ಬ್ರೇಕಿಂಗ್ ನ್ಯೂಸ್
15-12-23 09:18 pm Mangalore Correspondent ಕ್ರೈಂ
ಬಂಟ್ವಾಳ, ಡಿ.15: ಮೂರು ಮಕ್ಕಳ ತಾಯಿಯನ್ನು ಆಕೆಯ ಗಂಡನ ಸ್ನೇಹಿತನೇ ಮದುವೆಯಾಗುವುದಾಗಿ ನಂಬಿಸಿ, ನಿರಂತರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಕೊನೆಗೆ ಹಲ್ಲೆಗೈದು ಕೊಲ್ಲುವ ಬೆದರಿಕೆ ಹಾಕಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಲೊರೆಟ್ಟೊ ಪದವು ನಿವಾಸಿಯೊಬ್ಬರ ಪತ್ನಿಯಾಗಿದ್ದ ಸಂತ್ರಸ್ತ ಮಹಿಳೆ ತಾನು ಮೋಸ ಹೋದ ಬಗ್ಗೆ ಪೊಲೀಸ್ ದೂರು ನೀಡಿದ್ದಾಳೆ. ನರಿಕೊಂಬು ನಿವಾಸಿ ತಸ್ಲೀಂ ಆರೀಫ್ ಆರೋಪಿಯಾಗಿದ್ದು ನಿರಂತರ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದಾನೆಂದು ದೂರು ದಾಖಲಾಗಿದೆ.
ತಸ್ಲೀಂ ಆರೀಫ್ ಗಂಡನ ಸ್ನೇಹಿತನಾಗಿದ್ದು ಆತನ ಜೊತೆ ಮನೆಗೆ ಬರುತ್ತಿದ್ದು, ಸಲುಗೆ ಉಂಟಾಗಿ ಮೊಬೈಲ್ ನಂಬ್ರ ಪಡೆದು, ಗಂಡ ಕೆಲಸಕ್ಕೆ ಹೋದ ಸಮಯ ಮನೆಗೆ ಬರುತ್ತಿದ್ದ. ಸಲುಗೆ ಬರಬರುತ್ತಾ ದೈಹಿಕ ಸಂಪರ್ಕಕ್ಕೆ ಬಂದಾಗ ನಿನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿದ್ದ. ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ. ಕೊನೆಗೆ ಅಕ್ರಮ ಸಂಬಂಧ ಗಂಡನಿಗೆ ತಿಳಿದು ಅವಳಿಂದ ದೂರ ಇದ್ದ.
ಬಳಿಕ ಆರೋಪಿಯೊಂದಿಗೆ ಸಂತ್ರಸ್ತ ಮಹಿಳೆ ಬಾಡಿಗೆ ಮನೆಯಲ್ಲಿ ವಾಸವಿದ್ಧಳು. ಮೂರು ತಿಂಗಳಿನಿಂದ ಮಹಿಳೆಯನ್ನು ಪಾಣೆಮಂಗಳೂರು ಗ್ರಾಮದ ಜೈನರ ಪೇಟೆಯಲ್ಲಿ ಬಾಡಿಗೆ ಮನೆ ಮಾಡಿ ಕೂರಿಸಿದ್ದ. ಇದೀಗ ಆರೋಪಿ ತಸ್ಲೀಂ ಕುಲ್ಲಕ ಕಾರಣಕ್ಕೆ ಸಂತ್ರಸ್ತೆಯ ಮುಖಕ್ಕೆ, ಬಾಯಿಗೆ ಕೈಯಿಂದ ಹೊಡೆದು ಸೊಂಟಕ್ಕೆ ಒದ್ದಿರುವುದಲ್ಲದೆ, ಅವಾಚ್ಯ ಶಬ್ದಗಳಿಂದ ಬೈದು, ನಿನ್ನನ್ನು ಮತ್ತು ಮಕ್ಕಳನ್ನು ಕೊಲ್ಲದೇ ಬಿಡುವುದಿಲ್ಲ ಎಂದು ಹೇಳಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
A case has been registered at Bantwal city police station against a mother of three children for allegedly making constant physical contact with her husband's friend on the pretext of marrying her.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm