ಬ್ರೇಕಿಂಗ್ ನ್ಯೂಸ್
12-12-23 05:33 pm Bangalore Correspondent ಕ್ರೈಂ
ಬೆಂಗಳೂರು, ಡಿ 12: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಾರಲು ಸಂಗ್ರಹಿಸಿಟ್ಟಿದ್ದ 21 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದ್ದು, ವಿದೇಶಿ ಪ್ರಜೆಯೊಬ್ಬನನ್ನು ಬಂಧಿಸಲಾಗಿದೆ.
ನಗರದ ಸಿಸಿಬಿ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
2023 ಮುಗಿದು 2024 ಆರಂಭವಾಗಲಿದೆ. ಡಿ. 31ರಂದು ರಾತ್ರಿ ಹೊಸ ವರ್ಷಾಚರಣೆಗೆ ಹಲವೆಡೆ ಪಾರ್ಟಿಗಳನ್ನು ಆಯೋಜಿಸಲಾಗುತ್ತಿದೆ. ಕೆಲ ಪಾರ್ಟಿಗಳಿಗೆ ಡ್ರಗ್ಸ್ ಪೂರೈಸಲು ಆರೋಪಿ ಸಜ್ಜಾಗಿದ್ದ' ಎಂದು ಕಮಿಷನರ್ ಬಿ.ದಯಾನಂದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
'ಬಂಧಿತ ಆರೋಪಿ, ಪೆಡ್ಲರ್ ಆಗಿದ್ದಾನೆ. ತನ್ನದೇ ತಂಡ ಕಟ್ಟಿಕೊಂಡು ಡ್ರಗ್ಸ್ ಮಾರುತ್ತಿದ್ದ. ಈತನಿಂದ 16 ಕೆ.ಜಿ ಎಂಡಿಎಂಎ, 500 ಗ್ರಾಂ ಕೊಕೇನ್, ಮೂರು ತೂಕದ ಯಂತ್ರ, ಮೊಬೈಲ್ ಜಪ್ತಿ ಮಾಡಲಾಗಿದೆ' ಎಂದರು.
ವಿದೇಶಿ ಪ್ರಜೆಯಾಗಿರುವ ಆರೋಪಿಯು ಒಂದು ವರ್ಷದ ಹಿಂದೆ ಬ್ಯುಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದು, ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ. 2024ರ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮಾದಕ ವ್ಯಸನಿಗಳಿಗೆ ನಿಷೇಧಿತ ಡ್ರಗ್ಸ್ ಮತ್ತು ಕೊಕೇನ್ ಅನ್ನು ಅತಿ ಹೆಚ್ಚು ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ದೆಹಲಿ, ಮುಂಬೈ ಹಾಗೂ ಇತರೆ ರಾಜ್ಯಗಳಲ್ಲಿ ನೆಲೆಸಿರುವ ವಿದೇಶಿ ಮೂಲದ ವ್ಯಕ್ತಿಗಳಿಂದ ಚೂಡಿದಾರ್ ಬಟ್ಟೆ, ಬೆಡ್ಶೀಟ್ ಕವರ್ಗಳಲ್ಲಿ, ಸೋಪ್ ಬಾಕ್ಸ್ ಮತ್ತು ಚಾಕೊಲೇಟ್ ಬಾಕ್ಸ್ಗಳಲ್ಲಿ ಮಾದಕ ವಸ್ತುಗಳನ್ನು ಅಡಗಿಸಿ ಯಾರಿಗೂ ಅನುಮಾನ ಬರದಂತೆ ಖರೀದಿಸಿಕೊಂಡು ತರುತ್ತಿದ್ದ ಮತ್ತು ಅವುಗಳನ್ನು ತನ್ನ ಮನೆಯಲ್ಲಿರಿಸಿಕೊಂಡಿದ್ದ.
ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ಕೈಗೊಂಡ ಸಿಸಿಬಿ ಪೊಲೀಸರ ತಂಡ ಆರೋಪಿಯನ್ನ ಬಂಧಿಸಿದೆ. ಆರೋಪಿಯು ಹೊಸ ವರ್ಷದ ಆಚರಣೆಯ ಸಮಯದಲ್ಲಿ ಹೆಚ್ಚಿನ ಬೆಲೆಗೆ ಬೆಂಗಳೂರು ನಗರದಲ್ಲಿ ನಡೆಯುವ ಪಾರ್ಟಿಗಳಿಗೆ, ಗ್ರಾಹಕರುಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಐಟಿ/ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದಿಸುವ ಉದ್ದೇಶದಿಂದ ಮಾದಕ ವಸ್ತುಗಳನ್ನು ಸಂಗ್ರಹಿಸಿ ಗೌಪ್ಯವಾಗಿ ಶೇಖರಿಸಿಕೊಂಡಿರುವುದು ಪೊಲೀಸರ ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದೆ. ಆರೋಪಿಯ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಎನ್.ಡಿ.ಪಿ.ಎಸ್. ಕಾಯ್ದೆ ಮತ್ತು ವಿದೇಶಿ ಕಾಯ್ದೆಯಡಿ ಪ್ರಕರಣ ದಾಖಲಿಸಲಿಸಿಕೊಳ್ಳಲಾಗಿದೆ.
Rs 21 crore was collected for sale on New Year's Eve. Drugs worth Rs 1,000 crore have been seized and a foreign national has been arrested. The CCB police in the city conducted a special operation and arrested the accused.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am