ಬ್ರೇಕಿಂಗ್ ನ್ಯೂಸ್
29-12-23 03:50 pm HK News Desk ಕ್ರೈಂ
ಮೈಸೂರು, ಡಿ.29: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಜೈಲಿಗೆ ಹಿಂದಿರುಗುವ ವೇಳೆ ಕೈದಿಯೊಬ್ಬ ಗಾಂಜಾವನ್ನು ಬಚ್ಚಿಟ್ಟುಕೊಂಡು ಕಾರಾಗೃಹದ ಒಳಗೆ ಹೋಗುವ ಸಮಯದಲ್ಲಿ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬುಧವಾರ ನಡೆದಿದೆ.
ಮೈಸೂರು ಕಾರಾಗೃಹದಲ್ಲಿ ಸಜಾಬಂಧಿಯಾಗಿರುವ ಮಡಿಕೇರಿ ಬಳಿಯ ಇಬ್ಬಣಿವಾಳವಾಡಿ ಗ್ರಾಮದ ನಿವಾಸಿ ದುರ್ಗದತ್ತ ಕಾಳಿದಾಸಸ್ವಾಮಿ (28) ಕಾರಾಗೃಹದೊಳಕ್ಕೆ ಹೋಗುವ ವೇಳೆ ಸಿಕ್ಕಿ ಬಿದ್ದಿದ್ದಾನೆ.

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿದ್ದ ದುರ್ಗದತ್ತ ಕಾಳಿದಾಸಸ್ವಾಮಿಗೆ ಅನಾರೋಗ್ಯದ ಕಾರಣ ಜೈಲು ಅಧಿಕಾರಿಗಳು ಬುಧವಾರ ಮಧ್ಯಾಹ್ನ ಚಿಕಿತ್ಸೆಗಾಗಿ ಕೆಆರ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆತನಿಗೆ ಚಿಕಿತ್ಸೆ ಕೊಡಿಸಿ ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ವಾಪಸ್ ಜೈಲಿಗೆ ಕರೆತಂದಿದ್ದಾರೆ. ಈ ವೇಳೆ ಆತನನ್ನು ಅಲ್ಲಿನ ಸಿಬ್ಬಂದಿಗಳಾದ ಉಮೇಶ್ ಚಂದ್ರನಾಯಕ್ ಹಾಗೂ ಶಿವಾನಂದ ಕೋಕಲೆ ಅವರು ತಪಾಸಣೆಗೊಳಪಡಿಸಿದ್ದಾರೆ. ಈ ವೇಳೆ ಆತನ ಬಲಗಾಲಿನಲ್ಲಿ ಕಪ್ಪು ಬಣ್ಣದ ಟೇಪ್ ಸುತ್ತಿರುವುದು ಅವರಿಗೆ ಕಂಡುಬಂದಿದೆ. ಕೂಡಲೇ ಟೇಪ್ನ್ನು ತೆಗೆದು ಪರಿಶೀಲನೆ ನಡೆಸಿದಾಗ ಅಲ್ಲಿ ಗಾಂಜಾ ಪೊಟ್ಟಣವಿರುವುದು ಕಂಡುಬಂದಿದೆ. ತಕ್ಷಣವೇ ಮೇಲಾಧಿಕಾರಿಗಳಿಗೆ ವಿಚಾರ ತಿಳಿಸಿದ್ದಾರೆ.
ಸ್ಥಳಕ್ಕೆ ಬಂದ ಕಾರಾಗೃಹ ಅಧಿಕಾರಿಗಳು ದುರ್ಗದತ್ತ ಅವರ ವಿರುದ್ಧ ಮಂಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೆಆರ್ ಆಸ್ಪತ್ರೆಯ ಶೌಚಾಯದಲ್ಲಿ ನೆವೆಲ್ ಎಂಬಾತ ಇರಿಸಿದ್ದ ಗಾಂಜಾವನ್ನು ತೆಗೆದುಕೊಂಡು ಬಂದಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ. ಮಂಡಿ ಪೊಲೀಸರು 76 ಗ್ರಾಂ ಗಾಂಜಾ ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ.
In a shocking incident, a prisoner, who was carrying ganja while returning to the jail after treatment on the pretext of ill health, was caught on camera by the jail staff.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 10:11 pm
HK staffer
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm