ಬ್ರೇಕಿಂಗ್ ನ್ಯೂಸ್
21-12-23 03:52 pm Bangalore Correspondent ಕ್ರೈಂ
ಬೆಂಗಳೂರು, ಡಿ 21: ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿದ ಪತಿಯ ಎದೆಗೆ ಪತ್ನಿ ಚೂರಿ ಇರಿದು ಹತ್ಯೆ ಮಾಡಿರುವ ಘಟನೆ ಹುಳಿಮಾವು ಸಮೀಪದ ಪುಲ್ಲಿಂಗ್ ಪಾಸ್ ಕಾಲೇಜಿನ ಬಳಿ ನಡೆದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಹುಳಿಮಾವು ಪೊಲೀಸರು ಆರೋಪಿ ಪತ್ನಿ ಮನೀಷಾಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಉಮೇಶ್ ದಾಮಿ(27) ಸಾವನ್ನಪ್ಪಿರುವ ವ್ಯಕ್ತಿ. ನೇಪಾಳ ಮೂಲದ ಈ ದಂಪತಿ ಕೆಲ ವರ್ಷಗಳಿಂದ ಬೆಂಗಳೂರಿಗೆ ಬಂದಿದ್ದರು. ಹುಳಿಮಾವಿನಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಪತಿ ಕಾಲೇಜೊಂದರಲ್ಲಿ ಸೆಕ್ಯೂರಿಟಿಯಾಗಿದ್ದರೆ, ಪತ್ನಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದಳು. ಇಬ್ಬರು ಅನೋನ್ಯವಾಗಿದ್ದರು. ಆದರೆ, ಬುಧವಾರ ರಾತ್ರಿ ಉಮೇಶ್ ಸ್ನೇಹಿತನೊಂದಿಗೆ ಮದ್ಯದ ಪಾರ್ಟಿಗೆ ಹೋಗಿ ತಡರಾತ್ರಿ 12 ಗಂಟೆಗೆ ಮನೆಗೆ ಬಂದಿದ್ದನು. ಈ ವೇಳೆ, ಪತ್ನಿ ಯಾರೊಂದಿಗೋ ಪೋನ್ ಕಾಲ್ನಲ್ಲಿ ಮಾತನಾಡುತ್ತಿರುವುದನ್ನು ಗಮನಿಸಿದ್ದಾನೆ. ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿರುವುದಾಗಿ ಅನುಮಾನ ವ್ಯಕ್ತಪಡಿಸಿ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ದಂಪತಿ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ.
ಇದರಿಂದ ಕೋಪದಲ್ಲಿದ್ದ ಮನಿಷಾ ಮನೆಯಲ್ಲಿದ್ದ ಚಾಕುವಿನಿಂದ ಗಂಡನ ಎದೆಗೆ ಚುಚ್ಚಿದ್ದಾಳೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಉಮೇಶ್ ಸಾವನ್ನಪ್ಪಿದ್ದಾನೆ.
ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಹತ್ಯೆ ಪ್ರಕರಣ ದಾಖಲಿಸಿಕೊಂಡು ಮನಿಷಾಳನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
In a shocking incident, a man was stabbed to death by his wife near Pulling Pass College near Hulimavu on suspicion of having an illicit relationship.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm