ಬ್ರೇಕಿಂಗ್ ನ್ಯೂಸ್
11-12-23 11:35 am Bangalore Correspondent ಕ್ರೈಂ
ಬೆಂಗಳೂರು, ಡಿ 11: ಮುಂಬೈ ಸೈಬರ್ ಕ್ರೈಂ ಪೊಲೀಸರ ಸೋಗಿನಲ್ಲಿ ಉದ್ಯಮಿಗೆ ಕರೆ ಮಾಡಿದ ವಂಚಕರು “ನಿಮ್ಮ ಹೆಸರಿನಲ್ಲಿ ವಿದೇಶಕ್ಕೆ ಡ್ರಗ್ಸ್ ಕೊರಿಯರ್ ಮೂಲಕ ಕಳುಹಿಸುತ್ತಿರುವ ಬಗ್ಗೆ ದೂರು ಬಂದಿದೆ.
ಈ ಬಗ್ಗೆ ದೂರು ದಾಖಲಿಸದಿರಲು ಹಣ ನೀಡುವಂತೆ ಬೆದರಿಸಿ ಬರೋಬರಿ 1.98 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಎಚ್ಎಸ್ ಆರ್ ಲೇಔಟ್ ನಿವಾಸಿ ತಾರಕ್ ಶಾ(53) ಎಂಬವರು ಆಗ್ನೇಯ ವಿಭಾಗದ ಸೆನ್ ಠಾಣೆಯಲ್ಲಿ ರಾಹುಲ್ ಕುಮಾರ್ ಮತ್ತು ಬಲ್ಸಿಂಗ್ ರಜಪೂತ್ ಎಂಬವರ ವಿರುದ್ಧ ದೂರು ನೀಡಿದ್ದಾರೆ.
ಡಿ.2ರಂದು ತಾರಕ್ ಶಾಗೆ ಸ್ಕೈಪ್ನಲ್ಲಿ ಅಪರಿಚಿತ ನಂಬರ್ನಿಂದ ಕರೆ ಮಾಡಿದ ವಂಚಕರು, ಫೆಡೆಕ್ಸ್ ಕೊರಿಯರ್ನಿಂದ ಕರೆ ಮಾಡುತ್ತಿದ್ದು, ನಿಮ್ಮ ಆಧಾರ್ ಸಂಖ್ಯೆ ಬಳಸಿಕೊಂಡು ಅಕ್ರಮವಾಗಿ ಮುಂಬೈ ನಿಂದ ತೈವಾನ್ ದೇಶಕ್ಕೆ ಎಂಡಿಎಂಎ ಮಾದಕ ವಸ್ತುಗಳನ್ನು ಕೊರಿಯರ್ ಮೂಲಕ ಕಳುಹಿಸ ಲಾಗುತ್ತಿದೆ. ಈ ಸಂಬಂಧ ಮುಂಬೈ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೀಗಾಗಿ ನಿಮ್ಮನ್ನು ವಿಚಾರಣೆ ಮಾಡಬೇಕು ಎಂದಿದ್ದಾನೆ. ಅದರಿಂದ ಆತಂಕಗೊಂಡ ತಾರಕ್, ತಮಗೂ ಕೋರಿಯರ್ಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಈ ವೇಳೆ ದುಷ್ಕರ್ಮಿಗಳು, ಈ ಸಂಬಂಧ ಪರಿಶೀಲಿಸುವ ಅಗತ್ಯವಿದ್ದು, ನಾವು ನೀಡುವ ಖಾತೆಗೆ ಹಣ ಹಾಕುವಂತೆ ಸೂಚಿಸಿದ್ದಾರೆ. ಪರಿಶೀಲನೆ ಬಳಿಕ ಆ ಹಣವನ್ನು ವಾಪಾಸ್ ನೀಡುವುದಾಗಿ ತಿಳಿಸಿದ್ದಾರೆ.
ಇವರ ಮಾತು ನಂಬಿದ ತಾರಕ್ ಅವರು, ದುಷ್ಕರ್ಮಿಗಳು ನೀಡಿದ ಬ್ಯಾಂಕ್ ಖಾತೆಗಳಿಗೆ ವಿವಿಧ ಹಂತಗಳಲ್ಲಿ 1.98 ಕೋಟಿ ರು. ಹಣ ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ಬಳಿಕ ದುಷ್ಕರ್ಮಿಗಳು, ತಾರಕ್ ಅವರ ಸಂಪರ್ಕಕ್ಕೆ ಸಿಕ್ಕಿಲ್ಲ. ಹತ್ತಾರು ಬಾರಿ ಕರೆ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಬಳಿಕ ತಾನು ಸೈಬರ್ ವಂಚಕರ ಬಲೆ ಬಿದ್ದಿರುವುದು ತಾರಕ್ ಅವರಿಗೆ ಅರಿವಾಗಿದೆ. ಬಳಿಕ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಈ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Fake drug Courier fraud, Bangalore businessman loses Rs 2 crore to scammers posing as Mumbai police.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 10:58 pm
HK News Staffer
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm