವು ನೀಡುವ ಖಾತೆಗೆ ಹಣ ಹಾಕುವಂತೆ ಸೂಚಿಸಿದ್ದಾರೆ. ಪರಿಶೀಲನೆ ಬಳಿಕ ಆ ಹಣವನ್ನು ವಾಪಾಸ್ ನೀಡುವುದಾಗಿ ತಿಳಿಸಿದ್ದಾರೆ.
ಇವರ ಮಾತು ನಂಬಿದ ತಾರಕ್ ಅವರು, ದುಷ್ಕರ್ಮಿಗಳು ನೀಡಿದ ಬ್ಯಾಂಕ್ ಖಾತೆಗಳಿಗೆ ವಿವಿಧ ಹಂತಗಳಲ್ಲಿ 1.98 ಕೋಟಿ ರು. ಹಣ ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ಬಳಿಕ ದುಷ್ಕರ್ಮಿಗಳು, ತಾರಕ್ ಅವರ ಸಂಪರ್ಕಕ್ಕೆ ಸಿಕ್ಕಿಲ್ಲ. ಹತ್ತಾರು ಬಾರಿ ಕರೆ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಬಳಿಕ ತಾನು ಸೈಬರ್ ವಂಚಕರ ಬಲೆ ಬಿದ್ದಿರುವುದು ತಾರಕ್ ಅವರಿಗೆ ಅರಿವಾಗಿದೆ. ಬಳಿಕ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಈ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Fake drug Courier fraud, Bangalore businessman loses Rs 2 crore to scammers posing as Mumbai police.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm