ಬ್ರೇಕಿಂಗ್ ನ್ಯೂಸ್
21-12-23 05:56 pm HK News Desk ಕ್ರೈಂ
ಕಲಬುರಗಿ, ಡಿ.21: ಬಾಲಕಿಯರ ಹಾಸ್ಟೆಲ್ನ ಬಾತ್ರೂಮಿನ ಪಕ್ಕ ಕಾಮುಕನೋರ್ವ ಸಿಸಿ ಕ್ಯಾಮರಾ ಅಳವಡಿಸಿದ್ದ ಪ್ರಕರಣ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ನಡೆದಿದೆ. ಹುಡುಗಿಯರು ಸ್ನಾನಕ್ಕೆ ಹೋದ ಸಂದರ್ಭದಲ್ಲಿ ಕ್ಯಾಮರಾ ಕಂಡಿದ್ದಾರೆ. ಕೃತ್ಯ ಎಸಗಿದ್ದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ.
ಸಲೀಂ (34) ಎಂಬಾತನೇ ನೀಚ ಕೃತ್ಯ ಎಸಗಿದ ವ್ಯಕ್ತಿ. ಜೇವರ್ಗಿಯ ಶಾಂತಾ ಕಾಲೊನಿಯಲ್ಲಿನ ಖಾಸಗಿ ಕಟ್ಟಡದಲ್ಲಿ ನಡೆಸುತ್ತಿರುವ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿದ್ದಾರೆ. ಹಾಸ್ಟೆಲ್ಗೆ ಹೊಂದಿಕೊಂಡಂತಿರುವ ಪಕ್ಕದ ಮನೆಯಲ್ಲಿಯೇ ಆರೋಪಿ ವಾಸವಿದ್ದ. ಈತ ಬೆಳ್ಳುಳ್ಳಿ ವ್ಯಾಪಾರ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.
ಎಂದಿನಂತೆ ವಿದ್ಯಾರ್ಥಿನಿಯರು ಸ್ನಾನಕ್ಕೆ ಬಾತ್ ರೂಮಿಗೆ ಹೋದಾಗ ಕಿಟಕಿ ಹೊರಗೆ ಸಿಸಿ ಕ್ಯಾಮರಾ ಕಾಣ್ತಿದಂತೆ ಹೊರಗೆ ಬಂದಿದ್ದಾರೆ. ಅಲ್ಲದೆ ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಅಷ್ಟರಲ್ಲಾಗಲೇ ಸ್ಥಳಕ್ಕೆ ಸ್ಥಳೀಯರು ಆಗಮಿಸಿದ್ದು,ಕಾಮುಕ ಎಸ್ಕೇಪ್ ಆಗಿದ್ದಾನೆ. ಬಳಿಕ ಪೊಲೀಸರು ಮತ್ತು ತಹಶಿಲ್ದಾರ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಸಲೀಂ ಕುಟುಂಬಸ್ಥರನ್ನು ವಿಚಾರಣೆ ನಡೆಸಿ, ಆರೋಪಿಯನ್ನು ಸ್ಥಳಕ್ಕೆ ಕರೆಯಿಸಿ ಬಂಧಿಸಿದ್ದಾರೆ.
ಸ್ನಾನ ಮಾಡುವುದನ್ನು ಸೆರೆಹಿಡಿಯುವ ದುರುದ್ದೇಶದಿಂದ ಆರೋಪಿಯು ಆನ್ಲೈನ್ನಲ್ಲಿ ಸಿಸಿ ಕ್ಯಾಮರಾ ತರಿಸಿದ್ದಾನೆ. ತನ್ನ ಮನೆ ಛಾವಣಿಯಿಂದ ಹಾಸ್ಟೆಲ್ ಕಟ್ಟಡದ ಮೇಲೆ ಜಂಪ್ ಮಾಡಿ ಹಾಸ್ಟೆಲ್ಗೆ ಬಂದಿದ್ದ. ಬಳಿಕ ಉದ್ದದ ಒಂದು ಪೈಪ್ಗೆ ಸಿಸಿ ಕ್ಯಾಮರಾ ಅಳವಡಿಸಿ, ಅದನ್ನು ಬಾಲಕಿಯರ ಬಾತ್ ರೂಂ ಕಿಟಕಿಗೆ ಇಳಿಬಿಟ್ಟಿದ್ದ. ಬಾಲಕಿಯರು ಸ್ನಾನ ಮಾಡುವುದನ್ನು ವೈಫೈ ಮೂಲಕ ತನ್ನ ಮೊಬೈಲ್ನಲ್ಲಿ ವೀಕ್ಷಿಸಲು ಮುಂದಾಗಿದ್ದ ಎಂಬುದು ಪೊಲೀಸ್ ತನಿಖೆಯಿಂದ ಗೊತ್ತಾಗಿದೆ.
ಬಾಲಕಿಯರು ಬೆಳಿಗ್ಗೆ 6 ಗಂಟೆ ವೇಳೆಗೆ ಸ್ನಾನಕ್ಕೆ ಹೋದಾಗ ಕಿಟಕಿಯಲ್ಲಿ ಸಿಸಿ ಕ್ಯಾಮರಾ ಕಾಣಿಸಿದೆ. ವಿಕೃತ ಕಾಮಿ ಕಳೆದ ಎರಡ್ಮೂರು ದಿನಗಳಿಂದ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಹಾಸ್ಟೆಲ್ಗೆ ಭೇಟಿ ನೀಡಿರುವ ಜೇವರ್ಗಿ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಬಾಲಕಿಯರಿಂದ ಮಾಹಿತಿ ಕಲೆ ಹಾಕಿದ್ದಾರೆ. ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಸಲೀಂನನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿ ಬಳಿ ಬಾಲಕಿಯರ ಖಾಸಗಿ ವಿಡಿಯೋ ಇವೆಯಾ ಎಂಬ ಕುರಿತಾಗಿಯೂ ವಿಚಾರಣೆ ಮುಂದುವರೆದಿದೆ.
Police have arrested a man on charges of placing a camera inside the bathroom of the post-matric minorities’ girls’ hostel here on Wednesday.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am