ಬ್ರೇಕಿಂಗ್ ನ್ಯೂಸ್
17-12-23 08:56 pm Udupi Correspondent ಕ್ರೈಂ
ಉಡುಪಿ, ಡಿ.17: ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ಗಳ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಈ ವೇಳೆ ತಾನು ವೈದ್ಯನೆಂದು ಹೇಳಿಕೊಂಡು ಬ್ರಹ್ಮಾವರ ತಾಲೂಕಿನ ಕಂಬಳಗದ್ದೆ ಕ್ರಾಸ್ನ ಕುಂಜಾಲಿನಲ್ಲಿ ಕ್ಲಿನಿಕ್ ಇಟ್ಟುಕೊಂಡು ಆಯುರ್ವೇದಿಕ್, ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ಬಿಕಾಂ ಪದವೀಧರನೊಬ್ಬ ಸಿಕ್ಕಿಬಿದ್ದಿದ್ದಾನೆ.
ಬಿಕಾಂ ಪದವಿ ಪಡೆದಿರುವ ಸಂದೇಶ್ ರಾವ್ ಕುಂಜಾಲಿನಲ್ಲಿ ಶ್ರೀಸೂರ್ಯನಾರಾಯಣ ಸ್ವಾಮಿ ಹೆಸರಿನ ಆಯುರ್ವೇದಿಕ್ ಕೇಂದ್ರ ತೆರೆದು ಚಿಕಿತ್ಸೆ ನೀಡುತ್ತಿದ್ದನು. ಈ ಕ್ಲಿನಿಕ್ ಮೇಲೆ ಆರೋಗ್ಯಾಧಿಕಾರಿಗಳು ದಾಳಿ ನಡೆಸಿದಾಗ ಸಂದೇಶ್ ರಾವ್ ವೈದ್ಯನಲ್ಲ, ಆತ ನಕಲಿ ವೈದ್ಯ ಎಂದು ತಿಳಿದುಬಂದಿದೆ. ಸದ್ಯ, ಕ್ಲಿನಿಕ್ ಜಪ್ತಿ ಮಾಡಿದ ಆರೋಗ್ಯಾಧಿಕಾರಿಗಳು, ಆರೋಪಿ ವಿರುದ್ಧ ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ಆರೋಗ್ಯಾಧಿಕಾರಿಗಳ ದಾಳಿ
ರಾಜ್ಯದಲ್ಲಿ ಭ್ರೂಣ ಹತ್ಯೆ ಕೇಸ್ ಪತ್ತೆ ಹಿನ್ನೆಲೆ ಆರೋಗ್ಯಾಧಿಕಾರಿಗಳು ಇಂದು ಜಿಲ್ಲೆಯ ಹಲವೆಡೆ ಲ್ಯಾಬ್, ಕ್ಲಿನಿಕ್ಗಳ ಮೇಲೆ ದಾಳಿ ನಡೆಸಿದ್ದರು. ಉಡುಪಿ, ಕುಂದಾಪುರ ತಾಲೂಕಿನ ಏಳು ಕಡೆ ದಾಳಿ ನಡೆಸಿದಾಗ ನಕಲಿ ವೈದ್ಯರು, ಅನುಮತಿ ರಹಿತ ಕ್ಲಿನಿಕ್ಗಳು ಪತ್ತೆಯಾಗಿವೆ. ಪರವಾನಗಿ ಇಲ್ಲದ ಲ್ಯಾಬ್, ಕ್ಲಿನಿಕ್ ಸೀಜ್ ಮಾಡಿ ಕೆಪಿಎಂಇ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪುಂದದ ಸುಷ್ಮಾ ಕ್ಲಿನಿಕಲ್ ಲ್ಯಾಬ್ ಸೀಜ್ ಮಾಡಿ ಕೇಸ್ ದಾಖಲು ಮಾಡಲಾಗಿದ್ದು, ಕುಂದಾಪುರದ ಬಯೋಲಿನ್ ಕ್ಲಿನಿಕಲ್ ಲ್ಯಾಬ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಆರೂರಿನಲ್ಲಿ ಆರೋಗ್ಯಾಧಿಕಾರಿಗಳು ಒಂದು ಕ್ಲಿನಿಕ್ ಜಪ್ತಿ ಮಾಡಿದ್ದಾರೆ.
ಆಯುರ್ವೇದಿಕ್ ನೋಂದಣಿಯಲ್ಲಿ ಅಲೋಪತಿ ಕ್ಲಿನಿಕ್ ನಡೆಸುತ್ತಿದ್ದ ವಿಚಾರ ಪತ್ತೆಯಾಗಿದೆ. ಆದಿ ಉಡುಪಿಯ ಧನ್ವಂತರಿ ಕ್ಲಿನಿಕ್, ನಾವುಂದದ ನಂಬಿಯಾರ್ ಕ್ಲಿನಿಕ್ನಲ್ಲಿ ಅಲೋಪತಿ ಚಿಕಿತ್ಸೆ ನೀಡುತ್ತಿದ್ದ ವಿಚಾರ ತಿಳಿದುಬಂದಿದೆ.
Udupi Health Department raid on illegal clinics, B COM graduate arrested for posing as Ayurveda doctor.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am