ಬ್ರೇಕಿಂಗ್ ನ್ಯೂಸ್
29-12-23 03:50 pm HK News Desk ಕ್ರೈಂ
ಮೈಸೂರು, ಡಿ.29: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಜೈಲಿಗೆ ಹಿಂದಿರುಗುವ ವೇಳೆ ಕೈದಿಯೊಬ್ಬ ಗಾಂಜಾವನ್ನು ಬಚ್ಚಿಟ್ಟುಕೊಂಡು ಕಾರಾಗೃಹದ ಒಳಗೆ ಹೋಗುವ ಸಮಯದಲ್ಲಿ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬುಧವಾರ ನಡೆದಿದೆ.
ಮೈಸೂರು ಕಾರಾಗೃಹದಲ್ಲಿ ಸಜಾಬಂಧಿಯಾಗಿರುವ ಮಡಿಕೇರಿ ಬಳಿಯ ಇಬ್ಬಣಿವಾಳವಾಡಿ ಗ್ರಾಮದ ನಿವಾಸಿ ದುರ್ಗದತ್ತ ಕಾಳಿದಾಸಸ್ವಾಮಿ (28) ಕಾರಾಗೃಹದೊಳಕ್ಕೆ ಹೋಗುವ ವೇಳೆ ಸಿಕ್ಕಿ ಬಿದ್ದಿದ್ದಾನೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿದ್ದ ದುರ್ಗದತ್ತ ಕಾಳಿದಾಸಸ್ವಾಮಿಗೆ ಅನಾರೋಗ್ಯದ ಕಾರಣ ಜೈಲು ಅಧಿಕಾರಿಗಳು ಬುಧವಾರ ಮಧ್ಯಾಹ್ನ ಚಿಕಿತ್ಸೆಗಾಗಿ ಕೆಆರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆತನಿಗೆ ಚಿಕಿತ್ಸೆ ಕೊಡಿಸಿ ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ವಾಪಸ್ ಜೈಲಿಗೆ ಕರೆತಂದಿದ್ದಾರೆ. ಈ ವೇಳೆ ಆತನನ್ನು ಅಲ್ಲಿನ ಸಿಬ್ಬಂದಿಗಳಾದ ಉಮೇಶ್ ಚಂದ್ರನಾಯಕ್ ಹಾಗೂ ಶಿವಾನಂದ ಕೋಕಲೆ ಅವರು ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ ಆತನ ಬಲಗಾಲಿನಲ್ಲಿ ಕಪ್ಪು ಬಣ್ಣದ ಟೇಪ್ ಸುತ್ತಿರುವುದು ಅವರಿಗೆ ಕಂಡುಬಂದಿದೆ. ಕೂಡಲೇ ಟೇಪ್ನ್ನು ತೆಗೆದು ಪರಿಶೀಲನೆ ನಡೆಸಿದಾಗ ಅಲ್ಲಿ ಗಾಂಜಾ ಪೊಟ್ಟಣವಿರುವುದು ಕಂಡುಬಂದಿದೆ. ತಕ್ಷಣವೇ ಮೇಲಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಕಾರಾಗೃಹ ಅಧಿಕಾರಿಗಳು ದುರ್ಗದತ್ತ ಅವರ ವಿರುದ್ಧ ಮಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೆಆರ್ ಆಸ್ಪತ್ರೆಯ ಶೌಚಾಯದಲ್ಲಿ ನೆವೆಲ್ ಎಂಬಾತ ಇರಿಸಿದ್ದ ಗಾಂಜಾವನ್ನು ತೆಗೆದುಕೊಂಡು ಬಂದಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಮಂಡಿ ಪೊಲೀಸರು 76 ಗ್ರಾಂ ಗಾಂಜಾ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
In a shocking incident, a prisoner, who was carrying ganja while returning to the jail after treatment on the pretext of ill health, was caught on camera by the jail staff.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am