ಬ್ರೇಕಿಂಗ್ ನ್ಯೂಸ್
04-01-24 10:11 pm Mangalore Correspondent ಕ್ರೈಂ
ಮಂಗಳೂರು, ಜ.4: ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಹಣ ಡಬಲ್ ಆಗುವ ಆಸೆಯಿಂದ IIFL Securities ಹೆಸರಿನಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದು, ಸುಮಾರು 40.64 ಲಕ್ಷ ರೂಪಾಯಿ ಕಳಕೊಂಡಿದ್ದಾರೆ. ಈ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ಯಾರೋ ಅಪರಿಚಿತ ವ್ಯಕ್ತಿ ವಾಟ್ಸಪ್ ಕರೆ ಮಾಡಿ, IIFL Securities ಹೆಸರಿನಲ್ಲಿ ಸ್ಟಾಕ್ ಗ್ರೂಪ್ ಆರಂಭವಾಗುತ್ತಿದ್ದು ಹಣ ಹೂಡಿಕೆ ಮಾಡುವಂತೆ ತಿಳಿಸಿದ್ದರು. ಜಾಯಿನ್ ಲಿಂಕ್ ಮೂಲಕ Blackrock stocks pullup group ಎಂಬ ವಾಟ್ಸಪ್ ಗ್ರೂಪ್ ಜಾಯಿನ್ ಆಗಿದ್ದಾರೆ. ಸದ್ರಿ ಗ್ರೂಪಿನಲ್ಲಿ ಏಪ್ ಒಂದರ ಲಿಂಕ್ ಕಳುಹಿಸಿದ್ದು, ಅದನ್ನು ಡೌನ್ಲೋಡ್ ಮಾಡಿಕೊಳ್ಳಲು ಸೂಚಿಸಲಾಗಿತ್ತು.

IIFL Securities ಎಂಬ ಹೆಸರಿನ ಏಪ್ ಡೌನ್ಲೋಡ್ ಮಾಡಿಕೊಂಡಿದ್ದು, ಅದರಲ್ಲಿ ಬೇರೆ ಬೇರೆ ಸ್ಟಾಕ್ಸ್ ಗಳನ್ನು ಖರೀದಿಸಿದಲ್ಲಿ ಮರುದಿನ ಹೂಡಿಕೆ ಮಾಡಿದ ಹಣದೊಂದಿಗೆ 5 ಶೇ. ಲಾಭಾಂಶ ನೀಡುವುದಾಗಿ ತಿಳಿಸಲಾಗಿತ್ತು. ಎಂಬಿಬಿಎಸ್ ವಿದ್ಯಾರ್ಥಿಯು ನ.11ರಿಂದ ಡಿ.22ರ ನಡುವೆ ತನ್ನ ಎಸ್ ಬಿಐ ಬ್ಯಾಂಕ್ ಖಾತೆಯಿಂದ 23.39 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದರು. ಇನ್ನೂ ಹೆಚ್ಚಿನ ಹಣ ಹೂಡಿಕೆ ಮಾಡಿದಲ್ಲಿ ಮತ್ತಷ್ಟು ಹಣ ದೊರೆಯುತ್ತೆ ಎನ್ನುವ ಆಸೆಯಿಂದ ತನ್ನ ಗೆಳೆಯ ಫೈಜಲ್ ಖಾಜ್ಮಿ ಎಂಬವರ ಕೆನರಾ ಬ್ಯಾಂಕಿನ ಖಾತೆಯಿಂದ ಮತ್ತೆ 17.24 ಲಕ್ಷ ರೂ. ಹಣವನ್ನು ಏಪ್ ನಲ್ಲಿ ಹೂಡಿಕೆ ಮಾಡಿದ್ದರು.
ಮೊದಲಿಗೆ ಹೂಡಿಕೆ ಮಾಡಿದ್ದ ಹಣ ಮತ್ತು ಲಾಭಾಂಶವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಳ್ಳಲು ಏಪ್ ನಲ್ಲಿ ಅವಕಾಶ ನೀಡಲಾಗಿತ್ತು. ಅದರಂತೆ, ಹಣ ತೆಗೆಯಲು ಮುಂದಾಗಿದ್ದ ವೇಳೆ ಅದು ಸಾಧ್ಯವಾಗಲಿಲ್ಲ. ಬಳಿಕ ವಾಟ್ಸಪ್ ಅಡ್ಮಿನ್ ಅವರಲ್ಲಿ ವಿಚಾರಿಸಿದಾಗ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಮತ್ತಷ್ಟು ಕರೆ ಮಾಡಿದಾಗ, ಇವರನ್ನು ಬ್ಲಾಕ್ ಮಾಡಿದ್ದರು. ಆಮೂಲಕ IIFL Securities ಹೆಸರಿನಲ್ಲಿ ಸ್ಟಾಕ್ ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡುವ ನೆಪದಲ್ಲಿ ಒಟ್ಟು 40,64,600 ರೂ. ಹಣವನ್ನು ಪಡೆದು ವಂಚಿಸಿದ್ದಾರೆಂದು ಹಣ ಕಳಕೊಂಡ ವ್ಯಕ್ತಿ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mbbs student in Mangalore Cheated of Rs 40 lakhs in IIFL Securities. A case has been registered at the cyber police.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm