ಬ್ರೇಕಿಂಗ್ ನ್ಯೂಸ್
14-12-23 08:21 am Mangaluru Correspondent ಕ್ರೈಂ
ಉಳ್ಳಾಲ, ಡಿ.14: ನಡುರಾತ್ರಿ ಶಾಲೆ ಎದುರು ಬಿಯರ್ ಕುಡಿದು ಬಾಟಲಿಯನ್ನ ರಸ್ತೆಗೆ ಎಸೆದವರನ್ನ ಪ್ರಶ್ನಿಸಿದ ಯುವಕನನ್ನ ಇರಿದು ಕೊಲೆ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿಯ ಜಾಯ್ ಲ್ಯಾಂಡ್ ಶಾಲೆ ಬಳಿ ಬುಧವಾರ ರಾತ್ರಿ ನಡೆದಿದೆ.
ಕೊಲ್ಯ ಸಾರಸ್ವತ ಕಾಲನಿ ಜಾಯ್ ಲ್ಯಾಂಡ್ ಶಾಲಾ ಬಳಿ ನಿವಾಸಿ ವರುಣ್ ಗಟ್ಟಿ(28)ಕೊಲೆಯಾದ ಯುವಕ. ಬುಧವಾರ ರಾತ್ರಿ 10.45ರ ವೇಳೆಗೆ ಜಾಯ್ ಲ್ಯಾಂಡ್ ಆಂಗ್ಲ ಮಾಧ್ಯಮ ಶಾಲೆಯ ಎದುರುಗಡೆಯ ಕಟ್ಟೆಯೊಂದರಲ್ಲಿ ಕುಳಿತು ಆರೋಪಿ ಸೂರಜ್ ಮತ್ತು ರವಿರಾಜ್ ಎಂಬವರು ಬಿಯರ್ ಕುಡಿದು ಬಾಟಲಿಯನ್ನ ರಸ್ತೆಗೆ ಎಸೆದಿದ್ದರೆನ್ನಲಾಗಿದೆ. ಈ ವೇಳೆ ತನ್ನ ಮನೆಯಲ್ಲಿದ್ದ ವರುಣ್ ಮತ್ತು ಆತನ ಸ್ನೇಹಿತ ಅಕ್ಷಯ್ ಶಾಲೆಯ ಮುಂದೆ ಬಿಯರ್ ಬಾಟಲಿ ಯಾಕೆ ಎಸೆಯುತ್ತೀರಾ ಎಂದು ಪ್ರಶ್ನಿಸಿದ್ದಾರೆ.



ಈ ವೇಳೆ ಇತ್ತಂಡಗಳ ನಡುವೆ ವಾಗ್ವಾದ, ತಳ್ಳಾಟ ನಡೆದಿದ್ದು ಸೂರಜ್, ವರುಣ್ ಬೆನ್ನಿಗೆ ಹರಿತವಾದ ಆಯುಧದಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ವರುಣ್ ಸಮೀಪದ ತನ್ನ ಮನೆ ಕಡೆ ನಡೆದು ಹೋಗಿದ್ದು ಆತನ ಸಹೋದರ ಶರಣ್ ಮತ್ತು ಸ್ನೇಹಿತರು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ವರುಣ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳದ ರಸ್ತೆಯುದ್ದಕ್ಕೂ ವರಣ್ ರಕ್ತ ಹರಿದಿದೆ.
ಇರಿದು ಕೊಲೆ ಮಾಡಿದ ಸೂರಜ್ ಮತ್ತು ಆತನೊಂದಿಗಿದ್ದ ರವಿರಾಜ್ ಸಾರಸ್ವತ ಕಾಲೊನಿ ನಿವಾಸಿಗಳಾಗಿದ್ದು ಇಬ್ಬರನ್ನೂ ಕ್ಷಿಪ್ರವಾಗಿ ಉಳ್ಳಾಲ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರವಿರಾಜ್ ಸೋಮೇಶ್ವರ ಗ್ರಾಮ ಪಂಚಾಯತ್ ಮಾಜಿ ಸದಸ್ಯನಾಗಿದ್ದು ಸೂರಜ್ ಮರಳು ಸಾಗಿಸುವ ಲಾರಿ ಚಾಲಕನಾಗಿದ್ದಾನೆ.
ಮೃತ ವರುಣ್ ಮಂಗಳೂರು ಮೂಡಾದ ಕಮೀಷನರ್ ಅವರ ವಾಹನದ ಚಾಲಕನಾಗಿದ್ದರು. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
28 year old youth murdered at Saraswathi Colony in Ullal, Mangalore for questioning miscrents for throwing beer bottle. The deceased has been identified as Varun Gatti.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am