ಬ್ರೇಕಿಂಗ್ ನ್ಯೂಸ್
21-12-23 03:52 pm Bangalore Correspondent ಕ್ರೈಂ
ಬೆಂಗಳೂರು, ಡಿ 21: ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿದ ಪತಿಯ ಎದೆಗೆ ಪತ್ನಿ ಚೂರಿ ಇರಿದು ಹತ್ಯೆ ಮಾಡಿರುವ ಘಟನೆ ಹುಳಿಮಾವು ಸಮೀಪದ ಪುಲ್ಲಿಂಗ್ ಪಾಸ್ ಕಾಲೇಜಿನ ಬಳಿ ನಡೆದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಹುಳಿಮಾವು ಪೊಲೀಸರು ಆರೋಪಿ ಪತ್ನಿ ಮನೀಷಾಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಉಮೇಶ್ ದಾಮಿ(27) ಸಾವನ್ನಪ್ಪಿರುವ ವ್ಯಕ್ತಿ. ನೇಪಾಳ ಮೂಲದ ಈ ದಂಪತಿ ಕೆಲ ವರ್ಷಗಳಿಂದ ಬೆಂಗಳೂರಿಗೆ ಬಂದಿದ್ದರು. ಹುಳಿಮಾವಿನಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಪತಿ ಕಾಲೇಜೊಂದರಲ್ಲಿ ಸೆಕ್ಯೂರಿಟಿಯಾಗಿದ್ದರೆ, ಪತ್ನಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದಳು. ಇಬ್ಬರು ಅನೋನ್ಯವಾಗಿದ್ದರು. ಆದರೆ, ಬುಧವಾರ ರಾತ್ರಿ ಉಮೇಶ್ ಸ್ನೇಹಿತನೊಂದಿಗೆ ಮದ್ಯದ ಪಾರ್ಟಿಗೆ ಹೋಗಿ ತಡರಾತ್ರಿ 12 ಗಂಟೆಗೆ ಮನೆಗೆ ಬಂದಿದ್ದನು. ಈ ವೇಳೆ, ಪತ್ನಿ ಯಾರೊಂದಿಗೋ ಪೋನ್ ಕಾಲ್ನಲ್ಲಿ ಮಾತನಾಡುತ್ತಿರುವುದನ್ನು ಗಮನಿಸಿದ್ದಾನೆ. ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿರುವುದಾಗಿ ಅನುಮಾನ ವ್ಯಕ್ತಪಡಿಸಿ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ದಂಪತಿ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ.
ಇದರಿಂದ ಕೋಪದಲ್ಲಿದ್ದ ಮನಿಷಾ ಮನೆಯಲ್ಲಿದ್ದ ಚಾಕುವಿನಿಂದ ಗಂಡನ ಎದೆಗೆ ಚುಚ್ಚಿದ್ದಾಳೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಉಮೇಶ್ ಸಾವನ್ನಪ್ಪಿದ್ದಾನೆ.
ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಹತ್ಯೆ ಪ್ರಕರಣ ದಾಖಲಿಸಿಕೊಂಡು ಮನಿಷಾಳನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
In a shocking incident, a man was stabbed to death by his wife near Pulling Pass College near Hulimavu on suspicion of having an illicit relationship.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm