ಬ್ರೇಕಿಂಗ್ ನ್ಯೂಸ್
14-12-23 08:21 am Mangaluru Correspondent ಕ್ರೈಂ
ಉಳ್ಳಾಲ, ಡಿ.14: ನಡುರಾತ್ರಿ ಶಾಲೆ ಎದುರು ಬಿಯರ್ ಕುಡಿದು ಬಾಟಲಿಯನ್ನ ರಸ್ತೆಗೆ ಎಸೆದವರನ್ನ ಪ್ರಶ್ನಿಸಿದ ಯುವಕನನ್ನ ಇರಿದು ಕೊಲೆ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿಯ ಜಾಯ್ ಲ್ಯಾಂಡ್ ಶಾಲೆ ಬಳಿ ಬುಧವಾರ ರಾತ್ರಿ ನಡೆದಿದೆ.
ಕೊಲ್ಯ ಸಾರಸ್ವತ ಕಾಲನಿ ಜಾಯ್ ಲ್ಯಾಂಡ್ ಶಾಲಾ ಬಳಿ ನಿವಾಸಿ ವರುಣ್ ಗಟ್ಟಿ(28)ಕೊಲೆಯಾದ ಯುವಕ. ಬುಧವಾರ ರಾತ್ರಿ 10.45ರ ವೇಳೆಗೆ ಜಾಯ್ ಲ್ಯಾಂಡ್ ಆಂಗ್ಲ ಮಾಧ್ಯಮ ಶಾಲೆಯ ಎದುರುಗಡೆಯ ಕಟ್ಟೆಯೊಂದರಲ್ಲಿ ಕುಳಿತು ಆರೋಪಿ ಸೂರಜ್ ಮತ್ತು ರವಿರಾಜ್ ಎಂಬವರು ಬಿಯರ್ ಕುಡಿದು ಬಾಟಲಿಯನ್ನ ರಸ್ತೆಗೆ ಎಸೆದಿದ್ದರೆನ್ನಲಾಗಿದೆ. ಈ ವೇಳೆ ತನ್ನ ಮನೆಯಲ್ಲಿದ್ದ ವರುಣ್ ಮತ್ತು ಆತನ ಸ್ನೇಹಿತ ಅಕ್ಷಯ್ ಶಾಲೆಯ ಮುಂದೆ ಬಿಯರ್ ಬಾಟಲಿ ಯಾಕೆ ಎಸೆಯುತ್ತೀರಾ ಎಂದು ಪ್ರಶ್ನಿಸಿದ್ದಾರೆ.



ಈ ವೇಳೆ ಇತ್ತಂಡಗಳ ನಡುವೆ ವಾಗ್ವಾದ, ತಳ್ಳಾಟ ನಡೆದಿದ್ದು ಸೂರಜ್, ವರುಣ್ ಬೆನ್ನಿಗೆ ಹರಿತವಾದ ಆಯುಧದಿಂದ ಇರಿದಿದ್ದಾನೆ. ಗಂಭೀರ ಗಾಯಗೊಂಡ ವರುಣ್ ಸಮೀಪದ ತನ್ನ ಮನೆ ಕಡೆ ನಡೆದು ಹೋಗಿದ್ದು ಆತನ ಸಹೋದರ ಶರಣ್ ಮತ್ತು ಸ್ನೇಹಿತರು ತಕ್ಷಣ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ವರುಣ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಘಟನಾ ಸ್ಥಳದ ರಸ್ತೆಯುದ್ದಕ್ಕೂ ವರಣ್ ರಕ್ತ ಹರಿದಿದೆ.
ಇರಿದು ಕೊಲೆ ಮಾಡಿದ ಸೂರಜ್ ಮತ್ತು ಆತನೊಂದಿಗಿದ್ದ ರವಿರಾಜ್ ಸಾರಸ್ವತ ಕಾಲೊನಿ ನಿವಾಸಿಗಳಾಗಿದ್ದು ಇಬ್ಬರನ್ನೂ ಕ್ಷಿಪ್ರವಾಗಿ ಉಳ್ಳಾಲ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರವಿರಾಜ್ ಸೋಮೇಶ್ವರ ಗ್ರಾಮ ಪಂಚಾಯತ್ ಮಾಜಿ ಸದಸ್ಯನಾಗಿದ್ದು ಸೂರಜ್ ಮರಳು ಸಾಗಿಸುವ ಲಾರಿ ಚಾಲಕನಾಗಿದ್ದಾನೆ.
ಮೃತ ವರುಣ್ ಮಂಗಳೂರು ಮೂಡಾದ ಕಮೀಷನರ್ ಅವರ ವಾಹನದ ಚಾಲಕನಾಗಿದ್ದರು. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
28 year old youth murdered at Saraswathi Colony in Ullal, Mangalore for questioning miscrents for throwing beer bottle. The deceased has been identified as Varun Gatti.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 08:30 pm
HK News Desk
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
09-01-26 05:47 pm
Mangalore Correspondent
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm