ಬ್ರೇಕಿಂಗ್ ನ್ಯೂಸ್
11-12-23 11:35 am Bangalore Correspondent ಕ್ರೈಂ
ಬೆಂಗಳೂರು, ಡಿ 11: ಮುಂಬೈ ಸೈಬರ್ ಕ್ರೈಂ ಪೊಲೀಸರ ಸೋಗಿನಲ್ಲಿ ಉದ್ಯಮಿಗೆ ಕರೆ ಮಾಡಿದ ವಂಚಕರು “ನಿಮ್ಮ ಹೆಸರಿನಲ್ಲಿ ವಿದೇಶಕ್ಕೆ ಡ್ರಗ್ಸ್ ಕೊರಿಯರ್ ಮೂಲಕ ಕಳುಹಿಸುತ್ತಿರುವ ಬಗ್ಗೆ ದೂರು ಬಂದಿದೆ.
ಈ ಬಗ್ಗೆ ದೂರು ದಾಖಲಿಸದಿರಲು ಹಣ ನೀಡುವಂತೆ ಬೆದರಿಸಿ ಬರೋಬರಿ 1.98 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಎಚ್ಎಸ್ ಆರ್ ಲೇಔಟ್ ನಿವಾಸಿ ತಾರಕ್ ಶಾ(53) ಎಂಬವರು ಆಗ್ನೇಯ ವಿಭಾಗದ ಸೆನ್ ಠಾಣೆಯಲ್ಲಿ ರಾಹುಲ್ ಕುಮಾರ್ ಮತ್ತು ಬಲ್ಸಿಂಗ್ ರಜಪೂತ್ ಎಂಬವರ ವಿರುದ್ಧ ದೂರು ನೀಡಿದ್ದಾರೆ.
ಡಿ.2ರಂದು ತಾರಕ್ ಶಾಗೆ ಸ್ಕೈಪ್ನಲ್ಲಿ ಅಪರಿಚಿತ ನಂಬರ್ನಿಂದ ಕರೆ ಮಾಡಿದ ವಂಚಕರು, ಫೆಡೆಕ್ಸ್ ಕೊರಿಯರ್ನಿಂದ ಕರೆ ಮಾಡುತ್ತಿದ್ದು, ನಿಮ್ಮ ಆಧಾರ್ ಸಂಖ್ಯೆ ಬಳಸಿಕೊಂಡು ಅಕ್ರಮವಾಗಿ ಮುಂಬೈ ನಿಂದ ತೈವಾನ್ ದೇಶಕ್ಕೆ ಎಂಡಿಎಂಎ ಮಾದಕ ವಸ್ತುಗಳನ್ನು ಕೊರಿಯರ್ ಮೂಲಕ ಕಳುಹಿಸ ಲಾಗುತ್ತಿದೆ. ಈ ಸಂಬಂಧ ಮುಂಬೈ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೀಗಾಗಿ ನಿಮ್ಮನ್ನು ವಿಚಾರಣೆ ಮಾಡಬೇಕು ಎಂದಿದ್ದಾನೆ. ಅದರಿಂದ ಆತಂಕಗೊಂಡ ತಾರಕ್, ತಮಗೂ ಕೋರಿಯರ್ಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಈ ವೇಳೆ ದುಷ್ಕರ್ಮಿಗಳು, ಈ ಸಂಬಂಧ ಪರಿಶೀಲಿಸುವ ಅಗತ್ಯವಿದ್ದು, ನಾವು ನೀಡುವ ಖಾತೆಗೆ ಹಣ ಹಾಕುವಂತೆ ಸೂಚಿಸಿದ್ದಾರೆ. ಪರಿಶೀಲನೆ ಬಳಿಕ ಆ ಹಣವನ್ನು ವಾಪಾಸ್ ನೀಡುವುದಾಗಿ ತಿಳಿಸಿದ್ದಾರೆ.
ಇವರ ಮಾತು ನಂಬಿದ ತಾರಕ್ ಅವರು, ದುಷ್ಕರ್ಮಿಗಳು ನೀಡಿದ ಬ್ಯಾಂಕ್ ಖಾತೆಗಳಿಗೆ ವಿವಿಧ ಹಂತಗಳಲ್ಲಿ 1.98 ಕೋಟಿ ರು. ಹಣ ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ಬಳಿಕ ದುಷ್ಕರ್ಮಿಗಳು, ತಾರಕ್ ಅವರ ಸಂಪರ್ಕಕ್ಕೆ ಸಿಕ್ಕಿಲ್ಲ. ಹತ್ತಾರು ಬಾರಿ ಕರೆ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಬಳಿಕ ತಾನು ಸೈಬರ್ ವಂಚಕರ ಬಲೆ ಬಿದ್ದಿರುವುದು ತಾರಕ್ ಅವರಿಗೆ ಅರಿವಾಗಿದೆ. ಬಳಿಕ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಈ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Fake drug Courier fraud, Bangalore businessman loses Rs 2 crore to scammers posing as Mumbai police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm