ಬ್ರೇಕಿಂಗ್ ನ್ಯೂಸ್
10-01-24 10:16 pm Bangalore Correspondent ಕ್ರೈಂ
ಬೆಂಗಳೂರು, ಜ.10: ಹೊಸ ವರ್ಷದ ಪಾರ್ಟಿಗೆಂದು ವ್ಯಕ್ತಿಯೊಬ್ಬನನ್ನು ಅಪಹರಿಸಿ ಆತನಿಂದ 5 ಲಕ್ಷ ರೂ. ಕಿತ್ತುಕೊಂಡಿದ್ದಲ್ಲದೆ, ಹಾಗೇ ಬಿಟ್ಟು ಕಳಿಸಿದರೆ ಅಪಾಯ ಎಂದುಕೊಂಡು ಕಾರಿನಲ್ಲಿ ಸುತ್ತಾಡುತ್ತಲೇ ಕೊಲೆಗೈದು ಕಾಡಿನಲ್ಲಿ ಎಸೆದು ಹೋದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಮಸಂದ್ರ ಗಾಯತ್ರಿ ಲೇಔಟ್ನ ಸಂಜಯ್ (25), ಮಂಗನಹಳ್ಳಿ ಕ್ರಾಸ್ ಎಸ್.ಎಂ.ವಿ ಲೇಔಟ್ 5ನೇ ಬ್ಲಾಕ್ ನಿವಾಸಿ ಆನಂದ ಹಾಗೂ ನಾಗದೇವಹಳ್ಳಿ ನಿವಾಸಿ ಹನುಮಂತು ಎಂಬ ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ.
ಮೊದಲಿಗೆ ಕಿಶನ್ ಕುಮಾರ್ ಎಂಬ ಯುವಕನನ್ನು ಅಪಹರಿಸಿ ಹತ್ತು ಸಾವಿರ ಹಣಕ್ಕಾಗಿ ಪೀಡಿಸಿದ್ದರು. ಆತ ಉಪಾಯದಿಂದ ತಪ್ಪಿಸಿಕೊಂಡ ಬಳಿಕ ತಮ್ಮ ಪರಿಚಯದ ಸೇಲ್ಸ್ ಎಕ್ಸಿಕ್ಯುಟಿವ್ ಆಗಿದ್ದ ಗುರುಸಿದ್ದಪ್ಪ ಎಂಬಾತನನ್ನು ಡಿ.30ರಂದು ಕಿಡ್ನಾಪ್ ಮಾಡಿದ್ದರು. ನಂತರ, ಆತನ ಪತ್ನಿಗೆ ಕರೆ ಮಾಡಿಸಿ 5 ಲಕ್ಷ ರೂ. ಪೀಕಿಸಿದ್ದಾರೆ. ಆತನಿಂದ ಹಣ ಪಡೆದರೂ, ಆತನನ್ನು ಬಿಟ್ಟು ಕಳುಹಿಸದೇ ಕಾರಿನಲ್ಲಿ ಕೂರಿಸಿ ಮಂಚಿನಬೆಲೆ ಡ್ಯಾಮ್ ಬಳಿ ಸುತ್ತಾಡಿದ್ದಾರೆ. ಅಲ್ಲಿನ ಅರಣ್ಯ ಪ್ರದೇಶದಲ್ಲಿ ಪಾರ್ಟಿ ಮಾಡಿದ್ದ ಗ್ಯಾಂಗ್, ಡಿಸೆಂಬರ್ 31ರ ರಾತ್ರಿ ಪಾರ್ಟಿ ಮಾಡಿ ಗುರು ಸಿದ್ದಪ್ಪನನ್ನು ಬಿಟ್ಟು ಕಳಿಸುವುದಾಗಿ ಹೇಳಿದ್ದರು. ಆದ್ರೆ ಇವನನ್ನು ಬಿಟ್ರೆ ಪೊಲೀಸರಿಗೆ ಹೇಳುತ್ತಾನೆ ಎಂದು ಕೊಲೆ ಮಾಡಿದ್ದಾರೆ. ಗುರುಸಿದ್ದಪ್ಪನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ, ಶವವನ್ನು ಕಾಡಿನಲ್ಲಿಯೇ ಬಿಸಾಕಿ, ಅಲ್ಲಿಂದ ಹೊಸ ವರ್ಷ ಆಚರಣೆಗೆ ಗೋವಾಕ್ಕೆ ತೆರಳಿ ಪಾರ್ಟಿ ಮಾಡಿದ್ದಾರೆ.
ಈ ನಡುವೆ ಗುರುಸಿದ್ದಪ್ಪ ಪತ್ನಿ ತನ್ನ ಗಂಡ ಹಣ ಪಡೆದುಕೊಂಡು ಹೋದವರು ಮನೆಗೆ ಬಂದಿಲ್ಲ ಎಂದು ಪೊಲೀಸರಿಗೆ ದೂರು ನೀಡಿದ್ದರು. ವಿಚಾರಣೆ ವೇಳೆ ಗುರುಸಿದ್ದಪ್ಪ ಕೊಲೆ ಆಗಿರುವುದು ಪತ್ತೆಯಾಗಿತ್ತು. ಇತ್ತ ಮಂಚಿನಬೆಲೆ ಬಳಿಯ ಅರಣ್ಯ ಪ್ರದೇಶದಲ್ಲಿ ಅರೆಬರೆ ತಿಂದು ಉಳಿದಿದ್ದ ಶವದ ಕುರುಹು ಪತ್ತೆಯಾಗಿದೆ. ಶವವನ್ನು ಕಾಡು ಪ್ರಾಣಿಗಳು ತಿಂದಿದ್ದವು. ತಲೆ ಬುರುಡೆ, ಎಲುಬಿನ ಭಾಗಗಳು ಸಿಕ್ಕಿದ್ದು ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
Young man brutally murdered by drunk friends during New Year celebrations in Bengalore. A horrifying incident unfolded on Hanumanta Nagar's 80-foot Road in Bengaluru. The jubilant atmosphere of the night was shattered by a gruesome murder that occurred around 1 am, sending shockwaves through the community.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 09:04 pm
HK News Staffer
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm