ಬ್ರೇಕಿಂಗ್ ನ್ಯೂಸ್
29-12-23 03:50 pm HK News Desk ಕ್ರೈಂ
ಮೈಸೂರು, ಡಿ.29: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಜೈಲಿಗೆ ಹಿಂದಿರುಗುವ ವೇಳೆ ಕೈದಿಯೊಬ್ಬ ಗಾಂಜಾವನ್ನು ಬಚ್ಚಿಟ್ಟುಕೊಂಡು ಕಾರಾಗೃಹದ ಒಳಗೆ ಹೋಗುವ ಸಮಯದಲ್ಲಿ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬುಧವಾರ ನಡೆದಿದೆ.
ಮೈಸೂರು ಕಾರಾಗೃಹದಲ್ಲಿ ಸಜಾಬಂಧಿಯಾಗಿರುವ ಮಡಿಕೇರಿ ಬಳಿಯ ಇಬ್ಬಣಿವಾಳವಾಡಿ ಗ್ರಾಮದ ನಿವಾಸಿ ದುರ್ಗದತ್ತ ಕಾಳಿದಾಸಸ್ವಾಮಿ (28) ಕಾರಾಗೃಹದೊಳಕ್ಕೆ ಹೋಗುವ ವೇಳೆ ಸಿಕ್ಕಿ ಬಿದ್ದಿದ್ದಾನೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿದ್ದ ದುರ್ಗದತ್ತ ಕಾಳಿದಾಸಸ್ವಾಮಿಗೆ ಅನಾರೋಗ್ಯದ ಕಾರಣ ಜೈಲು ಅಧಿಕಾರಿಗಳು ಬುಧವಾರ ಮಧ್ಯಾಹ್ನ ಚಿಕಿತ್ಸೆಗಾಗಿ ಕೆಆರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆತನಿಗೆ ಚಿಕಿತ್ಸೆ ಕೊಡಿಸಿ ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ವಾಪಸ್ ಜೈಲಿಗೆ ಕರೆತಂದಿದ್ದಾರೆ. ಈ ವೇಳೆ ಆತನನ್ನು ಅಲ್ಲಿನ ಸಿಬ್ಬಂದಿಗಳಾದ ಉಮೇಶ್ ಚಂದ್ರನಾಯಕ್ ಹಾಗೂ ಶಿವಾನಂದ ಕೋಕಲೆ ಅವರು ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ ಆತನ ಬಲಗಾಲಿನಲ್ಲಿ ಕಪ್ಪು ಬಣ್ಣದ ಟೇಪ್ ಸುತ್ತಿರುವುದು ಅವರಿಗೆ ಕಂಡುಬಂದಿದೆ. ಕೂಡಲೇ ಟೇಪ್ನ್ನು ತೆಗೆದು ಪರಿಶೀಲನೆ ನಡೆಸಿದಾಗ ಅಲ್ಲಿ ಗಾಂಜಾ ಪೊಟ್ಟಣವಿರುವುದು ಕಂಡುಬಂದಿದೆ. ತಕ್ಷಣವೇ ಮೇಲಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಕಾರಾಗೃಹ ಅಧಿಕಾರಿಗಳು ದುರ್ಗದತ್ತ ಅವರ ವಿರುದ್ಧ ಮಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೆಆರ್ ಆಸ್ಪತ್ರೆಯ ಶೌಚಾಯದಲ್ಲಿ ನೆವೆಲ್ ಎಂಬಾತ ಇರಿಸಿದ್ದ ಗಾಂಜಾವನ್ನು ತೆಗೆದುಕೊಂಡು ಬಂದಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಮಂಡಿ ಪೊಲೀಸರು 76 ಗ್ರಾಂ ಗಾಂಜಾ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
In a shocking incident, a prisoner, who was carrying ganja while returning to the jail after treatment on the pretext of ill health, was caught on camera by the jail staff.
15-06-25 09:29 pm
Bangalore Correspondent
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
15-06-25 10:29 pm
HK News Desk
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
15-06-25 11:04 pm
Mangalore Correspondent
Kadri Kaibattal, Mangalore Rain, Landslide: ಕ...
15-06-25 09:50 pm
Mangalore Rain, School Holiday: ರೆಡ್ ಅಲರ್ಟ್ ಮ...
15-06-25 09:35 pm
Mangalore Heavy Rains, Dinesh Gundu Rao: ಮಳೆ...
15-06-25 03:20 pm
Mangalore Rain, Compound Wall Collapsed Video...
15-06-25 12:12 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm