ಬ್ರೇಕಿಂಗ್ ನ್ಯೂಸ್
20-11-20 10:30 am Mangalore Correspondent ಕ್ರೈಂ
ಮಂಗಳೂರು, ನ.20 : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರ ಕುತ್ತಿಗೆಯಿಂದ 2.34 ಲಕ್ಷ ರೂ. ಮೌಲ್ಯದ ಚಿನ್ನದ ಸರ ಎಗರಿಸಿದ ಘಟನೆ ನಡೆದಿದ್ದು, ಕಾವೂರು ಹಾಗು ಕದ್ರಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ರಶ್ಮಿ ಎಂಬವರು ಕೆಲಸ ಮುಗಿಸಿ ಪಂಜಿಮೊಗರಿನ ಉರುಂದಾಡಿಗುಡ್ಡೆಯಲ್ಲಿರುವ ಮನೆ ಕಡೆಗೆ ಹೋಗುತ್ತಿದ್ದಾಗ ರಾಘವೇಂದ್ರ ಮಠದ ಹತ್ತಿರ ಅಪರಿಚಿತನೊಬ್ಬ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾನೆ ಎನ್ನಲಾಗಿದೆ.
ಭಯಗೊಂಡು ರಶ್ಮಿ ತನ್ನ ತಾಯಿಗೆ ಕರೆ ಮಾಡಿದ್ದು, ಅಷ್ಟರಲ್ಲಿ ಆ ವ್ಯಕ್ತಿಯು ಹಿಂದುಗಡೆಯಿಂದ ಬಂದು ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದಿದ್ದಾನೆ. ಚಿನ್ನದ ಕರಿಮಣಿ ಸರವು ಸುಮಾರು 22 ಗ್ರಾಂ ಇದ್ದು ಅದರ ಅಂದಾಜು ಮೌಲ್ಯ 80,000 ರೂ. ಆಗಿರಬಹುದು. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗೀತಾ ಎಂಬವರು ಕದ್ರಿಯಲ್ಲಿರುವ ಸಂಬಂಧಿಕರ ಮನೆಯಿಂದ ಬುಧವಾರ ಸಂಜೆ ತನ್ನ ಮನೆಗೆ ವ್ಯಾಸನಗರದಲ್ಲಿರುವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬೈಕ್ ನಿಲ್ಲಿಸಿ ರಿಪೇರಿ ಮಾಡುವಂತೆ ನಟಿಸುತ್ತಿದ್ದ. ಆತನನ್ನು ದಾಟಿ ಮುಂದೆ ಹೋದ ನಂತರ ಆತನು ಹಿಂದಿನಿಂದ ಬಂದು ಕುತ್ತಿಗೆಯಲ್ಲಿದ್ದ ಸುಮಾರು 54,000 ರೂ. ಮೌಲ್ಯದ 13 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಮತ್ತು ಸುಮಾರು 1 ಲಕ್ಷ ರೂ. ಮೌಲ್ಯದ 26 ಗ್ರಾಂ ತೂಕದ ಸರ ಸಹಿತ 1,54,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಕಿತ್ತುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two women have reported chain snatching case of about 2.34 lakhs Kadri police station in Mangalore.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm