ಬ್ರೇಕಿಂಗ್ ನ್ಯೂಸ್
17-12-23 08:56 pm Udupi Correspondent ಕ್ರೈಂ
ಉಡುಪಿ, ಡಿ.17: ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಈ ವೇಳೆ ತಾನು ವೈದ್ಯನೆಂದು ಹೇಳಿಕೊಂಡು ಬ್ರಹ್ಮಾವರ ತಾಲೂಕಿನ ಕಂಬಳಗದ್ದೆ ಕ್ರಾಸ್ನ ಕುಂಜಾಲಿನಲ್ಲಿ ಕ್ಲಿನಿಕ್ ಇಟ್ಟುಕೊಂಡು ಆಯುರ್ವೇದಿಕ್, ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ಬಿಕಾಂ ಪದವೀಧರನೊಬ್ಬ ಸಿಕ್ಕಿಬಿದ್ದಿದ್ದಾನೆ.
ಬಿಕಾಂ ಪದವಿ ಪಡೆದಿರುವ ಸಂದೇಶ್ ರಾವ್ ಕುಂಜಾಲಿನಲ್ಲಿ ಶ್ರೀಸೂರ್ಯನಾರಾಯಣ ಸ್ವಾಮಿ ಹೆಸರಿನ ಆಯುರ್ವೇದಿಕ್ ಕೇಂದ್ರ ತೆರೆದು ಚಿಕಿತ್ಸೆ ನೀಡುತ್ತಿದ್ದನು. ಈ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದಾಗ ಸಂದೇಶ್ ರಾವ್ ವೈದ್ಯನಲ್ಲ, ಆತ ನಕಲಿ ವೈದ್ಯ ಎಂದು ತಿಳಿದುಬಂದಿದೆ. ಸದ್ಯ, ಕ್ಲಿನಿಕ್ ಜಪ್ತಿ ಮಾಡಿದ ಆರೋಗ್ಯಾಧಿಕಾರಿಗಳು, ಆರೋಪಿ ವಿರುದ್ಧ ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ಆರೋಗ್ಯಾಧಿಕಾರಿಗಳ ದಾಳಿ
ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಪತ್ತೆ ಹಿನ್ನೆಲೆ ಆರೋಗ್ಯಾಧಿಕಾರಿಗಳು ಇಂದು ಜಿಲ್ಲೆಯ ಹಲವೆಡೆ ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ್ದರು. ಉಡುಪಿ, ಕುಂದಾಪುರ ತಾಲೂಕಿನ ಏಳು ಕಡೆ ದಾಳಿ ನಡೆಸಿದಾಗ ನಕಲಿ ವೈದ್ಯರು, ಅನುಮತಿ ರಹಿತ ಕ್ಲಿನಿಕ್ಗಳು ಪತ್ತೆಯಾಗಿವೆ. ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ ಸೀಜ್ ಮಾಡಿ ಕೆಪಿಎಂಇ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪುಂದದ ಸುಷ್ಮಾ ಕ್ಲಿನಿಕಲ್ ಲ್ಯಾಬ್ ಸೀಜ್ ಮಾಡಿ ಕೇಸ್ ದಾಖಲು ಮಾಡಲಾಗಿದ್ದು, ಕುಂದಾಪುರದ ಬಯೋಲಿನ್ ಕ್ಲಿನಿಕಲ್ ಲ್ಯಾಬ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಆರೂರಿನಲ್ಲಿ ಆರೋಗ್ಯಾಧಿಕಾರಿಗಳು ಒಂದು ಕ್ಲಿನಿಕ್ ಜಪ್ತಿ ಮಾಡಿದ್ದಾರೆ.
ಆಯುರ್ವೇದಿಕ್ ನೋಂದಣಿಯಲ್ಲಿ ಅಲೋಪತಿ ಕ್ಲಿನಿಕ್ ನಡೆಸುತ್ತಿದ್ದ ವಿಚಾರ ಪತ್ತೆಯಾಗಿದೆ. ಆದಿ ಉಡುಪಿಯ ಧನ್ವಂತರಿ ಕ್ಲಿನಿಕ್, ನಾವುಂದದ ನಂಬಿಯಾರ್ ಕ್ಲಿನಿಕ್ನಲ್ಲಿ ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ವಿಚಾರ ತಿಳಿದುಬಂದಿದೆ.
Udupi Health Department raid on illegal clinics, B COM graduate arrested for posing as Ayurveda doctor.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm