ಬ್ರೇಕಿಂಗ್ ನ್ಯೂಸ್
13-12-23 09:07 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ರಾತ್ರಿ ನಿಲ್ಲಿಸಿದ್ದ ಸಿಟಿ ಬಸ್ಸಿನ ಎರಡು ಬ್ಯಾಟರಿಗಳನ್ನ ಕಳ್ಳನೋರ್ವ ಗೋಣಿ ಚೀಲವನ್ನ ಮುಖಕ್ಕೆ ಅಡ್ಡಲಾಗಿ ಹಿಡಿದು ಬಂದು ಸಿಸಿ ಕ್ಯಾಮೆರಾಕ್ಕೆ ತುರುಕಿ ಕಳವು ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಪಲ ಬಗಂಬಿಲದಲ್ಲಿ ಬುಧವಾರ ನಸುಕಿನ ಜಾವ ನಡೆದಿದ್ದು, ಕಳ್ಳನ ಕೈಚಳಕ ಬಸ್ಸಿನ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ಕುಂಪಲ- ಕೊಟ್ಟಾರ ನಡುವೆ ಓಡಾಟ ನಡೆಸುವ ರೂಟ್ ನಂಬರ್ 44 ಮೂಕಾಂಬಿಕಾ ಟ್ರಾವೆಲ್ಸ್ ಸಿಟಿ ಬಸ್ಸನ್ನು ನಿನ್ನೆ ರಾತ್ರಿ ಓಡಾಟ ಮುಗಿಸಿ ಕುಂಪಲದ ಬಗಂಬಿಲ ಎಂಬಲ್ಲಿ ನಿಲ್ಲಿಸಲಾಗಿತ್ತು. ನಸುಕಿನ ವೇಳೆ ಬಸ್ಸಿನೊಳಗೆ ಮುಖಕ್ಕೆ ಗೋಣಿ ಚೀಲವನ್ನು ಅಡ್ಡಲಾಗಿ ಹಿಡಿದು ನುಗ್ಗಿದ ಕಳ್ಳನೋರ್ವ ಗೋಣಿ ಚೀಲವನ್ನ ಸಿಸಿ ಕ್ಯಾಮೆರಾಕ್ಕೆ ತುರುಕಿ ಬಸ್ಸಿನ ಎರಡು ಬ್ಯಾಟರಿ ಹಾಗೂ ಕೇಬಲ್ ಗಳನ್ನು ಕಳವು ಮಾಡಿದ್ದಾನೆ. ಬಸ್ಸು ಹಳೆಯದಾದರೂ ಅದರೊಳಗಿದ್ದ ಸಿಸಿ ಟಿವಿ ಸುಸ್ಥಿತಿಯಲ್ಲಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಚಿತ್ರಣ ಅದರಲ್ಲಿ ದಾಖಲಾಗಿದೆ.

ಸುಮಾರು 40,000 ರೂಪಾಯಿ ಮೌಲ್ಯದ ಬ್ಯಾಟರಿಗಳನ್ನ ಕಳವು ಮಾಡಲಾಗಿದ್ದು ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಪಲ ಪ್ರದೇಶದಲ್ಲಿ ಬೆರಳೆಣಿಕೆಯಷ್ಟೇ ಬಸ್ಸುಗಳು ಓಡಾಟ ನಡೆಸುತ್ತಿದ್ದು ಬ್ಯಾಟರಿ ಇಲ್ಲದ ಬಸ್ಸು ಬುಧವಾರ ಓಡಾಟ ನಡೆಸದೆ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.
Mangalore Bus battery stolen, covers Cc camera with sack cloth at Ullal. Video of this goes viral on social media.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm