ಬ್ರೇಕಿಂಗ್ ನ್ಯೂಸ್
19-12-23 04:24 pm Mangalore Correspondent ಕ್ರೈಂ
ಬೆಳ್ತಂಗಡಿ, ಡಿ.19: ಕುಡಿದ ಮತ್ತಿನಲ್ಲಿ ಕಟುಕ ಪತಿಯೋರ್ವ ಪತ್ನಿಯ ಕಣ್ಣು ಮತ್ತು ಕೆನ್ನೆಗೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿರುವ ರಾಕ್ಷಿಸೀ ಕೃತ್ಯ ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಆರೋಪಿ ತನ್ನ ಪುತ್ರಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಶಿಶಿಲ ಬಳಿಯ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ ಎಂಬಾತನೇ ಈ ರಾಕ್ಷಸಿ ಕೃತ್ಯ ಎಸಗಿರುವಾತ. ಪತಿ ಸುರೇಶ್ ಗೌಡ ಕುಡಿದು ಬಂದು ಜಗಳ ಮಾಡಿದ್ದು ಈ ವೇಳೆ ಆಕೆಯ ಕಣ್ಣು ಹಾಗೂ ಕೆನ್ನೆಯ ಭಾಗಕ್ಕೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿದ್ದಾನೆ. ಆ ಬಳಿಕ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಂದೆಯ ದಾಳಿಯಿಂದ ತಾಯಿಯನ್ನು ಬಿಡಿಸಲು ಬಂದ ಪುತ್ರಿಯ ತಲೆ ಹಾಗೂ ಕಣ್ಣಿಗೂ ಆರೋಪಿ ಹೊಡೆದಿದ್ದಾನೆ. ಆಗ ಆಕೆ ಪ್ರಾಣ ಉಳಿಸಿಕೊಳ್ಳಲು ತಂದೆಯಿಂದ ತಪ್ಪಿಸಿಕೊಂಡು ನೆರೆಹೊರೆಯವರಿಗೆ ವಿಚಾರ ತಿಳಿಸಿದ್ದಾಳೆ.
ನೆರೆಹೊರೆಯವರು ಧಾವಿಸುತ್ತಿದ್ದಂತೆ ಆರೋಪಿ ತೋಟದೊಳಗೆ ಓಡಿ ತಪ್ಪಿಸಿಕೊಂಡಿದ್ದಾನೆ. ಪತಿಯಿಂದ ಜೀವ ಉಳಿಸಿಕೊಳ್ಳಲು ಓಡಿ ಹೋಗಿರುವ ಪತ್ನಿ ಇಂದು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಪರೀತವಾಗಿ ಗಾಯಗೊಂಡ ತಾಯಿ ಹಾಗೂ ಪುತ್ರಿಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, a drunk butcher bit his wife on the eyes and cheeks and chopped off her flesh at Shishila village in Belthangady taluk of Dakshina Kannada district late on Monday nigh.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm