ಬ್ರೇಕಿಂಗ್ ನ್ಯೂಸ್
21-12-23 06:05 pm Mangalore Correspondent ಕ್ರೈಂ
ಬೆಳ್ತಂಗಡಿ, ಡಿ.21: ಸರಕಾರಿ ಸಂಸ್ಥೆಯ ಉದ್ಯೋಗಿಯೊಬ್ಬರು ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಬಸ್ ಹತ್ತುತ್ತಿದ್ದಾಗ ಕರಿಮಣಿ ಸರ ಕಳವಾದ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ತಮಿಳುನಾಡು ಮೂಲದ ಕಳ್ಳಿಯರನ್ನು ಬಂಧಿಸಿದ್ದಾರೆ.
ವಾರಿಜಾ ಅವರು ಡಿ.12ರಂದು ಕೆಎಸ್ಸಾರ್ಟಿಸಿ ಬಸ್ ಹತ್ತುತ್ತಿದ್ದಾಗ 24 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು.
ಪ್ರಕರಣದ ತನಿಖೆ ಸಂದರ್ಭದಲ್ಲಿ ಬೆಳ್ತಂಗಡಿ ಉಪ ನಿರೀಕ್ಷಕ ಚಂದ್ರಶೇಖರ್ ಮತ್ತು ತಂಡದ ಪೊಲೀಸರು ಸಂಶಯದ ಮೇರೆಗೆ ತಮಿಳುನಾಡು ಮೂಲದ ಇಬ್ಬರು ಮಹಿಳೆಯರನ್ನು ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಕಳ್ಳತನ ಒಪ್ಪಿಕೊಂಡಿದ್ದು ಇಬ್ಬರನ್ನೂ ಬಂಧಿಸಿದ್ದಾರೆ. ತಮಿಳುನಾಡಿನ ತಿರುಪೂರ್ ಜಿಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ ಯಾನೆ ಕಾಮಾಚಿ (30) ಬಂಧಿತರಾಗಿದ್ದು ಕದ್ದ ಕರಿಮಣಿ ಸರವನ್ನು ಪೊಲೀಸರಿಗೆ ನೀಡಿದ್ದಾರೆ.
ಆರೋಪಿಗಳು ಈ ಹಿಂದೆ ಬೆಳ್ತಂಗಡಿ ಸೇರಿದಂತೆ ಹಲವು ಕಡೆ ಕಳ್ಳತನ ನಡೆಸಿದ್ದು ವಿಚಾರಣೆ ವೇಳೆ ಮೂಲ್ಕಿ ಮತ್ತು ಬೆಳ್ತಂಗಡಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Belthangady Police have arrested two women on charges of chain snatching. The arrests were made following a recent incident of snatching the mangalasutra of a woman while she was boarding a government bus.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm