ಬ್ರೇಕಿಂಗ್ ನ್ಯೂಸ್
21-12-23 06:05 pm Mangalore Correspondent ಕ್ರೈಂ
ಬೆಳ್ತಂಗಡಿ, ಡಿ.21: ಸರಕಾರಿ ಸಂಸ್ಥೆಯ ಉದ್ಯೋಗಿಯೊಬ್ಬರು ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ಬಸ್ ಹತ್ತುತ್ತಿದ್ದಾಗ ಕರಿಮಣಿ ಸರ ಕಳವಾದ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು ಇಬ್ಬರು ತಮಿಳುನಾಡು ಮೂಲದ ಕಳ್ಳಿಯರನ್ನು ಬಂಧಿಸಿದ್ದಾರೆ.
ವಾರಿಜಾ ಅವರು ಡಿ.12ರಂದು ಕೆಎಸ್ಸಾರ್ಟಿಸಿ ಬಸ್ ಹತ್ತುತ್ತಿದ್ದಾಗ 24 ಗ್ರಾಂ ತೂಕದ ಚಿನ್ನದ ಕರಿಮಣಿ ಸರವನ್ನು ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಹಿಳೆ ದೂರು ನೀಡಿದ್ದರು. ಅದರಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು.
ಪ್ರಕರಣದ ತನಿಖೆ ಸಂದರ್ಭದಲ್ಲಿ ಬೆಳ್ತಂಗಡಿ ಉಪ ನಿರೀಕ್ಷಕ ಚಂದ್ರಶೇಖರ್ ಮತ್ತು ತಂಡದ ಪೊಲೀಸರು ಸಂಶಯದ ಮೇರೆಗೆ ತಮಿಳುನಾಡು ಮೂಲದ ಇಬ್ಬರು ಮಹಿಳೆಯರನ್ನು ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಕಳ್ಳತನ ಒಪ್ಪಿಕೊಂಡಿದ್ದು ಇಬ್ಬರನ್ನೂ ಬಂಧಿಸಿದ್ದಾರೆ. ತಮಿಳುನಾಡಿನ ತಿರುಪೂರ್ ಜಿಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ ಯಾನೆ ಕಾಮಾಚಿ (30) ಬಂಧಿತರಾಗಿದ್ದು ಕದ್ದ ಕರಿಮಣಿ ಸರವನ್ನು ಪೊಲೀಸರಿಗೆ ನೀಡಿದ್ದಾರೆ.
ಆರೋಪಿಗಳು ಈ ಹಿಂದೆ ಬೆಳ್ತಂಗಡಿ ಸೇರಿದಂತೆ ಹಲವು ಕಡೆ ಕಳ್ಳತನ ನಡೆಸಿದ್ದು ವಿಚಾರಣೆ ವೇಳೆ ಮೂಲ್ಕಿ ಮತ್ತು ಬೆಳ್ತಂಗಡಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತಪ್ಪೊಪ್ಪಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Belthangady Police have arrested two women on charges of chain snatching. The arrests were made following a recent incident of snatching the mangalasutra of a woman while she was boarding a government bus.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am