ಬ್ರೇಕಿಂಗ್ ನ್ಯೂಸ್
11-12-23 06:58 pm Mangalore Correspondent ಕ್ರೈಂ
ಉಳ್ಳಾಲ, ಡಿ.11: ಕಳೆದ ವಾರವಷ್ಟೆ ಉಳ್ಳಾಲದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದ ಎಸಿಪಿ ನೇತೃತ್ವದ ಆಂಟಿ ಡ್ರಗ್ ತಂಡವು ಮತ್ತೆ ಜಾಲವನ್ನ ಬೆನ್ನಟ್ಟಿದ್ದು ಡ್ರಗ್ ಪೂರೈಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರನ್ನ ಬಂಧಿಸಿ ಮತ್ತೆ ಆರು ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ವಶಪಡಿಸಿದೆ.
ಕಳೆದ ಡಿ.4 ರಂದು ಉಳ್ಳಾಲದ ಸಂತೋಷನಗರ ಎಂಬಲ್ಲಿ ಕಾರಿನಲ್ಲಿ ನಿಷೇಧಿತ ಸುಮಾರು 132 ಗ್ರಾಂ ತೂಕದ Methamphetamine ಮತ್ತು 250 LSD ಸ್ಟ್ಯಾಂಪ್ ಡ್ರಗ್ಗನ್ನ ಅಕ್ರಮವಾಗಿ ಮಾರಾಟ ಮಾಡಲು ಬಂದಿದ್ದ ಶಿಶಿರ್ ದೇವಾಡಿಗ ಮತ್ತು ಸುಶಾನ್ ಎಲ್ ಎಂಬವರನ್ನ ಎಸಿಪಿ ಧನ್ಯ ನಾಯಕ್ ನೇತೃತ್ವದ ಆಂಟಿ ಡ್ರಗ್ಸ್ ತಂಡವು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತು ಮತ್ತು ಮಾರಕಾಯುಧಗಳನ್ನ ವಶಪಡಿಸಿಕೊಂಡಿತ್ತು. ಬಂಧಿತ ಆರೋಪಿಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಆಶಿತ್ ಯಾನೆ ಅಶ್ವಿತ್ ಅಲಿಯಾಸ್ ಆಶು ಎಂಬವರನ್ನು ಬಂಧಿಸಲಾಗಿದೆ. ಕೋಟೆಕಾರು ಗ್ರಾಮದ ಮಾಡೂರು ಸಾಯಿ ಮಂದಿರದ ಸಮೀಪದ ಗ್ರೌಂಡ್ ಬಳಿ ಅವಿತಿದ್ದ ಆಶಿತನ್ನು ಎಸಿಪಿ ನೇತೃತ್ವದ ತಂಡ ಬಂಧಿಸಿದ್ದು, ಆತನಲ್ಲಿದ್ದ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ತೂಕದ ಎಂ.ಡಿ.ಎಂ.ಎ, 30,000 ರೂಪಾಯಿ ಮೌಲ್ಯದ 600 ಗ್ರಾಂ ತೂಕದ ಗಾಂಜಾ ಮತ್ತು ಮೋಟಾರ್ ಬೈಕೊಂದನ್ನ ವಶ ಪಡಿಸಿಕೊಳ್ಳಲಾಗಿದೆ.


ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ನಿರ್ದೇಶನದಂತೆ ನಡೆದ ಕಾರ್ಯಾಚರಣೆಯಲ್ಲಿ ಎಸಿಪಿ ಧನ್ಯ ನಾಯಕ್, ಉಳ್ಳಾಲ ಠಾಣಾ ಪೊಲೀಸ್ ನಿರೀಕ್ಷಕರಾದ ಬಾಲಕೃಷ್ಣ ಹೆಚ್.ಎನ್, ಪಿಎಸ್ಐಗಳಾದ ಶೀತಲ್ ಅಲಗೂರ, ಸಂತೋಷ ಕುಮಾರ್ ಡಿ, ಪಿಎಸ್ಐ ಪುನೀತ್ ಗಾಂವ್ಕರ್, ಸಿಬ್ಬಂದಿಗಳಾದ ಸಾಜು ನಾಯರ್, ಮಹೇಶ್, ಶಿವಕುಮಾರ್ ಇದ್ದರು.
Ullal drug peddler arrested by ACP team in Mangalore.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm