ಬ್ರೇಕಿಂಗ್ ನ್ಯೂಸ್
21-12-23 03:52 pm Bangalore Correspondent ಕ್ರೈಂ
ಬೆಂಗಳೂರು, ಡಿ 21: ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿದ ಪತಿಯ ಎದೆಗೆ ಪತ್ನಿ ಚೂರಿ ಇರಿದು ಹತ್ಯೆ ಮಾಡಿರುವ ಘಟನೆ ಹುಳಿಮಾವು ಸಮೀಪದ ಪುಲ್ಲಿಂಗ್ ಪಾಸ್ ಕಾಲೇಜಿನ ಬಳಿ ನಡೆದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಹುಳಿಮಾವು ಪೊಲೀಸರು ಆರೋಪಿ ಪತ್ನಿ ಮನೀಷಾಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಉಮೇಶ್ ದಾಮಿ(27) ಸಾವನ್ನಪ್ಪಿರುವ ವ್ಯಕ್ತಿ. ನೇಪಾಳ ಮೂಲದ ಈ ದಂಪತಿ ಕೆಲ ವರ್ಷಗಳಿಂದ ಬೆಂಗಳೂರಿಗೆ ಬಂದಿದ್ದರು. ಹುಳಿಮಾವಿನಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಪತಿ ಕಾಲೇಜೊಂದರಲ್ಲಿ ಸೆಕ್ಯೂರಿಟಿಯಾಗಿದ್ದರೆ, ಪತ್ನಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದಳು. ಇಬ್ಬರು ಅನೋನ್ಯವಾಗಿದ್ದರು. ಆದರೆ, ಬುಧವಾರ ರಾತ್ರಿ ಉಮೇಶ್ ಸ್ನೇಹಿತನೊಂದಿಗೆ ಮದ್ಯದ ಪಾರ್ಟಿಗೆ ಹೋಗಿ ತಡರಾತ್ರಿ 12 ಗಂಟೆಗೆ ಮನೆಗೆ ಬಂದಿದ್ದನು. ಈ ವೇಳೆ, ಪತ್ನಿ ಯಾರೊಂದಿಗೋ ಪೋನ್ ಕಾಲ್ನಲ್ಲಿ ಮಾತನಾಡುತ್ತಿರುವುದನ್ನು ಗಮನಿಸಿದ್ದಾನೆ. ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿರುವುದಾಗಿ ಅನುಮಾನ ವ್ಯಕ್ತಪಡಿಸಿ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ದಂಪತಿ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ.
ಇದರಿಂದ ಕೋಪದಲ್ಲಿದ್ದ ಮನಿಷಾ ಮನೆಯಲ್ಲಿದ್ದ ಚಾಕುವಿನಿಂದ ಗಂಡನ ಎದೆಗೆ ಚುಚ್ಚಿದ್ದಾಳೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಉಮೇಶ್ ಸಾವನ್ನಪ್ಪಿದ್ದಾನೆ.
ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಹತ್ಯೆ ಪ್ರಕರಣ ದಾಖಲಿಸಿಕೊಂಡು ಮನಿಷಾಳನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
In a shocking incident, a man was stabbed to death by his wife near Pulling Pass College near Hulimavu on suspicion of having an illicit relationship.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm