ಬ್ರೇಕಿಂಗ್ ನ್ಯೂಸ್
08-01-24 07:44 pm Mangalore Correspondent ಕ್ರೈಂ
ಮಂಗಳೂರು, ಜ.8: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಆಯುಕ್ತರ ಮೇಲೆ ಲೈಂಗಿಕ ಕಿರುಕುಳ ಆರೋಪ ಹೊರಿಸಿದ ಪ್ರಕರಣದಲ್ಲಿ ಸ್ವತಃ ಮೂಡಾ ಕಮಿಷನರ್ ಮನ್ಸೂರ್ ಆಲಿ ಉರ್ವಾ ಠಾಣೆಗೆ ಹಾಜರಾಗಿ ಇನ್ಸ್ ಪೆಕ್ಟರ್ ಭಾರತಿ ಮುಂದೆ ತನ್ನ ಹೇಳಿಕೆಯನ್ನು ನೀಡಿದ್ದಾರೆ.
ಪೊಲೀಸ್ ಠಾಣೆಗೆ ಹಾಜರಾದ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ಮನ್ಸೂರ್ ಆಲಿ, ಡಿ.27ರಂದು ಮೂಡಾ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯ ಕುರಿತ ನಡಾವಳಿ ಬಗ್ಗೆ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನಡೆಸುತ್ತಿರುವ ಮಹಿಳೆಗೆ ಸೂಚಿಸಿದ್ದೆ. ನೂರು ಪುಟಗಳಿಗೂ ಹೆಚ್ಚು ಇದ್ದ ವರದಿಯನ್ನು ತಪ್ಪು ತಪ್ಪಾಗಿ ಮಾಡಿಕೊಟ್ಟಿದ್ದರು. ತಪ್ಪಾಗಿ ವರದಿ ಕೊಟ್ಟ ಬಗ್ಗೆ ಅಷ್ಟು ಉದ್ದ ವರದಿ ಬರೆಯಲು ತನ್ನಿಂದ ಸಾಧ್ಯವಿಲ್ಲ ಎಂದಿದ್ದರು. ಸರಿಯಾಗಿ ಕೆಲಸ ಮಾಡೋದಿದ್ದರೆ ಇಲ್ಲಿರಿ, ಇಲ್ಲಾಂದ್ರೆ ಬೇರೆಯವರು ಕೆಲಸ ಮಾಡುತ್ತಾರೆ ಎಂದು ಹೇಳಿದ್ದೆ.
ಮರುದಿನ ಅವರ ಬದಲು ಬೇರೆ ಸಿಬಂದಿಯನ್ನು ಕೆಲಸಕ್ಕೆ ನೇಮಿಸುವಂತೆ ಗುತ್ತಿಗೆ ಏಜನ್ಸಿಗೆ ತಿಳಿಸಿದ್ದೆ. ಆದರೆ ಅದೇ ನೆಪದಲ್ಲಿ ತನ್ನನ್ನು ಕೆಲಸದಿಂದ ತೆಗೆದು ಹಾಕುತ್ತಾರೆಂಬ ಭಯ ಮತ್ತು ನನ್ನ ಮೇಲಿನ ಹಗೆತನದಲ್ಲಿ ಈ ರೀತಿ ದೂರು ಕೊಟ್ಟಿದ್ದಾರೆ. ತನಿಖಾಧಿಕಾರಿ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದೇನೆ. ಆ ಮಹಿಳೆ ಕೂಡ ಈ ರೀತಿ ಮಾಡಬಾರದಿತ್ತು, ತನ್ನಿಂದ ತಪ್ಪಾಗಿದೆ ಎಂದಿದ್ದಾರೆ. ಈಗ ಕಚೇರಿಗೆ ಬರುತ್ತಿದ್ದಾರೆ. ತನಿಖಾಧಿಕಾರಿ ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಸುಳ್ಳು ದೂರು ನೀಡಿರುವ ಬಗ್ಗೆ ಮಹಿಳೆ ವಿರುದ್ಧ ಕ್ರಮ ಕೈಗೊಳ್ತೀರಾ ಎಂದು ಕೇಳಿದ ಬಗ್ಗೆ ಈ ವಿಷಯವನ್ನು ಮೇಲಧಿಕಾರಿಗಳಿಗೆ ತಿಳಿಸಿದ್ದೇನೆ. ಏನು ಕ್ರಮ ಆಗಬೇಕೋ ಅವರು ಮಾಡಲಿದ್ದಾರೆ. ವಿಚಾರಣೆ ಹಂತದಲ್ಲಿರುವಾಗ ಈ ಬಗ್ಗೆ ಹೆಚ್ಚೇನು ಹೇಳಲು ಹೋಗುವುದಿಲ್ಲ ಎಂದಿದ್ದಾರೆ. ಮಹಿಳೆ ತನ್ನನ್ನು ಸಂಜೆ ಹೊತ್ತು ಚೇಂಬರಿಗೆ ಕರೆದು ಮೈ ಕೈ ಮುಟ್ಟಿ ಕಿರುಕುಳ ನೀಡುತ್ತಿದ್ದಾರೆ, ರಾತ್ರಿ ವರೆಗೂ ಕೆಲಸಕ್ಕಾಗಿ ನಿಲ್ಲಿಸುತ್ತಾರೆ, ಆಮೂಲಕ ಲೈಂಗಿಕ ಮತ್ತು ಮಾನಸಿಕ ಕಿರುಕುಳ ಆಗಿದೆ ಎಂದು ದೂರಿನಲ್ಲಿ ತಿಳಿಸಿದ್ದರು.
Mangalore Muda Commissioner Mansoor Ali alleged of sexual harrasment, says its revenge plan. Work pressure revenge has been turned into sexual harrasment which is wrong said Mansoor Ali speaking to media.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am