ಬ್ರೇಕಿಂಗ್ ನ್ಯೂಸ್
22-12-23 09:39 pm Bangalore Correspondent ಕ್ರೈಂ
ಬೆಂಗಳೂರು, ಡಿ 22: ಅಸಹಾಯಕ ವೃದ್ಧೆಗೆ ಸಂಬಂಧಿಸಿದ ಆಸ್ತಿಗಳ ನಕಲಿ ದಾಖಲಾತಿ ಸೃಷ್ಟಿಸಿ ಹಾಗೂ ನಕಲಿ ಬ್ಯಾಂಕ್ ಖಾತೆ ತೆರೆದು 3 ಬ್ಯಾಂಕ್ಗಳಿಂದ 3 ಕೋಟಿ ರೂ.ಗೂ ಅಧಿಕ ಸಾಲ ಪಡೆದು ವಂಚಿಸಿದ್ದ ಐವರನ್ನು ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಭಾಸ್ಕರ್, ಮಹೇಶ, ಅಭಿಷೇಕ್ ಗೌಡ, ಡಿ.ಆರ್.ಅರುಣ್, ಟಿ.ಪಿ.ಶಿವಕುಮಾರ್ ಬಂಧಿತರು. ಜೆ.ಪಿ.ನಗರದ ನಿವಾಸಿ ಅಂಬುಜಾಕ್ಷಿ (75) ವಂಚನೆಗೊಳಗಾದವರು.
ಅಂಬುಜಾಕ್ಷಿ ಜೆ.ಪಿ.ನಗರದಲ್ಲಿ 1,350 ಅಡಿ ವಿಸ್ತೀರ್ಣದ ಬಿಡಿಎ ನಿವೇಶನದಲ್ಲಿ ಎರಡು ಅಂತಸ್ತಿನ ಸ್ವಂತ ಡೂಪ್ಲೆಕ್ಸ್ ಮನೆ ಹೊಂದಿದ್ದಾರೆ. ಮಕ್ಕಳು ವಿದೇಶದಲ್ಲಿದ್ದು, ಇವರೂ ಸಹ ವಿದೇಶಕ್ಕೆ ಹೋಗಿ ನೆಲೆಸಲು ಚಿಂತಿಸಿದ್ದರು. ಹೀಗಾಗಿ ತಮ್ಮ ಮನೆ ಮಾರಾಟ ಮಾಡುವ ವಿಚಾರವನ್ನು ರಿಯಲ್ ಎಸ್ಟೇಟ್ ಬ್ರೋಕರ್ಗಳಾಗಿದ್ದ ಆರೋಪಿಗಳಿಗೆ ತಿಳಿಸಿದ್ದರು.

ಇದೇ ನೆಪದಲ್ಲಿ ನಿವೇಶನದ ದಾಖಲೆಗಳನ್ನು ಪಡೆದುಕೊಂಡ ಆರೋಪಿಗಳು, ಅಸಲಿ ದಾಖಲೆಗಳ ರೀತಿಯಲ್ಲೇ ನಿವೇಶನದ 3 ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಂಬುಜಾಕ್ಷಿಯವರ ಸಹಿ ಹೋಲುವ ಪೋರ್ಜರಿ ಸಹಿಗಳನ್ನು ಮಾಡಿದ್ದರು. ನಂತರ ಈ ದಾಖಲೆಗಳನ್ನು 3 ಬ್ಯಾಂಕ್ಗಳಿಗೆ ನೀಡಿ, 3 ಕೋಟಿಗೂ ಅಧಿಕ ಸಾಲ ಪಡೆದುಕೊಂಡು ಪರಾರಿಯಾಗಿದ್ದರು. ಸಾಲದ ವಿಚಾರವಾಗಿ ಬ್ಯಾಂಕ್ ಸಿಬ್ಬಂದಿ ಅಂಬುಜಾಕ್ಷಿ ಅವರನ್ನು ಸಂಪರ್ಕಿಸಿದಾಗ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿದೆ. ಡಿ.14ರಂದು ಮಹಿಳೆಯು ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಮುಂದಿನ ತನಿಖೆಯ ಜವಾಬ್ದಾರಿಯನ್ನು ಸಿಸಿಬಿಗೆ ವರ್ಗಾಯಿಸಿತ್ತು. ಆರೋಪಿಗಳು ಸಾಲ ಪಡೆದಿದ್ದ ಬ್ಯಾಂಕ್ಗಳಿಂದ ಮಾಹಿತಿ, ಸಾಕ್ಷ್ಯ ಸಂಗ್ರಹಿಸಿದ ಸಿಸಿಬಿ ಪೊಲೀಸರು ತಾಂತ್ರಿಕ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿದ್ದಾರೆ. ಕೃತ್ಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
The Economic Offences Wing (EOW) of the CCB has arrested five persons for allegedly creating fake documents of properties belonging to a helpless woman and opening fake bank accounts and taking loans of over Rs 3 crore from three banks. The arrested have been identified as Bhaskar, Mahesh, Abhishek Gowda, D R Arun and T P Shivakumar. The victim has been identified as Ambujakshi (75), a resident of J.P. Nagar.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am