ಬ್ರೇಕಿಂಗ್ ನ್ಯೂಸ್
29-12-23 03:50 pm HK News Desk ಕ್ರೈಂ
ಮೈಸೂರು, ಡಿ.29: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಜೈಲಿಗೆ ಹಿಂದಿರುಗುವ ವೇಳೆ ಕೈದಿಯೊಬ್ಬ ಗಾಂಜಾವನ್ನು ಬಚ್ಚಿಟ್ಟುಕೊಂಡು ಕಾರಾಗೃಹದ ಒಳಗೆ ಹೋಗುವ ಸಮಯದಲ್ಲಿ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬುಧವಾರ ನಡೆದಿದೆ.
ಮೈಸೂರು ಕಾರಾಗೃಹದಲ್ಲಿ ಸಜಾಬಂಧಿಯಾಗಿರುವ ಮಡಿಕೇರಿ ಬಳಿಯ ಇಬ್ಬಣಿವಾಳವಾಡಿ ಗ್ರಾಮದ ನಿವಾಸಿ ದುರ್ಗದತ್ತ ಕಾಳಿದಾಸಸ್ವಾಮಿ (28) ಕಾರಾಗೃಹದೊಳಕ್ಕೆ ಹೋಗುವ ವೇಳೆ ಸಿಕ್ಕಿ ಬಿದ್ದಿದ್ದಾನೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿದ್ದ ದುರ್ಗದತ್ತ ಕಾಳಿದಾಸಸ್ವಾಮಿಗೆ ಅನಾರೋಗ್ಯದ ಕಾರಣ ಜೈಲು ಅಧಿಕಾರಿಗಳು ಬುಧವಾರ ಮಧ್ಯಾಹ್ನ ಚಿಕಿತ್ಸೆಗಾಗಿ ಕೆಆರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆತನಿಗೆ ಚಿಕಿತ್ಸೆ ಕೊಡಿಸಿ ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ವಾಪಸ್ ಜೈಲಿಗೆ ಕರೆತಂದಿದ್ದಾರೆ. ಈ ವೇಳೆ ಆತನನ್ನು ಅಲ್ಲಿನ ಸಿಬ್ಬಂದಿಗಳಾದ ಉಮೇಶ್ ಚಂದ್ರನಾಯಕ್ ಹಾಗೂ ಶಿವಾನಂದ ಕೋಕಲೆ ಅವರು ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ ಆತನ ಬಲಗಾಲಿನಲ್ಲಿ ಕಪ್ಪು ಬಣ್ಣದ ಟೇಪ್ ಸುತ್ತಿರುವುದು ಅವರಿಗೆ ಕಂಡುಬಂದಿದೆ. ಕೂಡಲೇ ಟೇಪ್ನ್ನು ತೆಗೆದು ಪರಿಶೀಲನೆ ನಡೆಸಿದಾಗ ಅಲ್ಲಿ ಗಾಂಜಾ ಪೊಟ್ಟಣವಿರುವುದು ಕಂಡುಬಂದಿದೆ. ತಕ್ಷಣವೇ ಮೇಲಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಕಾರಾಗೃಹ ಅಧಿಕಾರಿಗಳು ದುರ್ಗದತ್ತ ಅವರ ವಿರುದ್ಧ ಮಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೆಆರ್ ಆಸ್ಪತ್ರೆಯ ಶೌಚಾಯದಲ್ಲಿ ನೆವೆಲ್ ಎಂಬಾತ ಇರಿಸಿದ್ದ ಗಾಂಜಾವನ್ನು ತೆಗೆದುಕೊಂಡು ಬಂದಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಮಂಡಿ ಪೊಲೀಸರು 76 ಗ್ರಾಂ ಗಾಂಜಾ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
In a shocking incident, a prisoner, who was carrying ganja while returning to the jail after treatment on the pretext of ill health, was caught on camera by the jail staff.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm