ಬ್ರೇಕಿಂಗ್ ನ್ಯೂಸ್
29-12-23 03:50 pm HK News Desk ಕ್ರೈಂ
ಮೈಸೂರು, ಡಿ.29: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಜೈಲಿಗೆ ಹಿಂದಿರುಗುವ ವೇಳೆ ಕೈದಿಯೊಬ್ಬ ಗಾಂಜಾವನ್ನು ಬಚ್ಚಿಟ್ಟುಕೊಂಡು ಕಾರಾಗೃಹದ ಒಳಗೆ ಹೋಗುವ ಸಮಯದಲ್ಲಿ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬುಧವಾರ ನಡೆದಿದೆ.
ಮೈಸೂರು ಕಾರಾಗೃಹದಲ್ಲಿ ಸಜಾಬಂಧಿಯಾಗಿರುವ ಮಡಿಕೇರಿ ಬಳಿಯ ಇಬ್ಬಣಿವಾಳವಾಡಿ ಗ್ರಾಮದ ನಿವಾಸಿ ದುರ್ಗದತ್ತ ಕಾಳಿದಾಸಸ್ವಾಮಿ (28) ಕಾರಾಗೃಹದೊಳಕ್ಕೆ ಹೋಗುವ ವೇಳೆ ಸಿಕ್ಕಿ ಬಿದ್ದಿದ್ದಾನೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿದ್ದ ದುರ್ಗದತ್ತ ಕಾಳಿದಾಸಸ್ವಾಮಿಗೆ ಅನಾರೋಗ್ಯದ ಕಾರಣ ಜೈಲು ಅಧಿಕಾರಿಗಳು ಬುಧವಾರ ಮಧ್ಯಾಹ್ನ ಚಿಕಿತ್ಸೆಗಾಗಿ ಕೆಆರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆತನಿಗೆ ಚಿಕಿತ್ಸೆ ಕೊಡಿಸಿ ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ವಾಪಸ್ ಜೈಲಿಗೆ ಕರೆತಂದಿದ್ದಾರೆ. ಈ ವೇಳೆ ಆತನನ್ನು ಅಲ್ಲಿನ ಸಿಬ್ಬಂದಿಗಳಾದ ಉಮೇಶ್ ಚಂದ್ರನಾಯಕ್ ಹಾಗೂ ಶಿವಾನಂದ ಕೋಕಲೆ ಅವರು ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ ಆತನ ಬಲಗಾಲಿನಲ್ಲಿ ಕಪ್ಪು ಬಣ್ಣದ ಟೇಪ್ ಸುತ್ತಿರುವುದು ಅವರಿಗೆ ಕಂಡುಬಂದಿದೆ. ಕೂಡಲೇ ಟೇಪ್ನ್ನು ತೆಗೆದು ಪರಿಶೀಲನೆ ನಡೆಸಿದಾಗ ಅಲ್ಲಿ ಗಾಂಜಾ ಪೊಟ್ಟಣವಿರುವುದು ಕಂಡುಬಂದಿದೆ. ತಕ್ಷಣವೇ ಮೇಲಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಕಾರಾಗೃಹ ಅಧಿಕಾರಿಗಳು ದುರ್ಗದತ್ತ ಅವರ ವಿರುದ್ಧ ಮಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೆಆರ್ ಆಸ್ಪತ್ರೆಯ ಶೌಚಾಯದಲ್ಲಿ ನೆವೆಲ್ ಎಂಬಾತ ಇರಿಸಿದ್ದ ಗಾಂಜಾವನ್ನು ತೆಗೆದುಕೊಂಡು ಬಂದಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಮಂಡಿ ಪೊಲೀಸರು 76 ಗ್ರಾಂ ಗಾಂಜಾ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
In a shocking incident, a prisoner, who was carrying ganja while returning to the jail after treatment on the pretext of ill health, was caught on camera by the jail staff.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm