ಬ್ರೇಕಿಂಗ್ ನ್ಯೂಸ್
19-12-23 03:39 pm Mangalore Correspondent ಕ್ರೈಂ
ಮಂಗಳೂರು, ಡಿ 19: ಮನೆ ಬಾಡಿಗೆ ಕೊಡುವ ಜಾಹೀರಾತು ನೀಡಿದ್ದ ಹಿರಿಯ ನಾಗರಿಕರಿಗೆ ಸೈನಿಕನೆಂದು ಹೇಳಿ 2.41 ಲಕ್ಷ ರೂಪಾಯಿ ವಂಚಿಸಿದ ಘಟನೆ ನಗರದಲ್ಲಿ ನಡೆದಿದೆ.
ಹಿರಿಯ ನಾಗರೀಕರೊಬ್ಬರು ಅಪಾರ್ಟ್ ಮೆಂಟ್ ಬಾಡಿಗೆ ನೀಡುವ ಬಗ್ಗೆ ಆನ್ಲೈನ್ ಸೈಟ್ವೊಂದರಲ್ಲಿ ಜಾಹೀರಾತು ನೀಡಿದ್ದರು. ಡಿಸೆಂಬರ್ 8 ರಂದು ಯಾರೋ ಅಪರಿಚಿತ ವ್ಯಕ್ತಿ ತಾನು ಆಶೀಶ್ ಕುಮಾರ್ ಹಾಗೂ ತಾನು ಭಾರತೀಯ ಸೇನೆಯಲ್ಲಿ ನೌಕರನಾಗಿರುವುದಾಗಿ ತಿಳಿಸಿ ಮಾತನಾಡಿದ್ದಾನೆ.
ಆನ್ಲೈನ್ ಸೈಟ್ನಲ್ಲಿ ಅಪಾರ್ಟ್ಮೆಂಟ್ ಖಾಲಿ ಇರುವ ಬಗ್ಗೆ ಮಾತನಾಡಿ ನಂತರ ಬಾಡಿಗೆ ವಿಷಯವಾಗಿ ಅವರಲ್ಲಿ ವಿಚಾರಿಸಿಕೊಂಡು ನಂತರ ಮುಂಗಡ ಹಣ ಪಾವತಿಸುವುದಾಗಿಯೂ ಹಾಗೂ ಆರ್ಮಿ ಇಲಾಖೆಯಿಂದ ಕಮಾಂಡಿಂಗ್ ಪೇಮೆಂಟ್ ನಿಂದ ಹಣ ಸಂದಾಯವಾಗುವುದಾಗಿ ತಿಳಿಸಿದ್ದಾನೆ. ವಂಚನೆಗೊಳಗಾದವರು ಮೊದಲಿಗೆ 1/-ರೂ,5/-ರೂ., 49,999/-ರೂ. ಮತ್ತು 49994/-ರೂಗಳ UPI CODE ಗಳನ್ನು ವಾಟ್ಸ ಆಪ್ ಮುಖಾಂತರ ಕಳುಹಿಸಿದ್ದಾರೆ. ನಂತರ ಸತ್ಯವೆಂದು ಭಾವಿಸಿ ತಮ್ಮ ಬಾಬ್ತು ಹೆಚ್ಡಿಎಫ್ಸಿ ಬ್ಯಾಂಕ್, ಮಲ್ಲೇಶ್ವರಂ ಶಾಖೆ ಖಾತೆ ನಂಬರ್ನಿಂದ ಗೂಗಲ್ ಪೇ ಮುಖಾಂತರ ದಿನಾಂಕ ಡಿಸೆಂಬರ್ 8 ರಂದು 1,41,999/-ರೂ ಪಾವತಿಸಿರುತ್ತಾರೆ.
ನಂತರ ದಿನಾಂಕ ಡಿಸೆಂಬರ್ 9 ರಂದು ಈ ಅಪರಿಚಿತ ವ್ಯಕ್ತಿ ಮತ್ತೊಮ್ಮೆ ಕರೆ ಮಾಡಿ ಅದೇ ರೀತಿ ಮತ್ತೊಮ್ಮೆ ಪಾವತಿ ಮಾಡಬೇಕೆಂದು ಹಾಗೂ ಈ ಹಣ ಆರ್ಮಿ ಇಲಾಖೆಯಿಂದ ಕಮಾಂಡಿಂಗ್ ಪೇಮೆಂಟ್ ನಿಂದ ದೊರೆಯುವುದಾಗಿ ನಂಬಿಸಿದ್ದಾನೆ. ಹಿರಿಯ ನಾಗರಿಕರು ಅದೇ ರೀತಿ ಐಎಂಪಿ ಎಸ್ ಮುಖಾಂತರ 1,00,000/-ರೂ ಹಣ ಪಾವತಿಸಿರುತ್ತಾರೆ. ಈ ರೀತಿಯಾಗಿ ಯಾರೋ ಅಪರಿಚಿತ ವ್ಯಕ್ತಿ ಆನ್ಲೈನ್ ಮುಖಾಂತರ ಆಶೀಶ್ ಕುಮಾರ್ ಎಂದು ಪರಿಚಯಿಸಿಕೊಂಡು ತಾನು ಆರ್ಮಿಯಲ್ಲಿ ನೌಕರನೆಂದು ಹಿರಿಯ ನಾಗರಿಕರಿಗೆ ನಂಬಿಸಿ ಆನ್ಲೈನ್ ಮುಖಾಂತರ ಒಟ್ಟು 2,41,999/- ರೂಗಳನ್ನು ಮೋಸದಿಂದ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾನೆ. ಈ ಅಪರಿಚಿತ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೆನ್ ಪೊಲೀಸ್ ಠಾಣೆಯಲ್ಲಿ ವಂಚೆನಗೊಳಗಾದವರು ದೂರು ನೀಡಿದ್ದಾರೆ.
ಆನ್ಲೈನ್ ಮೂಲಕ ಹಣಕಾಸು ವಂಚನೆ ನಡೆಸುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರದ ಅಧೀನ ಸ್ಟಾರ್ಟ್ ಅಪ್ ಸಂಸ್ಥೆ ಸೈಸೆಕ್ ಹೊಸ ಆ್ಯಪ್ ಸಿದ್ಧಪಡಿಸಿದೆ. ಬ್ರೌಸ್ ಸೇಫ್ ಎನ್ನುವ ಆ್ಯಪ್ ಸಿದ್ಧಪಡಿಸಿದ್ದು, ಈ ಆ್ಯಪ್ ಬಳಸಿದರೆ ಲಿಂಕ್ಗಳನ್ನು ಒತ್ತಿ ಹಣ ಕಳೆದುಕೊಳ್ಳುವುದಕ್ಕೆ ಬ್ರೇಕ್ ಬೀಳಲಿದೆ.
In a shocking incident, a senior citizen was duped of Rs 2.41 lakh by posing as a soldier for advertising house rent. A senior citizen had advertised on an online site about renting out an apartment. On December 8, an unidentified person told him that he was Ashish Kumar and that he was an employee of the Indian Army.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm