ಬ್ರೇಕಿಂಗ್ ನ್ಯೂಸ್
14-12-23 07:05 pm Mangalore Correspondent ಕ್ರೈಂ
ಉಳ್ಳಾಲ, ಡಿ.14: ತಂಗಿಯ ಅನುಕೂಲಕ್ಕಾಗಿ ಮಂಗಳೂರಿನ ಕಾವೂರಿನ ಬಾಡಿಗೆ ಮನೆಗೆ ಕುಟುಂಬ ಸಮೇತ ಸ್ಥಳಾಂತರಗೊಳ್ಳಲು ಸಿದ್ಧತೆಯಲ್ಲಿದ್ದ ಕೊಲ್ಯ ನಿವಾಸಿ ವರುಣ್ ಗಟ್ಟಿ ನಿನ್ನೆ ರಾತ್ರಿ ದಾರುಣವಾಗಿ ಕೊಲೆಯಾಗಿದ್ದು ಕೊಲೆ ಆರೋಪಿಗಳನ್ನ ಉಳ್ಳಾಲ ಪೊಲೀಸರು ಕ್ಷಿಪ್ರವಾಗಿ ಬಂಧಿಸಿದ್ದಾರೆ.
ವರುಣ್ ಗೆ ಇರಿದು ಕೊಲೆ ಮಾಡಿದ ಕೊಲ್ಯ ಸಾರಸ್ವತ ಕಾಲನಿ ನಿವಾಸಿ ಸೂರಜ್ ಮತ್ತು ಆತನೊಂದಿಗಿದ್ದ ಮಾಜಿ ಗ್ರಾ.ಪಂ ಸದಸ್ಯ ರವಿರಾಜ್ ಎಂಬವರನ್ನ ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ರಾತ್ರಿ ಸುಮಾರು 10.45ರ ವೇಳೆಗೆ ಕೊಲ್ಯದ ಜಾಯ್ ಲ್ಯಾಂಡ್ ಆಂಗ್ಲ ಮಾಧ್ಯಮ ಶಾಲೆಯ ಎದುರುಗಡೆಯಲ್ಲಿ ಸೂರಜ್ ಮತ್ತು ರವಿರಾಜ್ ಎಂಬವರು ಬಿಯರ್ ಕುಡಿದು ಬಾಟಲಿಯನ್ನ ಶಾಲಾ ಆವರಣ ಗೋಡೆಗೆ ಎಸೆದಿದ್ದರೆನ್ನಲಾಗಿದೆ. ಈ ವೇಳೆ ಅಲ್ಲೇ ಸಮೀಪದ ಬಾಡಿಗೆ ಮನೆ ನಿವಾಸಿ ವರುಣ್ ಮತ್ತು ಆತನ ಸ್ನೇಹಿತ ಅಕ್ಷಯ್ ಶಾಲೆಯ ಆವರಣ ಗೋಡೆಗೆ ಬಿಯರ್ ಬಾಟಲಿ ಯಾಕೆ ಎಸೆಯುತ್ತೀರಾ ಎಂದು ಪ್ರಶ್ನಿಸಿದ್ದಾರೆ.

ಈ ವೇಳೆ ಇತ್ತಂಡಗಳ ನಡುವೆ ಗಲಾಟೆ ನಡೆದಿದ್ದು ಸೂರಜ್ ಏಕಾಏಕಿ ವರುಣ್ ನ ಎಡ ಪಕ್ಕೆಲುಬು ಮತ್ತು ಎದೆ ಭಾಗಕ್ಕೆ ಹರಿತವಾದ ಆಯುಧದಿಂದ ಇರಿದಿದ್ದಾನೆ. ಒಂದೆರಡು ಇರಿತಕ್ಕೆ ಗಂಭೀರ ಗಾಯಗೊಂಡ ವರುಣ್ ಸಮೀಪದ ತನ್ನ ಮನೆ ಕಡೆ ಹೆಜ್ಜೆ ಹಾಕಿದ್ದು ರಸ್ತೆಯುದ್ದಕ್ಕೂ ರಕ್ತ ಚೆಲ್ಲಿದೆ. ಬಳಿಕ ಆಸ್ಪತ್ರೆಯಲ್ಲಿ ವರುಣ್ ಕೊನೆಯುಸಿರೆಳೆದಿದ್ದಾನೆ. ಒಂದೆರಡು ಇರಿತಕ್ಕೆ ವರುಣ್ ಸಾವುಗೀಡಾಗಲು ಆರೋಪಿ ಸೂರಜ್ ಅದ್ಯಾವ ಆಯುಧ ಬಳಸಿದ್ದಾನೆ ಎಂಬ ಬಗ್ಗೆ ಸಂಶಯಗಳಿವೆ. ಕೋಳಿ ಅಂಕದಲ್ಲಿ ಕೋಳಿಗಳ ಕಾಲಿಗೆ ಕಟ್ಟುವ ಹರಿತವಾದ ಬಾಲ್ (ಸಣ್ಣ ಚೂರಿ) ಬಳಸಿದ್ದ ಎನ್ನುವ ಮಾಹಿತಿಯೂ ಕೇಳಿಬರುತ್ತಿದೆ. ಪೊಲೀಸರು ಇನ್ನಷ್ಟೆ ಕೊಲೆಗೆ ಬಳಸಿದ್ದ ಆಯುಧವನ್ನ ದಸ್ತಗಿರಿ ಮಾಡಬೇಕಿದೆ.

ಘಟನಾ ಸ್ಥಳಕ್ಕೆ ಮಂಗಳೂರು ಕಮೀಷನರ್ ಅನುಪಮ್ ಅಗರ್ ವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಮಹಜರು ನಡೆಸುವ ಸಲುವಾಗಿ ದಿನವಿಡೀ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿದ್ದು ಜಾಯ್ ಲ್ಯಾಂಡ್ ಶಾಲಾ ಮಕ್ಕಳಿಗೂ ಶಾಲಾಡಳಿತ ರಜೆ ಘೋಷಿಸಿತ್ತು. ಸಂಜೆ ವೇಳೆ ಮೃತ ವರುಣ್ ನ ಮೃತದೇಹದ ಅಂತ್ಯಕ್ರಿಯೆ ನಡೆದಿದೆ.
ನಾಳೆಯೇ ಮನೆ ಬದಲಿಸಲಿದ್ದರು !
ಕೊಲ್ಯ ಜಾಯ್ ಲ್ಯಾಂಡ್ ಶಾಲೆ ಬಳಿಯ ಬಾಡಿಗೆ ಮನೆ ನಿವಾಸಿಗಳಾದ ಬಾಲಕೃಷ್ಣ ಗಟ್ಟಿ, ಸುಮಿತ್ರ ದಂಪತಿಯ ಮೂವರು ಮಕ್ಕಳಲ್ಲಿ ಮೃತ ವರುಣ್ ಮನೆಯ ಹಿರಿ ಮಗನಾಗಿದ್ದು ಮೂಡಾಡಲ್ಲಿ ಕಮೀಷನರ್ ಅವರ ವಾಹನ ಚಾಲಕನಾಗಿದ್ದ. ವರುಣ್ ತಂಗಿ ವರ್ಷಾ ಮಂಗಳೂರು ವಿಮಾನ ನಿಲ್ದಾಣದಲ್ಲಿ ಉದ್ಯೋಗಿಯಾಗಿದ್ದು ಆಕೆಯ ಅನುಕೂಲಕ್ಕಾಗಿ ನಾಳೆ (ಡಿ.15) ಶುಕ್ರವಾರ ಕಾವೂರಿನ ನೂತನ ಬಾಡಿಗೆ ಮನೆಗೆ ಸ್ಥಳಾಂತರಗೊಳ್ಳಲು ಕುಟುಂಬ ಸಿದ್ಧತೆ ನಡೆಸಿತ್ತು. ಆದರೆ ಮನೆಮಗನ ಅಕಾಲಿಕ ಮರಣವು ಕುಟುಂಬವನ್ನ ಶೋಕ ಸಾಗರದಲ್ಲಿ ಮುಳುಗಿಸಿದೆ.
Mangalore Ullal murder near school, two arrested over beer bootle. Police commissioner Agarwal visited the spot and spoke to the family.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm