ಬ್ರೇಕಿಂಗ್ ನ್ಯೂಸ್
18-11-20 01:28 pm Bangalore Correspondent ಕ್ರೈಂ
ಬೆಂಗಳೂರು, ನ.18 ; ಅತ್ಯಾಚಾರ ಆರೋಪ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜಪೇಟೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಪಿಎಸ್ಐ ವಿಶ್ವನಾಥ್ ಬಿರಾದಾರ್ ಅಮಾನತಾದ ಅಧಿಕಾರಿ. ಇದೇ ವೇಳೆ ಯುವತಿ ವಿರುದ್ಧ ಬಿರಾದಾರ್ ಪ್ರತಿ ದೂರು ಸಲ್ಲಿಸಿದ್ದಾರೆ.
ಸಂತ್ರಸ್ತ ಯುವತಿ, ವಿಶ್ವನಾಥ್ ವಿರುದ್ಧ ಆತ್ಯಾಚಾರ ಆರೋಪದಡಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕರ್ತವ್ಯನಿರತ ಅಧಿಕಾರಿ ವಿರುದ್ಧ ಪ್ರಕರಣ ದಾಖಲಾದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದಕ್ಷಿಣ ಕನ್ನಡ ಎಸ್ಪಿ ವರದಿ ಕಳುಹಿಸಿದ್ದರು. ಇದನ್ನು ಆಧರಿಸಿ ಎಸ್ಐ ವಿಶ್ವನಾಥ್ ಬಿರಾದರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಯುವತಿ ಆರೋಪವೇನು?
ಮೂರು ತಿಂಗಳ ಹಿಂದೆ ಲ್ಯಾಪ್ಟಾಪ್ ಕಳೆದುಹೋಗಿತ್ತು. ಈ ಕುರಿತು ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದು ವಿಚಾರಣೆಗೆ ಠಾಣೆಗೆ ಹೋಗಿದ್ದಾಗ ಎಸ್ಐ ವಿಶ್ವನಾಥ್ ಪರಿಚಯವಾಗಿತ್ತು. ಪ್ರತಿದಿನ ಕರೆ ಮಾಡುವುದು ಹಾಗೂ ಸಂದೇಶ ಕಳುಹಿಸುತ್ತಿದ್ದ. ಹಣದ ಸಹಾಯ ಮಾಡುವಂತೆ ಕೇಳಿದ್ದ. 12 ಲಕ್ಷ ರು.ಗೆ ಒತ್ತಾಯಿಸಿದ್ದ. ನಿನ್ನನ್ನು ಪ್ರೀತಿಸುತ್ತಿದ್ದೇನೆ. ಗುಪ್ತವಾಗಿ ಮಾತನಾಡಬೇಕಿದೆ, ಭೇಟಿಯಾಗುವಂತೆ ಹೇಳಿದ್ದ. ನ.8ರಂದು ತಂದೆ- ತಾಯಿಯನ್ನು ಭೇಟಿ ಮಾಡಿಸಿ, ಮದುವೆ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿ ಮನೆಗೆ ಕರೆದೊಯ್ದಿದ್ದ. ಈ ವೇಳೆ ಮನೆಯಲ್ಲಿ ಆತನ ತಂದೆ- ತಾಯಿ ಇರಲಿಲ್ಲ. ಅತ್ಯಾಚಾರಕ್ಕೆ ಯತ್ನಿಸಿದ್ದು, ಆಕ್ಷೇಪಿಸಿದಾಗ ಸುಮ್ಮನಾಗಿದ್ದ. ಮದುವೆಯಾಗುವುದಾಗಿ ನ.9ರಂದು ಧರ್ಮಸ್ಥಳಕ್ಕೆ ಕರೆತಂದಿದ್ದು, ವಸತಿ ಗೃಹದಲ್ಲಿ ಉಳಿದುಕೊಂಡಿದ್ದಾಗ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಿ ಸಂತ್ರಸ್ತ ಯುವತಿ ಧರ್ಮಸ್ಥಳ ಠಾಣೆಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.

ಪಿಎಸ್ಐ ದೂರಿನಲ್ಲೇನಿದೆ?
ಯುವತಿ ಆಗಸ್ಟ್ನಲ್ಲಿ ಲ್ಯಾಪ್ಟಾಪ್ ಕಳವು ಆಗಿರುವ ಬಗ್ಗೆ ಚಾಮರಾಜಪೇಟೆಯಲ್ಲಿ ದೂರು ದಾಖಲಿಸಿದ್ದರು. ದೂರು ಕೊಡಲು ಬಂದಾಗ ಮೊಬೈಲ್ ಸಂಖ್ಯೆ ಪಡೆದು ತನಿಖೆ ಪ್ರಗತಿ ಬಗ್ಗೆ ವಿಚಾರಿಸುತ್ತಿದ್ದೆ. ನ.8ರಂದು ಸಂಜೆ 5 ಗಂಟೆಯಲ್ಲಿ ಕರೆ ಮಾಡಿದ್ದ ಆಕೆ, ಲ್ಯಾಪ್ಟಾಪ್ ಬಗ್ಗೆ ಮಾಹಿತಿ ಸಿಕ್ಕಿದೆ. ಕೂಡಲೇ, ಬಸವನಗುಡಿಯ ಮ್ಯಾಕ್ ಡೊನಾಲ್ಡ್ಗೆ ಬರುವಂತೆ ಕರೆದಿದ್ದಳು. ಅಲ್ಲದೆ, ಸ್ವಲ್ಪ ತೊಂದರೆಯಲ್ಲಿದ್ದೇನೆ ಎಂದು ಹೇಳಿದ್ದಕ್ಕೆ ಹೋಗಿದ್ದೆ. ಸ್ಥಳಕ್ಕೆ ಹೋಗಿದ್ದಾಗ ಯುವತಿ ವಿವಾಹವಾಗುವಂತೆ ಒತ್ತಾಯಿಸಿದ್ದಳು. ಈಗಾಗಲೇ ನನಗೆ ನಿಶ್ಚಿತಾರ್ಥವಾಗಿದೆ ಎಂದು ತಿಳಿಸಿ, ಅಲ್ಲಿಂದ ವಾಪಸ್ ಆಗಿದ್ದೆ.
ಇದಾದ 10 ನಿಮಿಷಗಳ ಬಳಿಕ ಮತ್ತೆ ಕರೆ ಮಾಡಿ, 'ನೀವು ಬಾರದೆ ಇದ್ದರೆ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ' ಬೆದರಿಸಿದ್ದಳು. ಆಕೆಯ ಸೂಚನೆಯಂತೆ ರೈಲ್ವೆ ನಿಲ್ದಾಣಕ್ಕೆ ಹೋಗಿ ವಿಚಾರಿಸಿದಾಗ, 'ನಾನು ಹೇಳಿದಂತೆ ಕೇಳಬೇಕು. ಇಲ್ಲವಾದರೆ ಪೊಲೀಸ್ ಕಮಿಷನರ್ಗೆ ದೂರು ಕೊಡುತ್ತೇನೆ. ನನ್ನ ಸಾವಿಗೆ ನೀನೆ ಕಾರಣ ಎಂದು ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ' ಎಂದು ಬೆದರಿಸಿದ್ದಳು. ನಂತರ ಬೆದರಿಸಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿದ್ದಳು. 10 ಲಕ್ಷ ಕೊಡಬೇಕು. ಇಲ್ಲವಾದರೆ, ಅತ್ಯಾಚಾರ ಕೇಸ್ ದಾಖಲಿಸಿ, ಕೆಲಸದಿಂದ ತೆಗೆದು ಹಾಕಿಸುತ್ತೇನೆ. ಇದೇ ರೀತಿ, ಹನುಮೇಶ್, ಮಂಜುನಾಥ್ ಎಂಬವರು ಸೇರಿದಂತೆ ಐವರನ್ನು ಜೈಲಿಗೆ ಕಳುಹಿಸಿದ್ದೇನೆ. ನಿನ್ನನ್ನು ಸಹ ಜೈಲಿನಲ್ಲಿ ಕೊಳೆಯುವಂತೆ ಮಾಡುತ್ತೇನೆಂದು ಬೆದರಿಸುತ್ತಿದ್ದಾಳೆ ಎಂದು ಆರೋಪಿಸಿ ಎಸ್ಐ ವಿಶ್ವನಾಥ್ ಬಿರಾದರ್ ದೂರಿನಲ್ಲಿ ಹೇಳಿದ್ದಾರೆ.
Police sub-inspector of Chamarajpet police station here, Vishwanath Biradar, stands suspended. Biradar faces a complaint of rape. The police department decided to suspend him based on a report submitted by Dakshina Kannada district superintendent of police.
03-05-26 12:34 pm
HK News Staffer
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm