ಬ್ರೇಕಿಂಗ್ ನ್ಯೂಸ್
11-12-23 06:58 pm Mangalore Correspondent ಕ್ರೈಂ
ಉಳ್ಳಾಲ, ಡಿ.11: ಕಳೆದ ವಾರವಷ್ಟೆ ಉಳ್ಳಾಲದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದ ಎಸಿಪಿ ನೇತೃತ್ವದ ಆಂಟಿ ಡ್ರಗ್ ತಂಡವು ಮತ್ತೆ ಜಾಲವನ್ನ ಬೆನ್ನಟ್ಟಿದ್ದು ಡ್ರಗ್ ಪೂರೈಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರನ್ನ ಬಂಧಿಸಿ ಮತ್ತೆ ಆರು ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನ ವಶಪಡಿಸಿದೆ.
ಕಳೆದ ಡಿ.4 ರಂದು ಉಳ್ಳಾಲದ ಸಂತೋಷನಗರ ಎಂಬಲ್ಲಿ ಕಾರಿನಲ್ಲಿ ನಿಷೇಧಿತ ಸುಮಾರು 132 ಗ್ರಾಂ ತೂಕದ Methamphetamine ಮತ್ತು 250 LSD ಸ್ಟ್ಯಾಂಪ್ ಡ್ರಗ್ಗನ್ನ ಅಕ್ರಮವಾಗಿ ಮಾರಾಟ ಮಾಡಲು ಬಂದಿದ್ದ ಶಿಶಿರ್ ದೇವಾಡಿಗ ಮತ್ತು ಸುಶಾನ್ ಎಲ್ ಎಂಬವರನ್ನ ಎಸಿಪಿ ಧನ್ಯ ನಾಯಕ್ ನೇತೃತ್ವದ ಆಂಟಿ ಡ್ರಗ್ಸ್ ತಂಡವು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ವಸ್ತು ಮತ್ತು ಮಾರಕಾಯುಧಗಳನ್ನ ವಶಪಡಿಸಿಕೊಂಡಿತ್ತು. ಬಂಧಿತ ಆರೋಪಿಗಳಿಗೆ ಮಾದಕ ವಸ್ತುವನ್ನು ಸರಬರಾಜು ಮಾಡಿ ತಲೆಮರೆಸಿಕೊಂಡಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಆಶಿತ್ ಯಾನೆ ಅಶ್ವಿತ್ ಅಲಿಯಾಸ್ ಆಶು ಎಂಬವರನ್ನು ಬಂಧಿಸಲಾಗಿದೆ. ಕೋಟೆಕಾರು ಗ್ರಾಮದ ಮಾಡೂರು ಸಾಯಿ ಮಂದಿರದ ಸಮೀಪದ ಗ್ರೌಂಡ್ ಬಳಿ ಅವಿತಿದ್ದ ಆಶಿತನ್ನು ಎಸಿಪಿ ನೇತೃತ್ವದ ತಂಡ ಬಂಧಿಸಿದ್ದು, ಆತನಲ್ಲಿದ್ದ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ 100 ಗ್ರಾಂ ತೂಕದ ಎಂ.ಡಿ.ಎಂ.ಎ, 30,000 ರೂಪಾಯಿ ಮೌಲ್ಯದ 600 ಗ್ರಾಂ ತೂಕದ ಗಾಂಜಾ ಮತ್ತು ಮೋಟಾರ್ ಬೈಕೊಂದನ್ನ ವಶ ಪಡಿಸಿಕೊಳ್ಳಲಾಗಿದೆ.


ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ನಿರ್ದೇಶನದಂತೆ ನಡೆದ ಕಾರ್ಯಾಚರಣೆಯಲ್ಲಿ ಎಸಿಪಿ ಧನ್ಯ ನಾಯಕ್, ಉಳ್ಳಾಲ ಠಾಣಾ ಪೊಲೀಸ್ ನಿರೀಕ್ಷಕರಾದ ಬಾಲಕೃಷ್ಣ ಹೆಚ್.ಎನ್, ಪಿಎಸ್ಐಗಳಾದ ಶೀತಲ್ ಅಲಗೂರ, ಸಂತೋಷ ಕುಮಾರ್ ಡಿ, ಪಿಎಸ್ಐ ಪುನೀತ್ ಗಾಂವ್ಕರ್, ಸಿಬ್ಬಂದಿಗಳಾದ ಸಾಜು ನಾಯರ್, ಮಹೇಶ್, ಶಿವಕುಮಾರ್ ಇದ್ದರು.
Ullal drug peddler arrested by ACP team in Mangalore.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am