ಬ್ರೇಕಿಂಗ್ ನ್ಯೂಸ್
11-12-23 11:35 am Bangalore Correspondent ಕ್ರೈಂ
ಬೆಂಗಳೂರು, ಡಿ 11: ಮುಂಬೈ ಸೈಬರ್ ಕ್ರೈಂ ಪೊಲೀಸರ ಸೋಗಿನಲ್ಲಿ ಉದ್ಯಮಿಗೆ ಕರೆ ಮಾಡಿದ ವಂಚಕರು “ನಿಮ್ಮ ಹೆಸರಿನಲ್ಲಿ ವಿದೇಶಕ್ಕೆ ಡ್ರಗ್ಸ್ ಕೊರಿಯರ್ ಮೂಲಕ ಕಳುಹಿಸುತ್ತಿರುವ ಬಗ್ಗೆ ದೂರು ಬಂದಿದೆ.
ಈ ಬಗ್ಗೆ ದೂರು ದಾಖಲಿಸದಿರಲು ಹಣ ನೀಡುವಂತೆ ಬೆದರಿಸಿ ಬರೋಬರಿ 1.98 ಕೋಟಿ ರೂ. ಸುಲಿಗೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಎಚ್ಎಸ್ ಆರ್ ಲೇಔಟ್ ನಿವಾಸಿ ತಾರಕ್ ಶಾ(53) ಎಂಬವರು ಆಗ್ನೇಯ ವಿಭಾಗದ ಸೆನ್ ಠಾಣೆಯಲ್ಲಿ ರಾಹುಲ್ ಕುಮಾರ್ ಮತ್ತು ಬಲ್ಸಿಂಗ್ ರಜಪೂತ್ ಎಂಬವರ ವಿರುದ್ಧ ದೂರು ನೀಡಿದ್ದಾರೆ.
ಡಿ.2ರಂದು ತಾರಕ್ ಶಾಗೆ ಸ್ಕೈಪ್ನಲ್ಲಿ ಅಪರಿಚಿತ ನಂಬರ್ನಿಂದ ಕರೆ ಮಾಡಿದ ವಂಚಕರು, ಫೆಡೆಕ್ಸ್ ಕೊರಿಯರ್ನಿಂದ ಕರೆ ಮಾಡುತ್ತಿದ್ದು, ನಿಮ್ಮ ಆಧಾರ್ ಸಂಖ್ಯೆ ಬಳಸಿಕೊಂಡು ಅಕ್ರಮವಾಗಿ ಮುಂಬೈ ನಿಂದ ತೈವಾನ್ ದೇಶಕ್ಕೆ ಎಂಡಿಎಂಎ ಮಾದಕ ವಸ್ತುಗಳನ್ನು ಕೊರಿಯರ್ ಮೂಲಕ ಕಳುಹಿಸ ಲಾಗುತ್ತಿದೆ. ಈ ಸಂಬಂಧ ಮುಂಬೈ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೀಗಾಗಿ ನಿಮ್ಮನ್ನು ವಿಚಾರಣೆ ಮಾಡಬೇಕು ಎಂದಿದ್ದಾನೆ. ಅದರಿಂದ ಆತಂಕಗೊಂಡ ತಾರಕ್, ತಮಗೂ ಕೋರಿಯರ್ಗೂ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ.
ಈ ವೇಳೆ ದುಷ್ಕರ್ಮಿಗಳು, ಈ ಸಂಬಂಧ ಪರಿಶೀಲಿಸುವ ಅಗತ್ಯವಿದ್ದು, ನಾವು ನೀಡುವ ಖಾತೆಗೆ ಹಣ ಹಾಕುವಂತೆ ಸೂಚಿಸಿದ್ದಾರೆ. ಪರಿಶೀಲನೆ ಬಳಿಕ ಆ ಹಣವನ್ನು ವಾಪಾಸ್ ನೀಡುವುದಾಗಿ ತಿಳಿಸಿದ್ದಾರೆ.
ಇವರ ಮಾತು ನಂಬಿದ ತಾರಕ್ ಅವರು, ದುಷ್ಕರ್ಮಿಗಳು ನೀಡಿದ ಬ್ಯಾಂಕ್ ಖಾತೆಗಳಿಗೆ ವಿವಿಧ ಹಂತಗಳಲ್ಲಿ 1.98 ಕೋಟಿ ರು. ಹಣ ವರ್ಗಾಯಿಸಿದ್ದಾರೆ. ಹಣ ವರ್ಗಾವಣೆಯಾದ ಬಳಿಕ ದುಷ್ಕರ್ಮಿಗಳು, ತಾರಕ್ ಅವರ ಸಂಪರ್ಕಕ್ಕೆ ಸಿಕ್ಕಿಲ್ಲ. ಹತ್ತಾರು ಬಾರಿ ಕರೆ ಮಾಡಿದರೂ ಯಾವುದೇ ಪ್ರಯೋಜವಾಗಿಲ್ಲ. ಬಳಿಕ ತಾನು ಸೈಬರ್ ವಂಚಕರ ಬಲೆ ಬಿದ್ದಿರುವುದು ತಾರಕ್ ಅವರಿಗೆ ಅರಿವಾಗಿದೆ. ಬಳಿಕ ಆಗ್ನೇಯ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ.
ಈ ದೂರಿನ ಮೇರೆಗೆ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Fake drug Courier fraud, Bangalore businessman loses Rs 2 crore to scammers posing as Mumbai police.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am