ಬ್ರೇಕಿಂಗ್ ನ್ಯೂಸ್
04-01-24 10:11 pm Mangalore Correspondent ಕ್ರೈಂ
ಮಂಗಳೂರು, ಜ.4: ಎಂಬಿಬಿಎಸ್ ವಿದ್ಯಾರ್ಥಿಯೊಬ್ಬರು ಹಣ ಡಬಲ್ ಆಗುವ ಆಸೆಯಿಂದ IIFL Securities ಹೆಸರಿನಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದು, ಸುಮಾರು 40.64 ಲಕ್ಷ ರೂಪಾಯಿ ಕಳಕೊಂಡಿದ್ದಾರೆ. ಈ ಬಗ್ಗೆ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಳೆದ ಅಕ್ಟೋಬರ್ ತಿಂಗಳಲ್ಲಿ ಯಾರೋ ಅಪರಿಚಿತ ವ್ಯಕ್ತಿ ವಾಟ್ಸಪ್ ಕರೆ ಮಾಡಿ, IIFL Securities ಹೆಸರಿನಲ್ಲಿ ಸ್ಟಾಕ್ ಗ್ರೂಪ್ ಆರಂಭವಾಗುತ್ತಿದ್ದು ಹಣ ಹೂಡಿಕೆ ಮಾಡುವಂತೆ ತಿಳಿಸಿದ್ದರು. ಜಾಯಿನ್ ಲಿಂಕ್ ಮೂಲಕ Blackrock stocks pullup group ಎಂಬ ವಾಟ್ಸಪ್ ಗ್ರೂಪ್ ಜಾಯಿನ್ ಆಗಿದ್ದಾರೆ. ಸದ್ರಿ ಗ್ರೂಪಿನಲ್ಲಿ ಏಪ್ ಒಂದರ ಲಿಂಕ್ ಕಳುಹಿಸಿದ್ದು, ಅದನ್ನು ಡೌನ್ಲೋಡ್ ಮಾಡಿಕೊಳ್ಳಲು ಸೂಚಿಸಲಾಗಿತ್ತು.
IIFL Securities ಎಂಬ ಹೆಸರಿನ ಏಪ್ ಡೌನ್ಲೋಡ್ ಮಾಡಿಕೊಂಡಿದ್ದು, ಅದರಲ್ಲಿ ಬೇರೆ ಬೇರೆ ಸ್ಟಾಕ್ಸ್ ಗಳನ್ನು ಖರೀದಿಸಿದಲ್ಲಿ ಮರುದಿನ ಹೂಡಿಕೆ ಮಾಡಿದ ಹಣದೊಂದಿಗೆ 5 ಶೇ. ಲಾಭಾಂಶ ನೀಡುವುದಾಗಿ ತಿಳಿಸಲಾಗಿತ್ತು. ಎಂಬಿಬಿಎಸ್ ವಿದ್ಯಾರ್ಥಿಯು ನ.11ರಿಂದ ಡಿ.22ರ ನಡುವೆ ತನ್ನ ಎಸ್ ಬಿಐ ಬ್ಯಾಂಕ್ ಖಾತೆಯಿಂದ 23.39 ಲಕ್ಷ ರೂಪಾಯಿ ಹೂಡಿಕೆ ಮಾಡಿದ್ದರು. ಇನ್ನೂ ಹೆಚ್ಚಿನ ಹಣ ಹೂಡಿಕೆ ಮಾಡಿದಲ್ಲಿ ಮತ್ತಷ್ಟು ಹಣ ದೊರೆಯುತ್ತೆ ಎನ್ನುವ ಆಸೆಯಿಂದ ತನ್ನ ಗೆಳೆಯ ಫೈಜಲ್ ಖಾಜ್ಮಿ ಎಂಬವರ ಕೆನರಾ ಬ್ಯಾಂಕಿನ ಖಾತೆಯಿಂದ ಮತ್ತೆ 17.24 ಲಕ್ಷ ರೂ. ಹಣವನ್ನು ಏಪ್ ನಲ್ಲಿ ಹೂಡಿಕೆ ಮಾಡಿದ್ದರು.
ಮೊದಲಿಗೆ ಹೂಡಿಕೆ ಮಾಡಿದ್ದ ಹಣ ಮತ್ತು ಲಾಭಾಂಶವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಳ್ಳಲು ಏಪ್ ನಲ್ಲಿ ಅವಕಾಶ ನೀಡಲಾಗಿತ್ತು. ಅದರಂತೆ, ಹಣ ತೆಗೆಯಲು ಮುಂದಾಗಿದ್ದ ವೇಳೆ ಅದು ಸಾಧ್ಯವಾಗಲಿಲ್ಲ. ಬಳಿಕ ವಾಟ್ಸಪ್ ಅಡ್ಮಿನ್ ಅವರಲ್ಲಿ ವಿಚಾರಿಸಿದಾಗ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಮತ್ತಷ್ಟು ಕರೆ ಮಾಡಿದಾಗ, ಇವರನ್ನು ಬ್ಲಾಕ್ ಮಾಡಿದ್ದರು. ಆಮೂಲಕ IIFL Securities ಹೆಸರಿನಲ್ಲಿ ಸ್ಟಾಕ್ ಮಾರ್ಕೆಟ್ ನಲ್ಲಿ ಹಣ ಹೂಡಿಕೆ ಮಾಡುವ ನೆಪದಲ್ಲಿ ಒಟ್ಟು 40,64,600 ರೂ. ಹಣವನ್ನು ಪಡೆದು ವಂಚಿಸಿದ್ದಾರೆಂದು ಹಣ ಕಳಕೊಂಡ ವ್ಯಕ್ತಿ ಮಂಗಳೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mbbs student in Mangalore Cheated of Rs 40 lakhs in IIFL Securities. A case has been registered at the cyber police.
13-09-25 04:31 pm
HK News Desk
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm