ಬ್ರೇಕಿಂಗ್ ನ್ಯೂಸ್
22-12-23 09:39 pm Bangalore Correspondent ಕ್ರೈಂ
ಬೆಂಗಳೂರು, ಡಿ 22: ಅಸಹಾಯಕ ವೃದ್ಧೆಗೆ ಸಂಬಂಧಿಸಿದ ಆಸ್ತಿಗಳ ನಕಲಿ ದಾಖಲಾತಿ ಸೃಷ್ಟಿಸಿ ಹಾಗೂ ನಕಲಿ ಬ್ಯಾಂಕ್ ಖಾತೆ ತೆರೆದು 3 ಬ್ಯಾಂಕ್ಗಳಿಂದ 3 ಕೋಟಿ ರೂ.ಗೂ ಅಧಿಕ ಸಾಲ ಪಡೆದು ವಂಚಿಸಿದ್ದ ಐವರನ್ನು ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಭಾಸ್ಕರ್, ಮಹೇಶ, ಅಭಿಷೇಕ್ ಗೌಡ, ಡಿ.ಆರ್.ಅರುಣ್, ಟಿ.ಪಿ.ಶಿವಕುಮಾರ್ ಬಂಧಿತರು. ಜೆ.ಪಿ.ನಗರದ ನಿವಾಸಿ ಅಂಬುಜಾಕ್ಷಿ (75) ವಂಚನೆಗೊಳಗಾದವರು.
ಅಂಬುಜಾಕ್ಷಿ ಜೆ.ಪಿ.ನಗರದಲ್ಲಿ 1,350 ಅಡಿ ವಿಸ್ತೀರ್ಣದ ಬಿಡಿಎ ನಿವೇಶನದಲ್ಲಿ ಎರಡು ಅಂತಸ್ತಿನ ಸ್ವಂತ ಡೂಪ್ಲೆಕ್ಸ್ ಮನೆ ಹೊಂದಿದ್ದಾರೆ. ಮಕ್ಕಳು ವಿದೇಶದಲ್ಲಿದ್ದು, ಇವರೂ ಸಹ ವಿದೇಶಕ್ಕೆ ಹೋಗಿ ನೆಲೆಸಲು ಚಿಂತಿಸಿದ್ದರು. ಹೀಗಾಗಿ ತಮ್ಮ ಮನೆ ಮಾರಾಟ ಮಾಡುವ ವಿಚಾರವನ್ನು ರಿಯಲ್ ಎಸ್ಟೇಟ್ ಬ್ರೋಕರ್ಗಳಾಗಿದ್ದ ಆರೋಪಿಗಳಿಗೆ ತಿಳಿಸಿದ್ದರು.
ಇದೇ ನೆಪದಲ್ಲಿ ನಿವೇಶನದ ದಾಖಲೆಗಳನ್ನು ಪಡೆದುಕೊಂಡ ಆರೋಪಿಗಳು, ಅಸಲಿ ದಾಖಲೆಗಳ ರೀತಿಯಲ್ಲೇ ನಿವೇಶನದ 3 ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಂಬುಜಾಕ್ಷಿಯವರ ಸಹಿ ಹೋಲುವ ಪೋರ್ಜರಿ ಸಹಿಗಳನ್ನು ಮಾಡಿದ್ದರು. ನಂತರ ಈ ದಾಖಲೆಗಳನ್ನು 3 ಬ್ಯಾಂಕ್ಗಳಿಗೆ ನೀಡಿ, 3 ಕೋಟಿಗೂ ಅಧಿಕ ಸಾಲ ಪಡೆದುಕೊಂಡು ಪರಾರಿಯಾಗಿದ್ದರು. ಸಾಲದ ವಿಚಾರವಾಗಿ ಬ್ಯಾಂಕ್ ಸಿಬ್ಬಂದಿ ಅಂಬುಜಾಕ್ಷಿ ಅವರನ್ನು ಸಂಪರ್ಕಿಸಿದಾಗ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿದೆ. ಡಿ.14ರಂದು ಮಹಿಳೆಯು ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಮುಂದಿನ ತನಿಖೆಯ ಜವಾಬ್ದಾರಿಯನ್ನು ಸಿಸಿಬಿಗೆ ವರ್ಗಾಯಿಸಿತ್ತು. ಆರೋಪಿಗಳು ಸಾಲ ಪಡೆದಿದ್ದ ಬ್ಯಾಂಕ್ಗಳಿಂದ ಮಾಹಿತಿ, ಸಾಕ್ಷ್ಯ ಸಂಗ್ರಹಿಸಿದ ಸಿಸಿಬಿ ಪೊಲೀಸರು ತಾಂತ್ರಿಕ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಸೆರೆ ಹಿಡಿದಿದ್ದಾರೆ. ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಿದ್ದಾರೆ. ಕೃತ್ಯಕ್ಕೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
The Economic Offences Wing (EOW) of the CCB has arrested five persons for allegedly creating fake documents of properties belonging to a helpless woman and opening fake bank accounts and taking loans of over Rs 3 crore from three banks. The arrested have been identified as Bhaskar, Mahesh, Abhishek Gowda, D R Arun and T P Shivakumar. The victim has been identified as Ambujakshi (75), a resident of J.P. Nagar.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
17-05-25 10:09 pm
Mangalore Correspondent
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
Siddaramaiah, Cm Mangalore, BJP black flag: ಸ...
16-05-25 06:05 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm