ಬ್ರೇಕಿಂಗ್ ನ್ಯೂಸ್
11-12-23 11:35 am Bangalore Correspondent ಕ್ರೈಂ
ಬೆಂಗಳೂರು, ಡಿ 11: ಮುಂಬೈ ಸೈಬರ್ ಕ್ರೈಂ ಪೊಲೀಸರ ಸೋಗಿನಲ್ಲಿ ಉದ್ಯಮಿಗೆ ಕರೆ ಮಾಡಿದ ವಂಚಕರು “ನಿಮ್ಮ ಹೆಸರಿನಲ್ಲಿ ವಿದೇಶಕ್ಕೆ ಡ್ರಗ್ಸ್ ಕೊರಿಯರ್ ಮೂಲಕ ಕಳುಹಿಸುತ್ತಿರುವ ಬಗ್ಗೆ ದೂರು ಬಂದಿದೆ.
ಈ ಬಗ್ಗೆ ದೂರು ದಾಖಲಿಸದಿರಲು ಹಣ ನೀಡುವಂತೆ ಬೆದರಿಸಿ ಬರೋಬರಿ 1.98 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಎಚ್ಎಸ್ ಆರ್ ಲೇಔಟ್ ನಿವಾಸಿ ತಾರಕ್ ಶಾ(53) ಎಂಬವರು ಆಗ್ನೇಯ ವಿಭಾಗದ ಸೆನ್ ಠಾಣೆಯಲ್ಲಿ ರಾಹುಲ್ ಕುಮಾರ್ ಮತ್ತು ಬಲ್ಸಿಂಗ್ ರಜಪೂತ್ ಎಂಬವರ ವಿರುದ್ಧ ದೂರು ನೀಡಿದ್ದಾರೆ.
ಡಿ.2ರಂದು ತಾರಕ್ ಶಾಗೆ ಸ್ಕೈಪ್ನಲ್ಲಿ ಅಪರಿಚಿತ ನಂಬರ್ನಿಂದ ಕರೆ ಮಾಡಿದ ವಂಚಕರು, ಫೆಡೆಕ್ಸ್ ಕೊರಿಯರ್ನಿಂದ ಕರೆ ಮಾಡುತ್ತಿದ್ದು, ನಿಮ್ಮ ಆಧಾರ್ ಸಂಖ್ಯೆ ಬಳಸಿಕೊಂಡು ಅಕ್ರಮವಾಗಿ ಮುಂಬೈ ನಿಂದ ತೈವಾನ್ ದೇಶಕ್ಕೆ ಎಂಡಿಎಂಎ ಮಾದಕ ವಸ್ತುಗಳನ್ನು ಕೊರಿಯರ್ ಮೂಲಕ ಕಳುಹಿಸ ಲಾಗುತ್ತಿದೆ. ಈ ಸಂಬಂಧ ಮುಂಬೈ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೀಗಾಗಿ ನಿಮ್ಮನ್ನು ವಿಚಾರಣೆ ಮಾಡಬೇಕು ಎಂದಿದ್ದಾನೆ. ಅದರಿಂದ ಆತಂಕಗೊಂಡ ತಾರಕ್, ತಮಗೂ ಕೋರಿಯರ್ಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಈ ವೇಳೆ ದುಷ್ಕರ್ಮಿಗಳು, ಈ ಸಂಬಂಧ ಪರಿಶೀಲಿಸುವ ಅಗತ್ಯವಿದ್ದು, ನಾವು ನೀಡುವ ಖಾತೆಗೆ ಹಣ ಹಾಕುವಂತೆ ಸೂಚಿಸಿದ್ದಾರೆ. ಪರಿಶೀಲನೆ ಬಳಿಕ ಆ ಹಣವನ್ನು ವಾಪಾಸ್ ನೀಡುವುದಾಗಿ ತಿಳಿಸಿದ್ದಾರೆ.
ಇವರ ಮಾತು ನಂಬಿದ ತಾರಕ್ ಅವರು, ದುಷ್ಕರ್ಮಿಗಳು ನೀಡಿದ ಬ್ಯಾಂಕ್ ಖಾತೆಗಳಿಗೆ ವಿವಿಧ ಹಂತಗಳಲ್ಲಿ 1.98 ಕೋಟಿ ರು. ಹಣ ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ಬಳಿಕ ದುಷ್ಕರ್ಮಿಗಳು, ತಾರಕ್ ಅವರ ಸಂಪರ್ಕಕ್ಕೆ ಸಿಕ್ಕಿಲ್ಲ. ಹತ್ತಾರು ಬಾರಿ ಕರೆ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಬಳಿಕ ತಾನು ಸೈಬರ್ ವಂಚಕರ ಬಲೆ ಬಿದ್ದಿರುವುದು ತಾರಕ್ ಅವರಿಗೆ ಅರಿವಾಗಿದೆ. ಬಳಿಕ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಈ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Fake drug Courier fraud, Bangalore businessman loses Rs 2 crore to scammers posing as Mumbai police.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am