ಬ್ರೇಕಿಂಗ್ ನ್ಯೂಸ್
19-12-23 04:24 pm Mangalore Correspondent ಕ್ರೈಂ
ಬೆಳ್ತಂಗಡಿ, ಡಿ.19: ಕುಡಿದ ಮತ್ತಿನಲ್ಲಿ ಕಟುಕ ಪತಿಯೋರ್ವ ಪತ್ನಿಯ ಕಣ್ಣು ಮತ್ತು ಕೆನ್ನೆಗೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿರುವ ರಾಕ್ಷಿಸೀ ಕೃತ್ಯ ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಆರೋಪಿ ತನ್ನ ಪುತ್ರಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಶಿಶಿಲ ಬಳಿಯ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ ಎಂಬಾತನೇ ಈ ರಾಕ್ಷಸಿ ಕೃತ್ಯ ಎಸಗಿರುವಾತ. ಪತಿ ಸುರೇಶ್ ಗೌಡ ಕುಡಿದು ಬಂದು ಜಗಳ ಮಾಡಿದ್ದು ಈ ವೇಳೆ ಆಕೆಯ ಕಣ್ಣು ಹಾಗೂ ಕೆನ್ನೆಯ ಭಾಗಕ್ಕೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿದ್ದಾನೆ. ಆ ಬಳಿಕ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಂದೆಯ ದಾಳಿಯಿಂದ ತಾಯಿಯನ್ನು ಬಿಡಿಸಲು ಬಂದ ಪುತ್ರಿಯ ತಲೆ ಹಾಗೂ ಕಣ್ಣಿಗೂ ಆರೋಪಿ ಹೊಡೆದಿದ್ದಾನೆ. ಆಗ ಆಕೆ ಪ್ರಾಣ ಉಳಿಸಿಕೊಳ್ಳಲು ತಂದೆಯಿಂದ ತಪ್ಪಿಸಿಕೊಂಡು ನೆರೆಹೊರೆಯವರಿಗೆ ವಿಚಾರ ತಿಳಿಸಿದ್ದಾಳೆ.
ನೆರೆಹೊರೆಯವರು ಧಾವಿಸುತ್ತಿದ್ದಂತೆ ಆರೋಪಿ ತೋಟದೊಳಗೆ ಓಡಿ ತಪ್ಪಿಸಿಕೊಂಡಿದ್ದಾನೆ. ಪತಿಯಿಂದ ಜೀವ ಉಳಿಸಿಕೊಳ್ಳಲು ಓಡಿ ಹೋಗಿರುವ ಪತ್ನಿ ಇಂದು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಪರೀತವಾಗಿ ಗಾಯಗೊಂಡ ತಾಯಿ ಹಾಗೂ ಪುತ್ರಿಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, a drunk butcher bit his wife on the eyes and cheeks and chopped off her flesh at Shishila village in Belthangady taluk of Dakshina Kannada district late on Monday nigh.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 10:11 pm
HK staffer
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm