ಬ್ರೇಕಿಂಗ್ ನ್ಯೂಸ್
05-01-24 04:01 pm Mangalore Correspondent ಕ್ರೈಂ
ಮಂಗಳೂರು, ಜ.5: ಮದುವೆಯಾಗುತ್ತೇನೆಂದು ನಂಬಿಸಿ ಕೇರಳ ಮೂಲದ ಯುವಕನೊಬ್ಬ ಮೋಸ ಮಾಡಿದ್ದಾನೆಂದು ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಯುವತಿ ಮಂಗಳೂರಿನಲ್ಲಿ ರಂಪಾಟ ನಡೆಸಿರುವ ಘಟನೆ ಕೋಟೆಕಾರಿನಲ್ಲಿ ನಡೆದಿದೆ.
ಶಾದಿ ಡಾಟ್ ಕಾಮ್ ನಲ್ಲಿ ಸಂಪರ್ಕ ಆಗಿದ್ದ ಕೇರಳದ ಕ್ಯಾಲಿಕಟ್ ನಿವಾಸಿ ಅಕ್ಷಯ್ ಎಂಬಾತನ ಜೊತೆಗೆ ಯುವತಿ ಕಳೆದ ಎರಡು ವರ್ಷಗಳಿಂದ ಸುತ್ತಾಡಿದ್ದಾಳೆ. ಮದುವೆಯಾಗುತ್ತೇನೆಂದು ನಂಬಿಸಿದ್ದಲ್ಲದೆ, ತನ್ನಿಂದಲೇ ಒಡವೆ, ಹಣ ಸಹಿತ ಸುಮಾರು 33 ಲಕ್ಷ ರೂಪಾಯಿ ಮೌಲ್ಯದ ಸೊತ್ತು ಪಡೆದಿದ್ದಾನೆ. ಇದೀಗ ಮಂಗಳೂರಿನ ಬೇರೆ ಯುವತಿಯ ಜೊತೆ ಮದುವೆಯಾಗುತ್ತಿದ್ದಾನೆ. ಆತ ಹಲವಾರು ಹೆಣ್ಮಕ್ಕಳಿಗೆ ಇದೇ ರೀತಿ ಮೋಸ ಮಾಡಿದ್ದಾನೆ ಎಂದು ಆಕೆ ದೂರಿದ್ದಾಳೆ. ಯುವತಿ ಮೈಸೂರು ಮೂಲದವಳಾಗಿದ್ದು ಮದುವೆ ಕಾರ್ಯ ನಡೆಯುತ್ತಿದ್ದ ಮಂಗಳೂರು ಹೊರವಲಯದ ಕೋಟೆಕಾರು ಬಳಿಯ ಖಾಸಗಿ ಹೊಟೇಲ್ ಸಭಾಂಗಣದ ಬಳಿಗೆ ಬಂದಿದ್ದಳು.


ಉಳ್ಳಾಲ ಪೊಲೀಸರೂ ಸ್ಥಳಕ್ಕೆ ಬಂದಿದ್ದು, ಈ ವೇಳೆ ಯುವತಿ ಮಾಧ್ಯಮಕ್ಕೆ ತನ್ನ ಅಳಲು ತೋಡಿಕೊಂಡಿದ್ದಾಳೆ. ನಮ್ಮ ನಡುವಿನ ಸಂಬಂಧ ಆತನ ಮನೆಯವರಿಗೂ ತಿಳಿದಿದೆ. ಕಳೆದ ಬಾರಿ ಬಸುರಿಯಾಗಿದ್ದ ವೇಳೆ ಮೈಸೂರಿಗೆ ಹೋಗಿದ್ದಾಗ ಅಲ್ಲಿ ನನ್ನನ್ನು ಕೂಡಿಹಾಕಿ ಚಿತ್ರಹಿಂಸೆ ನೀಡಿದ್ದಾನೆ. ಮೈಯಲ್ಲಿ ಗಾಯಗಳಾದ ಬಗ್ಗೆ ನನ್ನಲ್ಲಿ ದಾಖಲೆ ಇಟ್ಟುಕೊಂಡಿದ್ದೇನೆ. ಈತನ ವಂಚನೆ ಬಗ್ಗೆ ಬೆಂಗಳೂರಿನ ಮಹಿಳಾ ಠಾಣೆ ಮತ್ತು ಕ್ಯಾಲಿಕಟ್ ನಲ್ಲಿಯೂ ಪೊಲೀಸರಿಗೆ ದೂರು ನೀಡಿದ್ದೇನೆ. ಪೊಲೀಸರು ಆತನಿಂದ ಹಣ ಪಡೆದು ಕ್ರಮ ಜರುಗಿಸಿಲ್ಲ. ಅಕ್ಷಯ್ ಮೋಸಗಾರನಾಗಿದ್ದು, ಬಿಸಿನೆಸ್ ಮ್ಯಾನ್ ಎಂದು ಪೋಸು ಕೊಟ್ಟು ತನ್ನಿಂದ 17 ಲಕ್ಷದ ಒಡವೆ, 16 ಲಕ್ಷ ರೂಪಾಯಿ ನಗದು ಹಣವನ್ನು ಪಡೆದಿದ್ದಾನೆ. ಈತನ ವಂಚನೆ ಬಗ್ಗೆ ಮಂಗಳೂರಿನ ಯುವತಿ ಮನೆಯವರಿಗೆ ತಿಳಿಸಲು ಯತ್ನಿಸಿದರೂ ಕೇಳುತ್ತಿಲ್ಲ.


