ಬ್ರೇಕಿಂಗ್ ನ್ಯೂಸ್
11-12-23 11:35 am Bangalore Correspondent ಕ್ರೈಂ
ಬೆಂಗಳೂರು, ಡಿ 11: ಮುಂಬೈ ಸೈಬರ್ ಕ್ರೈಂ ಪೊಲೀಸರ ಸೋಗಿನಲ್ಲಿ ಉದ್ಯಮಿಗೆ ಕರೆ ಮಾಡಿದ ವಂಚಕರು “ನಿಮ್ಮ ಹೆಸರಿನಲ್ಲಿ ವಿದೇಶಕ್ಕೆ ಡ್ರಗ್ಸ್ ಕೊರಿಯರ್ ಮೂಲಕ ಕಳುಹಿಸುತ್ತಿರುವ ಬಗ್ಗೆ ದೂರು ಬಂದಿದೆ.
ಈ ಬಗ್ಗೆ ದೂರು ದಾಖಲಿಸದಿರಲು ಹಣ ನೀಡುವಂತೆ ಬೆದರಿಸಿ ಬರೋಬರಿ 1.98 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಎಚ್ಎಸ್ ಆರ್ ಲೇಔಟ್ ನಿವಾಸಿ ತಾರಕ್ ಶಾ(53) ಎಂಬವರು ಆಗ್ನೇಯ ವಿಭಾಗದ ಸೆನ್ ಠಾಣೆಯಲ್ಲಿ ರಾಹುಲ್ ಕುಮಾರ್ ಮತ್ತು ಬಲ್ಸಿಂಗ್ ರಜಪೂತ್ ಎಂಬವರ ವಿರುದ್ಧ ದೂರು ನೀಡಿದ್ದಾರೆ.
ಡಿ.2ರಂದು ತಾರಕ್ ಶಾಗೆ ಸ್ಕೈಪ್ನಲ್ಲಿ ಅಪರಿಚಿತ ನಂಬರ್ನಿಂದ ಕರೆ ಮಾಡಿದ ವಂಚಕರು, ಫೆಡೆಕ್ಸ್ ಕೊರಿಯರ್ನಿಂದ ಕರೆ ಮಾಡುತ್ತಿದ್ದು, ನಿಮ್ಮ ಆಧಾರ್ ಸಂಖ್ಯೆ ಬಳಸಿಕೊಂಡು ಅಕ್ರಮವಾಗಿ ಮುಂಬೈ ನಿಂದ ತೈವಾನ್ ದೇಶಕ್ಕೆ ಎಂಡಿಎಂಎ ಮಾದಕ ವಸ್ತುಗಳನ್ನು ಕೊರಿಯರ್ ಮೂಲಕ ಕಳುಹಿಸ ಲಾಗುತ್ತಿದೆ. ಈ ಸಂಬಂಧ ಮುಂಬೈ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೀಗಾಗಿ ನಿಮ್ಮನ್ನು ವಿಚಾರಣೆ ಮಾಡಬೇಕು ಎಂದಿದ್ದಾನೆ. ಅದರಿಂದ ಆತಂಕಗೊಂಡ ತಾರಕ್, ತಮಗೂ ಕೋರಿಯರ್ಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಈ ವೇಳೆ ದುಷ್ಕರ್ಮಿಗಳು, ಈ ಸಂಬಂಧ ಪರಿಶೀಲಿಸುವ ಅಗತ್ಯವಿದ್ದು, ನಾವು ನೀಡುವ ಖಾತೆಗೆ ಹಣ ಹಾಕುವಂತೆ ಸೂಚಿಸಿದ್ದಾರೆ. ಪರಿಶೀಲನೆ ಬಳಿಕ ಆ ಹಣವನ್ನು ವಾಪಾಸ್ ನೀಡುವುದಾಗಿ ತಿಳಿಸಿದ್ದಾರೆ.
ಇವರ ಮಾತು ನಂಬಿದ ತಾರಕ್ ಅವರು, ದುಷ್ಕರ್ಮಿಗಳು ನೀಡಿದ ಬ್ಯಾಂಕ್ ಖಾತೆಗಳಿಗೆ ವಿವಿಧ ಹಂತಗಳಲ್ಲಿ 1.98 ಕೋಟಿ ರು. ಹಣ ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ಬಳಿಕ ದುಷ್ಕರ್ಮಿಗಳು, ತಾರಕ್ ಅವರ ಸಂಪರ್ಕಕ್ಕೆ ಸಿಕ್ಕಿಲ್ಲ. ಹತ್ತಾರು ಬಾರಿ ಕರೆ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಬಳಿಕ ತಾನು ಸೈಬರ್ ವಂಚಕರ ಬಲೆ ಬಿದ್ದಿರುವುದು ತಾರಕ್ ಅವರಿಗೆ ಅರಿವಾಗಿದೆ. ಬಳಿಕ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಈ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Fake drug Courier fraud, Bangalore businessman loses Rs 2 crore to scammers posing as Mumbai police.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am