ಬ್ರೇಕಿಂಗ್ ನ್ಯೂಸ್
20-11-20 10:30 am Mangalore Correspondent ಕ್ರೈಂ
ಮಂಗಳೂರು, ನ.20 : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರ ಕುತ್ತಿಗೆಯಿಂದ 2.34 ಲಕ್ಷ ರೂ. ಮೌಲ್ಯದ ಚಿನ್ನದ ಸರ ಎಗರಿಸಿದ ಘಟನೆ ನಡೆದಿದ್ದು, ಕಾವೂರು ಹಾಗು ಕದ್ರಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ರಶ್ಮಿ ಎಂಬವರು ಕೆಲಸ ಮುಗಿಸಿ ಪಂಜಿಮೊಗರಿನ ಉರುಂದಾಡಿಗುಡ್ಡೆಯಲ್ಲಿರುವ ಮನೆ ಕಡೆಗೆ ಹೋಗುತ್ತಿದ್ದಾಗ ರಾಘವೇಂದ್ರ ಮಠದ ಹತ್ತಿರ ಅಪರಿಚಿತನೊಬ್ಬ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾನೆ ಎನ್ನಲಾಗಿದೆ.
ಭಯಗೊಂಡು ರಶ್ಮಿ ತನ್ನ ತಾಯಿಗೆ ಕರೆ ಮಾಡಿದ್ದು, ಅಷ್ಟರಲ್ಲಿ ಆ ವ್ಯಕ್ತಿಯು ಹಿಂದುಗಡೆಯಿಂದ ಬಂದು ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದಿದ್ದಾನೆ. ಚಿನ್ನದ ಕರಿಮಣಿ ಸರವು ಸುಮಾರು 22 ಗ್ರಾಂ ಇದ್ದು ಅದರ ಅಂದಾಜು ಮೌಲ್ಯ 80,000 ರೂ. ಆಗಿರಬಹುದು. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗೀತಾ ಎಂಬವರು ಕದ್ರಿಯಲ್ಲಿರುವ ಸಂಬಂಧಿಕರ ಮನೆಯಿಂದ ಬುಧವಾರ ಸಂಜೆ ತನ್ನ ಮನೆಗೆ ವ್ಯಾಸನಗರದಲ್ಲಿರುವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬೈಕ್ ನಿಲ್ಲಿಸಿ ರಿಪೇರಿ ಮಾಡುವಂತೆ ನಟಿಸುತ್ತಿದ್ದ. ಆತನನ್ನು ದಾಟಿ ಮುಂದೆ ಹೋದ ನಂತರ ಆತನು ಹಿಂದಿನಿಂದ ಬಂದು ಕುತ್ತಿಗೆಯಲ್ಲಿದ್ದ ಸುಮಾರು 54,000 ರೂ. ಮೌಲ್ಯದ 13 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಮತ್ತು ಸುಮಾರು 1 ಲಕ್ಷ ರೂ. ಮೌಲ್ಯದ 26 ಗ್ರಾಂ ತೂಕದ ಸರ ಸಹಿತ 1,54,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಕಿತ್ತುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two women have reported chain snatching case of about 2.34 lakhs Kadri police station in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm