ಬ್ರೇಕಿಂಗ್ ನ್ಯೂಸ್
11-12-23 11:35 am Bangalore Correspondent ಕ್ರೈಂ
ಬೆಂಗಳೂರು, ಡಿ 11: ಮುಂಬೈ ಸೈಬರ್ ಕ್ರೈಂ ಪೊಲೀಸರ ಸೋಗಿನಲ್ಲಿ ಉದ್ಯಮಿಗೆ ಕರೆ ಮಾಡಿದ ವಂಚಕರು “ನಿಮ್ಮ ಹೆಸರಿನಲ್ಲಿ ವಿದೇಶಕ್ಕೆ ಡ್ರಗ್ಸ್ ಕೊರಿಯರ್ ಮೂಲಕ ಕಳುಹಿಸುತ್ತಿರುವ ಬಗ್ಗೆ ದೂರು ಬಂದಿದೆ.
ಈ ಬಗ್ಗೆ ದೂರು ದಾಖಲಿಸದಿರಲು ಹಣ ನೀಡುವಂತೆ ಬೆದರಿಸಿ ಬರೋಬರಿ 1.98 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಎಚ್ಎಸ್ ಆರ್ ಲೇಔಟ್ ನಿವಾಸಿ ತಾರಕ್ ಶಾ(53) ಎಂಬವರು ಆಗ್ನೇಯ ವಿಭಾಗದ ಸೆನ್ ಠಾಣೆಯಲ್ಲಿ ರಾಹುಲ್ ಕುಮಾರ್ ಮತ್ತು ಬಲ್ಸಿಂಗ್ ರಜಪೂತ್ ಎಂಬವರ ವಿರುದ್ಧ ದೂರು ನೀಡಿದ್ದಾರೆ.
ಡಿ.2ರಂದು ತಾರಕ್ ಶಾಗೆ ಸ್ಕೈಪ್ನಲ್ಲಿ ಅಪರಿಚಿತ ನಂಬರ್ನಿಂದ ಕರೆ ಮಾಡಿದ ವಂಚಕರು, ಫೆಡೆಕ್ಸ್ ಕೊರಿಯರ್ನಿಂದ ಕರೆ ಮಾಡುತ್ತಿದ್ದು, ನಿಮ್ಮ ಆಧಾರ್ ಸಂಖ್ಯೆ ಬಳಸಿಕೊಂಡು ಅಕ್ರಮವಾಗಿ ಮುಂಬೈ ನಿಂದ ತೈವಾನ್ ದೇಶಕ್ಕೆ ಎಂಡಿಎಂಎ ಮಾದಕ ವಸ್ತುಗಳನ್ನು ಕೊರಿಯರ್ ಮೂಲಕ ಕಳುಹಿಸ ಲಾಗುತ್ತಿದೆ. ಈ ಸಂಬಂಧ ಮುಂಬೈ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೀಗಾಗಿ ನಿಮ್ಮನ್ನು ವಿಚಾರಣೆ ಮಾಡಬೇಕು ಎಂದಿದ್ದಾನೆ. ಅದರಿಂದ ಆತಂಕಗೊಂಡ ತಾರಕ್, ತಮಗೂ ಕೋರಿಯರ್ಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಈ ವೇಳೆ ದುಷ್ಕರ್ಮಿಗಳು, ಈ ಸಂಬಂಧ ಪರಿಶೀಲಿಸುವ ಅಗತ್ಯವಿದ್ದು, ನಾವು ನೀಡುವ ಖಾತೆಗೆ ಹಣ ಹಾಕುವಂತೆ ಸೂಚಿಸಿದ್ದಾರೆ. ಪರಿಶೀಲನೆ ಬಳಿಕ ಆ ಹಣವನ್ನು ವಾಪಾಸ್ ನೀಡುವುದಾಗಿ ತಿಳಿಸಿದ್ದಾರೆ.
ಇವರ ಮಾತು ನಂಬಿದ ತಾರಕ್ ಅವರು, ದುಷ್ಕರ್ಮಿಗಳು ನೀಡಿದ ಬ್ಯಾಂಕ್ ಖಾತೆಗಳಿಗೆ ವಿವಿಧ ಹಂತಗಳಲ್ಲಿ 1.98 ಕೋಟಿ ರು. ಹಣ ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ಬಳಿಕ ದುಷ್ಕರ್ಮಿಗಳು, ತಾರಕ್ ಅವರ ಸಂಪರ್ಕಕ್ಕೆ ಸಿಕ್ಕಿಲ್ಲ. ಹತ್ತಾರು ಬಾರಿ ಕರೆ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಬಳಿಕ ತಾನು ಸೈಬರ್ ವಂಚಕರ ಬಲೆ ಬಿದ್ದಿರುವುದು ತಾರಕ್ ಅವರಿಗೆ ಅರಿವಾಗಿದೆ. ಬಳಿಕ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಈ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Fake drug Courier fraud, Bangalore businessman loses Rs 2 crore to scammers posing as Mumbai police.
14-12-25 11:37 pm
HK News Desk
Deputy Chief Minister, D.K. Shivakumar: ನೀವು...
14-12-25 03:19 pm
ನೀವು ನಮ್ಮ ಪ್ರತಿನಿಧಿ ಹೊರತು ಯಜಮಾನರಲ್ಲ, ಮಂತ್ರಿಗಳ...
14-12-25 02:37 pm
Earthqake, Davangere, Vijayanagara: ದಾವಣಗೆರೆ,...
13-12-25 10:47 pm
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
14-12-25 07:20 pm
HK News Desk
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಯುಡಿಎಫ್ ಅತಿ ಹೆ...
13-12-25 08:34 pm
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
14-12-25 05:48 pm
Mangalore Correspondent
ಕೇಶವನ ಬದುಕು ಬದಲಿಸಿದ ರಕ್ತಬೀಜ ! ಅಸುರೀತನದ ಜೀವನಕ್...
13-12-25 11:02 pm
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
14-12-25 11:10 pm
Mangalore Correspondent
ಟೀಮ್ ಎಸ್ಡಿಪಿಐ ಹೆಸರಲ್ಲಿ ಹಿಂದುಗಳ ಬಗ್ಗೆ ನಿಂದಿಸಿ...
14-12-25 09:12 pm
Illegal Cattle Transport Case: ಅಕ್ರಮ ಗೋಸಾಗಾಟ...
14-12-25 08:35 pm
ಶಿರಿಯಾರ ಸೇವಾ ಸಹಕಾರಿ ಸಂಘದಲ್ಲಿ ಕೋಟ್ಯಂತರ ವಂಚನೆ ;...
14-12-25 05:33 pm
Shivamogga Double Murder: ಶಿವಮೊಗ್ಗದಲ್ಲಿ ಡಬಲ್...
13-12-25 12:51 pm