ಕ್ಯಾಲಿಕಟ್ ನಿವಾಸಿ ಅಕ್ಷಯ್ ಮಂಗಳೂರಿನ ವಾಮಂಜೂರಿನ ಯುವತಿಯ ಜೊತೆಗೆ ಮದುವೆಯಾಗಿದ್ದಾನೆ. ಕೋಟೆಕಾರಿನ ಪರಿವಾರ್ ರೆಸಿಡೆನ್ಸಿಯಲ್ಲಿ ಹೊಸತಾಗಿ ನವೀಕರಿಸಲ್ಪಟ್ಟ ಸಭಾಂಗಣದಲ್ಲಿ ಮೊದಲ ಬಾರಿಗೆ ಮದುವೆ ಕಾರ್ಯ ಏರ್ಪಡಿಸಲಾಗಿತ್ತು. ಆದರೆ ಬೆಂಗಳೂರಿನ ಯುವತಿ ಬಂದಿದ್ದರಿಂದ ಕೆಲಹೊತ್ತು ರಂಪಾಟ ನಡೆಯುವಂತಾಗಿತ್ತು. ಆದರೆ ಅಷ್ಟರಲ್ಲಿ ಉಳ್ಳಾಲ ಪೊಲೀಸರು ಬಂದಿದ್ದು, ಯುವತಿಯನ್ನು ಮದುವೆ ಮಂಟಪಕ್ಕೆ ತೆರಳಲು ಬಿಡಲಿಲ್ಲ. ಕೇರಳದಲ್ಲಿ ಕೇಸ್ ಇರುವುದರಿಂದ ಅಲ್ಲಿಯೇ ಹೋಗಿ ನ್ಯಾಯ ಕೇಳುವಂತೆ ಪೊಲೀಸರು ತಿಳಿಸಿದ್ದರಿಂದ ಆಕೆ ಮಂಜೇಶ್ವರ ಠಾಣೆಗೂ ತೆರಳಿ ದೂರು ನೀಡಿದ್ದಾಳೆ. ಇತ್ತ ಅಕ್ಷಯ್ ಹೊಸ ವಧುವಿನ ಜೊತೆಗೆ ಮದುವೆಯಾಗಿ ಕೇರಳದತ್ತ ಪ್ರಯಾಣ ಬೆಳೆಸಿದ್ದಾನೆ.
ಅಕ್ಷಯ್ ಡ್ರಗ್ಗಿಸ್ಟ್, ಮೋಸಗಾರನಾಗಿದ್ದು ಆತನ ಮೇಲೆ ಹಲವಾರು ಕೇಸುಗಳಿದ್ದು, ಪೊಲೀಸರು ಕೂಡಲೇ ಬಂಧಿಸಬೇಕು. ಆತನ ಬೇರೆ ಮದುವೆ ವಿಚಾರದ ಬಗ್ಗೆ ನನಗೆ ಚಿಂತೆಯಿಲ್ಲ. ನನಗೆ ವಂಚನೆ ಮಾಡಿದ್ದಾನೆ ಎಂದು ಯುವತಿ ಹೇಳಿದರೂ ಉಳ್ಳಾಲ ಪೊಲೀಸರು ಅರೆಸ್ಟ್ ವಾರೆಂಟ್ ಇದ್ದರೆ ತಂದುಕೊಡುವಂತೆ ತಿಳಿಸಿದ್ದಾರೆ. ಮೋಸಕ್ಕೊಳಗಾದ ಯುವತಿ ತನಗೆ ಹಲ್ಲೆ ನಡೆಸಿರುವ ಫೋಟೋ ತೋರಿಸಿ ಮಾಧ್ಯಮದ ಮುಂದೆ ನ್ಯಾಯ ಕೇಳಿದ್ದಾಳೆ.
Mangalore Kotekar lover girl tries to stop Marriage of boyfriend, police arrive at spot. The girl is said to be from Bangalore and youth is from kerala.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm